ಕಾರವಾರ: ಇಲ್ಲಿನ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ನಡೆಯುತ್ತಿರುವ ಕರಾವಳಿ ಉತ್ಸವದಲ್ಲಿ ಬಾಲಿವುಡ್ ಖ್ಯಾತ ಗಾಯಕ ಸೋನು ನಿಗಮ್ ತಮ್ಮ ಗಾಯನ ಮತ್ತು ಮಾತಿನ ಮೂಲಕ ಕನ್ನಡಿಗರ ಮನ ಗೆದ್ದಿದ್ದಾರೆ.
ಈ ಹಿಂದೆ ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ನಡೆದಿದ್ದ ಘಟನೆಯನ್ನು ಪೆಹಲ್ಗಾಮ್ ದಾಳಿಗೆ ಹೋಲಿಸಿ ವಿವಾದಕ್ಕೆ ಗುರಿಯಾಗಿದ್ದ ಸೋನು ನಿಗಮ್, ಈಗ ಉತ್ತರ ಕನ್ನಡ ಜಿಲ್ಲೆಯ ಮಣ್ಣಿನಲ್ಲಿ ಕನ್ನಡ ಹಾಡುಗಳನ್ನು ಹಾಡುವ ಮೂಲಕವೇ ಆ ಕಹಿ ಘಟನೆಯನ್ನು ಮರೆಸಿ ಅಭಿಮಾನಿಗಳ ಪ್ರೀತಿಯನ್ನು ಮತ್ತೆ ಸಂಪಾದಿಸಿದರು.
ನೀಡಿದ್ದ ಹೇಳಿಕೆಯಿಂದ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದ ಸೋನು ನಿಗಮ್, ಈಗ ಉತ್ತರ ಕನ್ನಡದ ಮಣ್ಣಿನಲ್ಲಿ ಪರೋಕ್ಷವಾಗಿ ಕ್ಷಮೆ ಕೋರುವ ಮೂಲಕ ವಿವಾದಕ್ಕೆ ಪೂರ್ಣವಿರಾಮ ಇಟ್ಟಿದ್ದಾರೆ.

ವೇದಿಕೆಯಲ್ಲಿ ಮಾತನಾಡಿದ ಅವರು, “ನಾನು ಹಿಂದಿ ಭಾಷಿಕನಾದರೂ, ಈ ಹಿಂದಿನ ಜನ್ಮದಲ್ಲಿ ಕನ್ನಡಿಗನಾಗಿದ್ದೆ ಅನಿಸುತ್ತದೆ. ಅದಕ್ಕೇ ಕನ್ನಡ ಸಾಹಿತ್ಯಕ್ಕೆ ತಕ್ಕಂತೆ ಭಾವನೆಯೂ ಮೂಡುತ್ತದೆ. ಕಳೆದ 30 ವರ್ಷಗಳಿಂದ ನಾನು ಕನ್ನಡ ಹಾಡುಗಳನ್ನು ಹಾಡುತ್ತಿದ್ದೇನೆ” ಎಂದು ಭಾವುಕರಾಗಿ ಹೇಳಿದರು.
ಈ ಮೂಲಕ ಕನ್ನಡದ ಮೇಲಿನ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದರು. ಈ ಮಾತುಗಳು ಇತ್ತೀಚಿನ ಕೆಲವು ವಿವಾದಗಳಿಗೆ ಪರೋಕ್ಷವಾಗಿ ಕ್ಷಮೆ ಕೋರಿದಂತಿತ್ತು ಮತ್ತು ನೆರೆದಿದ್ದ ಜನರು ಈ ಮಾತುಗಳನ್ನು ಕೇಳುತ್ತಿದ್ದಂತೆ ಜೋರಾಗಿ ಚಪ್ಪಾಳೆ ತಟ್ಟಿದರು.
ಈ ಸುದ್ದಿ ಓದಿದ್ದೀರಾ? ಭಟ್ಕಳ | ಕರ್ತವ್ಯ ಲೋಪ ಆರೋಪ: ಗ್ರಾಮೀಣ ಠಾಣೆಯ ಸಿಪಿಐ ಹಾಗೂ ಹೆಡ್ ಕಾನ್ಸ್ಟೇಬಲ್ ಅಮಾನತು!
ಕೇವಲ ಮಾತಿಗಷ್ಟೇ ಸೀಮಿತವಾಗದ ಸೋನು ನಿಗಮ್, ವೇದಿಕೆಯ ಮೇಲೆ ಸತತ ಒಂದು ಗಂಟೆಗೂ ಹೆಚ್ಚು ಕಾಲ ಕೇವಲ ಕನ್ನಡ ಹಾಡುಗಳನ್ನೇ ಹಾಡಿದರು. ಸುಮಾರು 10ಕ್ಕೂ ಹೆಚ್ಚು ಜನಪ್ರಿಯ ಕನ್ನಡ ಗೀತೆಗಳನ್ನು ನಿರಂತರವಾಗಿ ಹಾಡುವ ಮೂಲಕ ಸಂಗೀತ ಪ್ರೇಮಿಗಳನ್ನು ರಂಜಿಸಿದರು.





