ಕಾರವಾರ | ಕರಾವಳಿ ಉತ್ಸವದಲ್ಲಿ ಸೋನು ನಿಗಮ್ ಭಾವುಕ: ಹಳೆಯ ವಿವಾದಕ್ಕೆ ಪರೋಕ್ಷವಾಗಿ ಕ್ಷಮೆ ಕೋರಿದ ಗಾಯಕ

Date:

ಕಾರವಾರ: ಇಲ್ಲಿನ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ನಡೆಯುತ್ತಿರುವ ಕರಾವಳಿ ಉತ್ಸವದಲ್ಲಿ ಬಾಲಿವುಡ್ ಖ್ಯಾತ ಗಾಯಕ ಸೋನು ನಿಗಮ್ ತಮ್ಮ ಗಾಯನ ಮತ್ತು ಮಾತಿನ ಮೂಲಕ ಕನ್ನಡಿಗರ ಮನ ಗೆದ್ದಿದ್ದಾರೆ.

ಈ ಹಿಂದೆ ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ನಡೆದಿದ್ದ ಘಟನೆಯನ್ನು ಪೆಹಲ್ಗಾಮ್ ದಾಳಿಗೆ ಹೋಲಿಸಿ ವಿವಾದಕ್ಕೆ ಗುರಿಯಾಗಿದ್ದ ಸೋನು ನಿಗಮ್, ಈಗ ಉತ್ತರ ಕನ್ನಡ ಜಿಲ್ಲೆಯ ಮಣ್ಣಿನಲ್ಲಿ ಕನ್ನಡ ಹಾಡುಗಳನ್ನು ಹಾಡುವ ಮೂಲಕವೇ ಆ ಕಹಿ ಘಟನೆಯನ್ನು ಮರೆಸಿ ಅಭಿಮಾನಿಗಳ ಪ್ರೀತಿಯನ್ನು ಮತ್ತೆ ಸಂಪಾದಿಸಿದರು.

ನೀಡಿದ್ದ ಹೇಳಿಕೆಯಿಂದ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದ ಸೋನು ನಿಗಮ್, ಈಗ ಉತ್ತರ ಕನ್ನಡದ ಮಣ್ಣಿನಲ್ಲಿ ಪರೋಕ್ಷವಾಗಿ ಕ್ಷಮೆ ಕೋರುವ ಮೂಲಕ ವಿವಾದಕ್ಕೆ ಪೂರ್ಣವಿರಾಮ ಇಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000397241

ವೇದಿಕೆಯಲ್ಲಿ ಮಾತನಾಡಿದ ಅವರು, “ನಾನು ಹಿಂದಿ ಭಾಷಿಕನಾದರೂ, ಈ ಹಿಂದಿನ ಜನ್ಮದಲ್ಲಿ ಕನ್ನಡಿಗನಾಗಿದ್ದೆ ಅನಿಸುತ್ತದೆ. ಅದಕ್ಕೇ ಕನ್ನಡ ಸಾಹಿತ್ಯಕ್ಕೆ ತಕ್ಕಂತೆ ಭಾವನೆಯೂ ಮೂಡುತ್ತದೆ. ಕಳೆದ 30 ವರ್ಷಗಳಿಂದ ನಾನು ಕನ್ನಡ ಹಾಡುಗಳನ್ನು ಹಾಡುತ್ತಿದ್ದೇನೆ” ಎಂದು ಭಾವುಕರಾಗಿ ಹೇಳಿದರು.

ಈ ಮೂಲಕ ಕನ್ನಡದ ಮೇಲಿನ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದರು. ಈ ಮಾತುಗಳು ಇತ್ತೀಚಿನ ಕೆಲವು ವಿವಾದಗಳಿಗೆ ಪರೋಕ್ಷವಾಗಿ ಕ್ಷಮೆ ಕೋರಿದಂತಿತ್ತು ಮತ್ತು ನೆರೆದಿದ್ದ ಜನರು ಈ ಮಾತುಗಳನ್ನು ಕೇಳುತ್ತಿದ್ದಂತೆ ಜೋರಾಗಿ ಚಪ್ಪಾಳೆ ತಟ್ಟಿದರು.

ಈ ಸುದ್ದಿ ಓದಿದ್ದೀರಾ? ಭಟ್ಕಳ | ಕರ್ತವ್ಯ ಲೋಪ ಆರೋಪ: ಗ್ರಾಮೀಣ ಠಾಣೆಯ ಸಿಪಿಐ ಹಾಗೂ ಹೆಡ್ ಕಾನ್ಸ್‌ಟೇಬಲ್ ಅಮಾನತು!

ಕೇವಲ ಮಾತಿಗಷ್ಟೇ ಸೀಮಿತವಾಗದ ಸೋನು ನಿಗಮ್, ವೇದಿಕೆಯ ಮೇಲೆ ಸತತ ಒಂದು ಗಂಟೆಗೂ ಹೆಚ್ಚು ಕಾಲ ಕೇವಲ ಕನ್ನಡ ಹಾಡುಗಳನ್ನೇ ಹಾಡಿದರು. ಸುಮಾರು 10ಕ್ಕೂ ಹೆಚ್ಚು ಜನಪ್ರಿಯ ಕನ್ನಡ ಗೀತೆಗಳನ್ನು ನಿರಂತರವಾಗಿ ಹಾಡುವ ಮೂಲಕ ಸಂಗೀತ ಪ್ರೇಮಿಗಳನ್ನು ರಂಜಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...