ಕಾರವಾರ | ಟ್ಯಾಗೋರ್ ಕಡಲತೀರದಲ್ಲಿ ಮಹಿಳೆ ಶವ ಪತ್ತೆ: ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ!

Date:

ಕಾರವಾರ: ಇಲ್ಲಿನ ಪ್ರಸಿದ್ಧ ಪ್ರವಾಸಿ ತಾಣವಾದ ಟ್ಯಾಗೋರ್ ಕಡಲತೀರದಲ್ಲಿ ಅಪರಿಚಿತ ಮಹಿಳೆಯೊಬ್ಬರ ಶವ ಅತ್ಯಂತ ದಾರುಣ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇಡೀ ನಗರವೇ ಬೆಚ್ಚಿಬೀಳುವಂತಾಗಿದೆ. ಹಳೆ ಮೀನು ಮಾರುಕಟ್ಟೆ ಹಾಗೂ ನಗರಸಭೆ ಉದ್ಯಾನದ ನಡುವಿನ ನಿರ್ಜನ ಪ್ರದೇಶದಲ್ಲಿ ಈ ಕೃತ್ಯ ನಡೆದಿದ್ದು, ಸ್ಥಳೀಯರಲ್ಲಿ ತೀವ್ರ ಭೀತಿ ಮೂಡಿಸಿದೆ.

ಬೆಳಗಿನ ಜಾವ ಕಡಲತೀರದ ಕಡೆಗೆ ಹೋದ ಸ್ಥಳೀಯರು ಅನುಮಾನಾಸ್ಪದವಾಗಿ ಬಿದ್ದಿದ್ದ ಶವವನ್ನು ಕಂಡು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಕಾರವಾರ ನಗರ ಠಾಣೆಯ ಪೊಲೀಸರು ಮಹಜರು ನಡೆಸಿದ್ದು, ಮೃತ ಮಹಿಳೆ ಹೊರರಾಜ್ಯದವಳೆಂದು ಶಂಕಿಸಲಾಗಿದೆ. ಸದ್ಯಕ್ಕೆ ಮಹಿಳೆಯ ಗುರುತು ಪತ್ತೆಯಾಗಿಲ್ಲ ಎಂದು ಮಾಹಿತಿ ತಿಳಿದುಬಂದಿದೆ.

ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ. ಮಹಿಳೆಯ ದೇಹದ ಮೇಲೆ ತೀವ್ರ ಸ್ವರೂಪದ ಗಾಯದ ಗುರುತುಗಳು ಪತ್ತೆಯಾಗಿದ್ದು, ದುಷ್ಕರ್ಮಿಗಳು ಆಕೆಯನ್ನು ಕಟ್ಟಿ ಹಾಕಿ ಅತ್ಯಾಚಾರ ನಡೆಸಿ, ಬಳಿಕ ಬರ್ಬರವಾಗಿ ಹತ್ಯೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳದ ಭೀಕರತೆಯನ್ನು ಗಮನಿಸಿದರೆ ಇದು ವ್ಯವಸ್ಥಿತವಾಗಿ ನಡೆದ ಹತ್ಯೆಯಂತೆ ಮೇಲ್ನೋಟಕ್ಕೆ ಕಂಡುಬರುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಾರವಾರದ ಜಿಲ್ಲಾ ಆಸ್ಪತ್ರೆಗೆ (ಕಿಮ್ಸ್) ರವಾನಿಸಲಾಗಿದೆ. ವೈದ್ಯಕೀಯ ವರದಿ ಬಂದ ನಂತರವಷ್ಟೇ ಸಾವಿನ ನಿಖರ ಕಾರಣ ಹಾಗೂ ಹತ್ಯೆಯ ಹಿಂದಿನ ಅಸಲಿ ಸತ್ಯ ಹೊರಬರಲಿದೆ. ಜಿಲ್ಲಾ ಪೊಲೀಸ್ ತಂಡವು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಸ್ಥಳೀಯ ಸಿಸಿ ಟಿವಿ ದೃಶ್ಯಾವಳಿಗಳನ್ನು ಜಾಲಾಡುತ್ತಿದೆ.

ಈ ಸುದ್ದಿ ಓದಿದ್ದೀರಾ? ಶಿರಸಿ | ಹುಬ್ಬಳ್ಳಿ ‘ಮರ್ಯಾದಾ ಹತ್ಯೆ’ ಪ್ರಕರಣ; ಆರೋಪಿಗಳ ಮರಣ ದಂಡನೆಗೆ ಭೀಮಘರ್ಜನೆ ಆಗ್ರಹ

ವಿಶೇಷವೆಂದರೆ, ಕರಾವಳಿ ಉತ್ಸವ ನಡೆಯುವ ವೇದಿಕೆಯ ಕೆಲವೇ ಮೀಟರ್‌ಗಳ ಅಂತರದಲ್ಲಿ ಈ ಕೃತ್ಯ ನಡೆದಿದ್ದು, ಭದ್ರತೆ ಕುರಿತು ಹಲವು ಪ್ರಶ್ನೆಗಳನ್ನು ಎತ್ತಿದೆ. ಮೃತ ಮಹಿಳೆ ಹೊರರಾಜ್ಯದವಳೆಂಬ ಶಂಕೆ ಇರುವುದರಿಂದ ಆಕೆಯ ಮೂಲ ವಿಳಾಸ ಪತ್ತೆ ಹಚ್ಚಬೇಕಾಗಿದೆ.

ಅತ್ಯಾಚಾರ ನಡೆದಿದೆಯೇ ಅಥವಾ ಇಲ್ಲವೇ ಎಂಬ ಗೊಂದಲಕ್ಕೆ ವೈದ್ಯಕೀಯ ಮರಣೋತ್ತರ ಪರೀಕ್ಷಾ ವರದಿಯೇ ಅಂತಿಮ ಉತ್ತರ ಸಿಗಲಿದೆ. ಸದ್ಯ ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಂತಕರ ಪತ್ತೆಗಾಗಿ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...