ಉಡುಪಿ | ಜಮೀಯ್ಯತುಲ್‌ ಫಲಾಹ್‌ ನೂತನ ಅಧ್ಯಕ್ಷರಾಗಿ ಖತೀಬ್ ಅಬ್ದುಲ್ ರಶೀದ್ ಮಲ್ಪೆ ಆಯ್ಕೆ

Date:

ಜಮೀಯ್ಯತುಲ್ ಫಲಾಹ್ ಉಡುಪಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಖತೀಬ್ ಅಬ್ದುಲ್ ರಶೀದ್ ಮಲ್ಪೆ ಆಯ್ಕೆಯಾಗಿದ್ದಾರೆ. ಜಮೀಯ್ಯತುಲ್ ಫಲಾಹ್ ಉಡುಪಿ ತಾಲೂಕು ಘಟಕದ ಮಹಾ ಸಭೆಯು ಇತ್ತೀಚಗೆ ಸಂಸ್ಥೆಯ ಕಚೇರಿಯಲ್ಲಿ ನಡೆಯಿತು. ಕುಂದಾಪುರದ ಅಬ್ದುಲ್ ಸಲಾಂ ಚಿತ್ತೂರು ಮತ್ತು ಅಸ್ಲಾಂ ಹೈಕಾಡಿ ಈ ಸಭೆಯಲ್ಲಿ ಚುನಾವಣಾ ವೀಕ್ಷಕರಾಗಿ ಆಗಮಿಸಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಖತೀಬ್ ಅಬ್ದುಲ್ ರಶೀದ್ ಮಲ್ಪೆಯವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರುಗಳಾಗಿ ವಿ. ಎಸ್.ಉಮರ್ ಮತ್ತು ಮುಷಿರ್ ಶೇಖ್, ಕಾರ್ಯದರ್ಶಿಯಾಗಿ ಸಮೀರ್ ಮಹಮ್ಮದ್, ಜತೆ ಕಾರ್ಯದರ್ಶಿಯಾಗಿ ನಾಸಿರ್ ಯಾಕೂಬ್ ಕುಕ್ಕಿಕಟ್ಟೆ ಖಜಾಂಜಿ ಯಾಗಿ ನಝೀರ್ ನೇಜಾರ್, ಸಂಘಟನಾ ಕಾರ್ಯದರ್ಶಿಯಾಗಿ ಫಾಜಿಲ್ ಆದಿ ಉಡುಪಿ ಮತ್ತು ಪತ್ರಿಕಾ ಕಾರ್ಯದರ್ಶಿಯಾಗಿ ರಿಯಾಝ್ ಅಹಮದ್ ಕುಕ್ಕಿಕಟ್ಟೆ ಅವಿರೋಧವಾಗಿ ಆಯ್ಕೆಯಾದರು. ಸಭೆಯ ಅಧ್ಯಕ್ಷತೆಯನ್ನು ಸಮೀರ್ ಮಹಮ್ಮದ್ ವಹಿಸಿದ್ದರು. ಈ ಸಂದರ್ಭದಲ್ಲಿ 2025-27 ನೆ ಸಾಲಿಗೆ 21 ಜನ ಕಾರ್ಯಕಾರಿ ಸಮಿತಿಯ ಸದಸ್ಯರನ್ನು ಆಯ್ಕೆ ಮಾಡಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...