ಉಡುಪಿ | ಪ್ರವಾದಿಗಳು ಮಾನವರ ಹಿತಾಕಾಂಕ್ಷಿಗಳು ; ಆಲ್ಬನ್ ರೋಡ್ರಿಗಸ್

Date:

ಒಂದು ಸಮಾಜವು ಕೆಟ್ಟು ಹೋದ ಸಮಯದಲ್ಲಿ ಜನರ ಕಲ್ಯಾಣಕ್ಕಾಗಿ ದೇವನು ಆಯಾಯ ಕಾಲದಲ್ಲಿ ಮನುಷ್ಯರ ನಡುವಿನಿಂದಲೇ ಪ್ರವಾದಿಗಳನ್ನು ಸ್ರಷ್ಟಿಸುತ್ತಾನೆ. ಈ ಬಗ್ಗೆ ಬೈಬಲ್ ಮತ್ತು ಅದಕ್ಕಿಂತ ಮುಂಚೆ ಬಂದ ಧರ್ಮ ಗ್ರಂಥಗಳಲ್ಲಿ ತಿಳಿಸಲಾಗಿದೆ. ಅದರಂತೆ ಪ್ರವಾದಿ ಮುಹಮ್ಮದರೂ ಕೂಡಾ ದೇವನ ವತಿಯಿಂದ ಭೂಮಿಯ ಮೇಲೆ ನಿಯುಕ್ತಗೊಂಡ ಪ್ರವಾದಿ ಆಗಿರುತ್ತಾರೆ. ಅವರು ದೇವನ ಆದೇಶದಂತೆ ನಡೆದು ಬದುಕಿ ತೋರಿಸಿದರು ಎಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಕಾಪು ತಾಲೂಕು ಘಟಕ, ಹೋಟೆಲ್ ಕೆ. ಒನ್. ನಲ್ಲಿ ಹಮ್ಮಿಕೊಂಡ್ಡ ಪ್ರಸಕ್ತ ಪರಿಸ್ಥಿತಿ ಮತ್ತು ಪ್ರವಾದಿ ಸಂದೇಶ ಎಂಬ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಹೇಳಿದರು.

1007166880

ಇನ್ನೋರ್ವ ಮುಖ್ಯ ಅತಿಥಿಯಾಗಿ ಭಾಗವಹಿಸಿದ ನಿರ್ಮಲ್ ಕುಮಾರ್ ಹೆಗ್ಡೆಯವರು, ಈಗಿನ ಕಾಲಘಟ್ಟದಲ್ಲಿ ಪ್ರತಿಯೊಂದು ಜಾತಿ ಧರ್ಮದವರು, ತಮ್ಮ ತಮ್ಮ ನಿಲುವೇ ಸರಿ ಎನ್ನುತ್ತಾ ಒಂದು ಕಡೆ ಕೋಮುವಾದಕ್ಕೆ, ತಮ್ಮ ಜಾತಿ ವಾತ್ಸಲ್ಯಕ್ಕೆ ಮಹತ್ವ ಕೊಡುವ ಕಾರಣ, ಸಮಾಜದಲ್ಲಿ ಮಾನವೀಯತೆ, ಸೌಹಾರ್ಧತೆ ಕೆಡುತ್ತದೆ. ಆದ್ದರಿಂದ ನಾವು ಹೃದಯ ವೈಶಾಲ್ಯಾ ಮೆರೆತು ಅನೋನ್ಯತೆಯಿಂದ ಬದುಕಬೇಕು ಎಂದು ತಿಳಿಸಿದರು.

ಜಮಾ ಅತೆ ಇಸ್ಲಾಮೀ ಹಿಂದ್ ನ ಮಂಗಳೂರು ವಲಯ ಸಂಚಾಲಕರಾದ ಸಯೀದ್ ಇಸ್ಮಾಯಿಲ್ ರವರು ಮಾತಾಡುತ್ತಾ, ಪ್ರವಾದಿ ಮುಹಮ್ಮದ್ ಸ. ರವರು ಸಮಾಜದಲ್ಲಿ ಇರುವ ಬಡ್ಡಿ, ವ್ಯಭಿಚಾರ, ಮಧ್ಯಪಾನ, ಜೂಜಾಟ, ಮೋಸ, ವಂಚನೆ, ಅವ್ಯವಹಾರ ಮಿತವಿಲ್ಲದ ಬಹು ಪತ್ನಿತ್ವ ದ ಬಗ್ಗೆ ಕುರ್ ಆನ್ ನ ಆದೇಶದಂತೆ ಯಾವಾಗ ಧ್ವನಿ ಎಬ್ಬಿಸಿದರೋ, ಅಂದಿನಿಂದ ಪ್ರಾಮಾಣಿಕ ಮತ್ತು ಸತ್ಯವಂತ ಎಂಬ ಬಿರುದಾ0ಕಿತ ವ್ಯಕ್ತಿಯೆಂದು ನೋಡದೆ ಅರಬರು ಪ್ರವಾದಿಯನ್ನು ಮಕ್ಕಾ ತೊರೆಯುವಂತೆ ಮಾಡುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1007166859

ಆದರೆ ಅದೇ ಪ್ರವಾದಿ, ಜನರೊಂದಿಗೆ ಉತ್ತಮವಾಗಿ ವರ್ತಿಸಲು, ಮರ್ದಿತರಿಗೆ ನೆರವಾಗಲು, ವಿಧವೆಯರಿಗೆ ಆಶ್ರಯ ನೀಡಲು, ಜನರೊಂದಿಗೆ ಕರುಣೆ ತೋರಲು, ಮುಗುಳು ನಗೆಯೊಂದಿಗೆ ವರ್ತಿಸಲು , ಜನರೊಂದಿಗೆ ನ್ಯಾಯ ಪಾಲಿಸಲು ಬೋಧಿಸುತಿದ್ದರು. ಅವರು ಕೆಟ್ಟು ಹೋಗಿದ್ದ ಅರಬ್ ರಾಷ್ಟ್ರದಲ್ಲಿ 23 ವರ್ಷಗಳಷ್ಟು ಕಾಲ ಸದ್ಬೋಧನೆ ಮಾಡುತ್ತಾ, ಕೆಡುಕುಗಳನ್ನು ಒಳಿತುಗಳ ಮೂಲಕ ದೂರಿಕರಿಸುತ್ತಾ, ನ್ಯಾಯ ಪಾಲಿಸುತ್ತಾ, ಅನೋನ್ಯತೆಯಿಂದ, ಸಹೋದರತೆಯಿಂದ, ಸೌಹಾರ್ದಾತೆಯಿಂದ ಕೂಡಿದ ಸಮಾಜವನ್ನು ಕಟ್ಟುತ್ತಾರೆ. ಅವರ ಬೋಧನೆಯನ್ನು ಇಂದೂ ಜನರು ಪಾಲಿಸಿ ಅನುಸರಿಸಿದರೆ ನಮ್ಮಲ್ಲಿಯೂ ಕೂಡಾ ಅಂತಹ ವಾತಾವರಣವನ್ನು ನಿರ್ಮಿಸಬಹುದು ಎಂದು ಹೇಳಿದರು.

ಒಕ್ಕೂಟದ ಜಿಲ್ಲಾ ಅಧ್ಯಕ್ಷರು ಮುಹಮ್ಮದ್ ಮೌಲಾ ರವರು ಅಧ್ಯಕ್ಶೀಯ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ” ಭಾರತೀಯ ಸಮಾಜದಲ್ಲಿ ಪ್ರವಾದಿ ಮುಹಮ್ಮದರ (ಸ) ಆದರ್ಶದ ಔಚಿತ್ಯ’ ಮತ್ತು ಪ್ರವಾದಿ ಮುಹಮ್ಮದರನ್ನು (s) ಅರಿಯಿರಿ. ಎಂಬ ಪುಸ್ತಕ ಗಳನ್ನು ಬಿಡುಗಡೆ ಗೊಳಿಸಲಾಯಿತು.

1007166839

ಕಾರ್ಯಕ್ರಮವು ಮಾಸ್ಟರ್ ಮುಹಮ್ಮದ್ ರಾಯಿಫ್ ರವರ ಕುರ್ ಆನ್ ಪಠನದೊಂದಿಗೆ ಪ್ರಾರಂಭವಾಯಿತು.
ಕಾಪು ತಾಲೂಕು ಘಟಕದ ಅಧ್ಯಕ್ಷರು ನಸೀರ್ ಅಹಮದ್ ರವರು ಸ್ವಾಗತ ಭಾಷಣ ಮಾಡಿದರು.

ಒಕ್ಕೂಟದ ಜಿಲ್ಲಾ ಸಮಿತಿಯ ಸದಸ್ಯರು ಅನ್ವರ್ ಅಲಿ ಕಾಪು ಪ್ರಾಸ್ತವಿಕ ಭಾಷಣ ಮಾಡಿದರು. ಕೋಶಾಧಿಕಾರಿ ಬಿ. ಎಂ. ಮೊಯಿದಿನ್ ರವರು ಧನ್ಯವಾದ ನೀಡಿದರು. ವೇದಿಕೆಯಲ್ಲಿ ಜಿಲ್ಲಾ ಉಪಾಧ್ಯಕ್ಷರು ಜನಾಬ್ ಶಭಿಹ್ ಅಹಮದ್ ಕಾಝಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಹುಸೈನ್ ಕಟಪಾಡಿ, ಜಿಲ್ಲಾ ಕೋಶಾಧಿಕಾರಿ ಸಯ್ಯದ್ ಫರೀದ್ ಉಪಸ್ಥಿತರಿದ್ದರು. ತಾಲೂಕು ಕಾರ್ಯದರ್ಶಿ ಮುಹಮ್ಮದ್ ಇಕ್ಬಾಲ್ ರವರು ಕಾರ್ಯಕ್ರಮ ನಿರೂಪಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...