ಉಡುಪಿ | ಬೀಡಿ ಕಾರ್ಮಿಕರಿಗೆ ಕಡಿಮೆ ಕೂಲಿ ನಿಗದಿ ಮಾಡಿದ ಕರ್ನಾಟಕ ಸರಕಾರ

Date:

ರಾಜ್ಯದಲ್ಲಿರುವ ಸರಿ ಸುಮಾರು ಆರರಿಂದ ಏಳು ಲಕ್ಷ ಬೀಡಿ ಕಾರ್ಮಿಕರಿಗೆ ರಾಜ್ಯ ಸರಕಾರ ತೀವ್ರ ಅನ್ಯಾಯ ಮಾಡುತ್ತಿದೆ. ಈ ಹಿಂದೆ 2018 ರಲ್ಲಿ ಬೀಡಿ ಉದ್ಯಮದಲ್ಲಿನ ಕಾರ್ಮಿಕರಿಗೆ ಕನಿಷ್ಟ ವೇತನವನ್ನು ಕನಿಷ್ಟ ವೇತನ ಕಾಯಿದೆ ಕಲಂ 5/1 ಕಮಿಟಿ ಸರಕಾರ, ಬೀಡಿ ಮಾಲಕರು, ಕಾರ್ಮಿಕ ಸಂಘಗಳ ಪ್ರತಿನಿಧಿಗಳು. ಸರ್ಕಾರಿ ಅಧಿಕಾರಿಗಳಿಗೆ ಇದ್ದ ತ್ರೀಪಕ್ಷೀಯ ಸಮಿತಿಯೇ ನಿರ್ಣಯಿಸಿತ್ತು ಅದನ್ನು ಸರಕಾರ ತನ್ನ ನೀತಿಯ ಭಾಗವಾಗಿ ಸೇವಾ ಹಿರಿತನವನ್ನು ಒಳಗೊಂಡು ಅಧಿಸೂಚನೆ ಹೊರಡಿಸಿತ್ತು ಬೀಡಿ ಮಾಲಕರು ಸೇವಾ ಹಿರಿತನ ಸಮಿತಿಯಲ್ಲಿ ಚರ್ಚಿಸಿಲ್ಲ. ಹಾಗಾಗಿ ತಮಗೆ ಹೋರೆಯಾಗುತ್ತದೆ ಎಂದು ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯಕ್ಕೆ ಸರ್ಕಾರದದ ಆದೇಶವನ್ಮು ಪ್ರಶ್ನೆ ಮಾಡಿ ಅರ್ಜಿ ಸಲ್ಲಿಸಿತು 2018 ರಿಂದ 2024 ತನಕ 7 ವರ್ಷಗಳ ಕಾಲ ಸುಮ್ಮನೆ ಎಳೆದಾಡಿ ಬೀಡಿ ಕಾರ್ಮಿಕರಿಗೆ ಅಧಿಸೂಚಿತ ಕನಿಷ್ಟ ಕೂಲಿಯನ್ನು ಜಾರಿ ಮಾಡದೆ ಬಡ ಬೀಡಿ ಕಾರ್ಮಿಕರ ಸಂಕಷ್ಟವನ್ನು ಹೆಚ್ಚಿಸಿದ ಬೀಡಿ ಮಾಲಕರು ಏಕಾ ಏಕಿ 16.11.2024 ರಂದು ಅ ಅರ್ಜಿ ಹಿಂದಕ್ಕೆ ಪಡೆದಿದ್ದಾರೆ ಎಂದು ಅಖಿಲ ಭಾರತ ಫೆಡರೇಷನ್‌ ನ ಕೇಂದ್ರ ಸಮಿತಿ ಸದಸ್ಯರಾದ ಕವಿರಾಜ್. ಎಸ್.ಕಾಂಚನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನೊಂದು ಕಡೆ ಸರ್ಕಾರ ಜೊತೆಯಲ್ಲಿ ವ್ಯವಹಾರ ನಡೆಸಿ ತನ್ನ ಪರವಾಗಿ ಬೀಡಿ ಕಾರ್ಮಿಕರಿಗೆ ವಿರೋಧವಾಗಿ, ಸರಕಾರ ತನ್ನದೆ ಆದೇಶವನ್ನು ಹಿಂಪಡೆದು ತುಟ್ಟಿಭತ್ಯೆಯನ್ನು ಬೆಲೆ ಏರಿಕೆ ಆಧಾರದಲ್ಲಿ ಅಂಶ ಒಂದಕ್ಕೆ ನಾಲ್ಕು ಪೈಸೆ ಇದ್ದುದ್ದನ್ನು ಮೂರು ಪೈಸೆಗೆ ಇಳಿಸಿದೆ. ಸರ್ಕಾರದ ಈ ನಡೆ ನ್ಯಾಯೋಜಿತ ಅಲ್ಲ ಎಂದು ಸರ್ಕಾರದ ಈ ನಡೆಯನ್ನು ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ ಫೆಡರೇಷನ್‌ (ಸಿಐಟಿಯು) ಖಂಡಿಸುತ್ತದೆ ಎಂದು ಹೇಳಿದ್ದಾರೆ.

ಇದರ ಹಿಂದೆ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿರುವ ಅನುಮಾನವನ್ನು ವ್ಯಕ್ತವಾಗುತ್ತಿದ್ದು ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿಗಳು ಸಮಗ್ರ ತನಿಖೆಗೆ ಆದೇಶಿಸುವಂತೆ ಮತ್ತು ಹಿಂದಿನ ಅಧಿಸೂಚನೆಯನ್ನು ಹಿಂಪಡೆದಿರುವ ಆದೇಶವನ್ನು ವಜಾ ಮಾಡುವಂತೆ ಒತ್ತಾಯಿಸುತ್ತಿದ್ದೇವೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೀಡಿ ಕಾರ್ಮಿಕರ ಕನಿಷ್ಟ ಕೂಲಿಯ ವಿಚಾರದಲ್ಲಿ ಈ ಹಿಂದಿನಿಂದಲೂ ಬೀಡಿ ಕಂಪನಿಯು ಆಡಳಿತ ಮಂಡಳಿಗಳು ಸರ್ಕಾರಿ ಆದೇಶಗಳನ್ನು ನಿರಂತರವಾಗಿ ಉಲ್ಲಂಘಿಸುತ್ತಾ ಸರ್ಕಾರಕ್ಕೆ ಸವಾಲು ಒಡ್ಡುತ್ತ ಬಂದಿವೆ. ಇದನ್ನು ತಡೆದು ಬೀಡಿ ಕಾರ್ಮಿಕರಿಗೆ ನ್ಯಾಯ ಒದಗಿಸಲು ಸರ್ಕಾರಗಳು ವಿಫಲವಾಗಿದೆ ಎಂದು ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ ಫೆಡರೇಷನ್‌ (ಸಿಐಟಿಯು) ಆಪಾದಿಸಿದ್ದಾರೆ.

ರಾಜ್ಯದ ಕಾರ್ಮಿಕ ಸಚಿವರಾದ ಶ್ರೀ ಸಂತೋಷ ಲಾಡ್ ಅವರು ಕನಿಷ್ಟ ವೇತನ ನಿಗಧಿ ಪಡಿಸುವಾಗ ಗೌರವಾನ್ವಿತ ಸುಪ್ರೀಂ ಕೋರ್ಟ್ ನ ಮಾರ್ಗದರ್ಶಿ ಸೂತ್ರಗಳು ಮತ್ತು ರಪ್ತಕೋಸ್ ಬೆಟ್ಟ್ ಸೂತ್ರ ಅನುಸರಿಸಲಾಗುವುದೆ ಎಂದು ವೇದಿಕೆಗಳಲ್ಲಿ ಭಾಷಣ ಮಾಡುತ್ತಿದ್ದಾರೆ ಅದರೆ ಅಗತ್ಯ ವಸ್ತುಗಳ ಬೆಲೆಗಳು ಗಗನ ಮುಟ್ಟಿದೆ. ವಿದ್ಯುತ್ ಶಕ್ತಿ ದರ, ಹಾಲಿನದರ, ಬಸ್ ಪ್ರಯಾಣದರಗಳು ಆರೋಗ್ಯ ವೆಚ್ಚ, ಔಷಧೀಗಳ ದರ, ನಿರಂತರವಾಗಿ ಹೆಚ್ಚಳವಾಗುತ್ತಿರುವಾಗ ಅತಿ ಸಂಕಷ್ಟದಲ್ಲಿ ಇರುವ ಬೀಡಿ ಕಾರ್ಮಿಕರಿಗೆ ಕನಿಷ್ಟ ಕೂಲಿಯನ್ನು ಮೇಲ್ಮುಖ ಪರಿಷ್ಕರಣೆಗೆ ಒಳಪಡಿಸದೆ ಹಿಮ್ಮುಖ ವಾಗಿ ಅತ್ಯಂತ ಕನಿಷ್ಟ ಕೂಲಿ ನಿಗದಿ ಮಾಡಿರುವುದು ನಿಜಕ್ಕೂ ಖಂಡನಾರ್ಹ ಎಂದು ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ ಫೆಡರೇಷನ್‌ (ಸಿಐಟಿಯು) ಉಡುಪಿ ಅಭಿಪ್ರಾಯ ಪಟ್ಟಿದೆ ಈ ಆದೇಶವನ್ನು ಹಿಂಪಡೆದಿರುವುದನ್ನು ಸಿಐಟಿಯು ಒಪ್ಪುವುದಿಲ್ಲ ಬದಲಿಗೆ ನ್ಯಾಯಕ್ಕಾಗಿ ಒತ್ತಾಯಿಸಿ ಹೋರಾಟವನ್ನು ಮುಂದುವರಿಸುವುದು ಹಾಗೂ ಉಡುಪಿ ಜಿಲ್ಲೆಯ ಹಾಗೂ ದ.ಕ ಜಿಲ್ಲೆಯ ಅದರ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಸರಕಾರದ ವಿರುದ್ಧ ಸರಕಾರದ ಆದೇಶ ಪ್ರತಿಯನ್ನು ಸುಡುವ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...