ಕೋಲಾರ | ಸರ್ಕಾರ ನಿಗದಿತ ಗುರಿಗಿಂತ ಕೆಜಿಎಫ್ ಮುದ್ರಾಂಕ ಇಲಾಖೆ ಹೆಚ್ಚಿನ ಸಾಧನೆ

Date:

  • ಕೆಜಿಎಫ್ ಕಚೇರಿಗೆ ಭೇಟಿ ನೀಡಿದ್ದ ಇನ್ಸ್ಪೆಕ್ಟರ್-ಜನರಲ್ ಮಮತ
  • ಇಲಾಖೆಯ ಸಾಧನೆ ಬಗ್ಗೆ ಹರ್ಷ ವ್ಯಕ್ತಪಡಿಸಿದ ಅಧಿಕಾರಿಗಳು

ರಾಜ್ಯ ಸರ್ಕಾರವು ರಾಜ್ಯಾದ್ಯಂತ ಇರುವ ನೊಂದಣಿ ಮತ್ತು ಮುದ್ರಾಂಕ ಇಲಾಖೆಯ ಉಪನೊಂದಣಾಧಿಕಾರಿಗಳ ಕಚೇರಿಗಳಲ್ಲಿ 2022-23ನೇ ಸಾಲಿನಲ್ಲಿ 15 ಸಾವಿರ ಕೋಟಿ ರೂ. ವಹಿವಾಟು ನಡೆಸುವಂತೆ ನೀಡಿದ್ದ ಗುರಿಗಿಂತ ಹೆಚ್ಚಿನ ಸಾಧನೆಯನ್ನು ಕೆಜಿಎಫ್‌ ಕಚೇರಿಯು ಮಾಡಿದೆ ಎಂದು ಮುದ್ರಾಂಕ ಮತ್ತು ನೋಂದಣಿ ಇಲಾಖೆಯ ಇನ್ಸ್ಪೆಕ್ಟರ್-ಜನರಲ್ ಮಮತ ಹರ್ಷ ವ್ಯಕ್ತಪಡಿಸಿದ್ದಾರೆ.

ಕೆಜಿಎಫ್ ತಾಲೂಕು ಆಡಳಿತ ಸೌಧದಲ್ಲಿ ನೂತನವಾಗಿ ಪ್ರಾರಂಭವಾದ ಉಪ ನೊಂದಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಮಾತನಾಡಿ, “ಈ ಬಾರಿ 2023-24ನೇ ಸಾಲಿಗೆ 19 ಸಾವಿರ ಕೋಟಿ ರೂ. ಗುರಿ ನೀಡಿಲಾಗಿದೆ. ಈಗಾಗಲೇ 900 ಕೋಟಿ ರೂ. ವಹಿವಾಟು ನಡೆಸಿದ್ದು, ಇನ್ನೆರಡು ದಿನಗಳಲ್ಲಿ ಒಂದು ಸಾವಿರ ಕೋಟಿ ರೂ.ಗಳ ಗುರಿಯನ್ನು ಸಾಧಿಸಲಿದ್ದೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ಕಾವೇರಿ 2.0 ತಂತ್ರಾಂಶವು ಜನಸ್ನೇಹಿಯಾಗಿದ್ದು, ಸಾರ್ವಜನಿಕರು ತಮ್ಮ ದಸ್ತಾವೇಜುಗಳನ್ನು ತಾವೇ ಸಿದ್ದಪಡಿಸಿಕೊಂಡು ಸಿಟಿಜನ್ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡುವ ಮೂಲಕ ಮಧ್ಯವರ್ತಿಗಳ ಹಾವಳಿಯಿಲ್ಲದೇ ಸುಲಭವಾಗಿ ನೊಂದಣಿ ಮಾಡಿಕೊಳ್ಳಬಹುದಾಗಿದ್ದು, ಇಲ್ಲಿಯವರೆಗೆ ದಿನಕ್ಕೆ 40 ನೊಂದಣಿಗಳಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇದರ ಪ್ರಮಾಣ 80ಕ್ಕೆ ಏರಲಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ ಮಾರ್ಚ್‌ನಿಂದ ರಾಜ್ಯಾದ್ಯಂತ ಎಲ್ಲ ಉಪನೊಂದಣಾಧಿಕಾರಿಗಳ ಕಚೇರಿಗಳಲ್ಲಿ ಹಂತ ಹಂತವಾಗಿ ಕಾವೇರಿ 2.0 ತಂತ್ರಾಂಶವನ್ನು ಅಳವಡಿಸಲಾಗುತ್ತಿದೆ. ಏಕಕಾಲಕ್ಕೆ ಎಲ್ಲ ಕಡೆಗಳಲ್ಲಿ ನೂತನ ತಂತ್ರಾಂಶವನ್ನು ಅಳವಡಿಸಿದಲ್ಲಿ ಏನಾದರೂ ತಾಂತ್ರಿಕ ತೊಂದರೆಗಳು ಕಂಡುಬಂದಲ್ಲಿ ಸರಿಪಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲವಾದ್ದರಿಂದ ಹಂತ ಹಂತವಾಗಿ ಅಳವಡಿಸಲಾಗುತ್ತಿದೆ” ಎಂದರು.

“ಕಾವೇರಿ 2.0 ತಂತ್ರಾಂಶದಲ್ಲಿ ಸಾರ್ವಜನಿಕರೇ ತಮ್ಮ ದಸ್ತಾವೇಜುಗಳನ್ನು ಸಿದ್ದಪಡಿಸುವುದರಿಂದ ತಮ್ಮ ಆಸ್ತಿಗಳ ಮೌಲ್ಯವನ್ನು ತಿಳಿದುಕೊಳ್ಳಲು ಮತ್ತು ನೊಂದಣಿ ಪ್ರಕ್ರಿಯೆಯ ಬಗ್ಗೆ ತಿಳಿದುಕೊಳ್ಳಲು ಸಾಧ್ಯವಾಗುತ್ತದೆ. ಮುಖ್ಯವಾಗಿ ಚೇಂಜ್ ಮ್ಯಾನೇಜ್‌ಮೆಂಟ್ ತತ್ವದಡಿಯಲ್ಲಿ ಹಳೆಯ ಪದ್ಧತಿಯಿಂದ ಹೊಸ ಪದ್ಧತಿಗೆ ಹೊಂದಿಕೊಳ್ಳುವ ಸಮಯದಲ್ಲಿ ಎದುರಾಗುವಂತೆ ತೊಂದರೆಗಳನ್ನು ಸರಿಪಡಿಸಿಕೊಳ್ಳುವುದಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? : ಯಾದಗಿರಿ | ಮತದಾನದಿಂದ ವಂಚಿತರಾಗದಂತೆ ಕೂಲಿ ಕಾರ್ಮಿಕರಿಗೂ ವ್ಯವಸ್ಥೆ ಮಾಡಿ

“ಈ ಹೊಸ ತಂತ್ರಾಂಶವನ್ನು ಅಳವಡಿಸಿಕೊಳ್ಳುವುದಕ್ಕೆ ಕಳೆದ ಫೆಬ್ರುವರಿ ತಿಂಗಳಿನಿಂದ ಸಾರ್ವಜನಿಕರಿಗೆ ಸಾಕಷ್ಟು ತರಬೇತಿಗಳನ್ನು ಮತ್ತು ಹೊಸ ತಂತ್ರಾಂಶದ ಬಗ್ಗೆ ಪ್ರಾತ್ಯಕ್ಷಿಕೆಗಳನ್ನು ಪ್ರದರ್ಶಿಸಲಾಗುತ್ತಿದ್ದು, ಯಾವ ರೀತಿ ಇದನ್ನು ಉಪಯೋಗಿಸಬೇಕೆಂಬ ಬಗ್ಗೆ ತರಬೇತಿಗಳನ್ನು ನೀಡುತ್ತಾ ಬಂದಿದ್ದು, ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಉಪ ನೊಂದಣಾಧಿಕಾರಿಗಳಿಗೂ ಇದು ಹೊಸದಾಗಿದ್ದು, ಕಾಲ ಕ್ರಮೇಣ ಎಲ್ಲವೂ ಸರಿಯಾಗಲಿದೆ” ಎಂದರು.

“ನೂತನ ತಂತ್ರಾಂಶ ಅಳವಡಿಕೆಯಿಂದ ಯಾವುದೇ ರೀತಿಯ ನಗದು ವ್ಯವಹಾರ ಉಪ ನೊಂದಣಾಧಿಕಾರಿಗಳ ಕಚೇರಿಯಲ್ಲಿ ನಡೆಯುವುದಿಲ್ಲ. ಸಾರ್ವಜನಿಕರು ನೊಂದಣಿ ಪ್ರಕ್ರಿಯೆಯ ಬಗ್ಗೆ ಭಯ ಪಡುವ ಅಗತ್ಯವಿರುವುದಿಲ್ಲ. ಜೊತೆಗೆ ಆಸ್ತಿಗಳ ನೊಂದಣಿ ಶುಲ್ಕವನ್ನು ನೇರವಾಗಿ ಖಜಾನೆ-2 ಖಾತೆಗೆ ಜಮೆ ಮಾಡಬಹುದು” ಎಂದು ತಿಳಿಸಿದರು.

ಈ ವೇಳೆ ಜಿಲ್ಲಾ ನೊಂದಣಾಧಿಕಾರಿ ಶ್ರೀದೇವಿ, ಕೆಜಿಎಫ್ ಪ್ರಭಾರಿ ಉಪ ನೊಂದಣಾಧಿಕಾರಿ ಶಿವರಾಜ್, ಬಂಗಾರಪೇಟೆ ಉಪ ನೊಂದಣಾಧಿಕಾರಿ ಸುಮಲತ, ಶ್ರೀನಿವಾಸಪುರ ಉಪ ನೊಂದಣಾಧಿಕಾರಿ ಕವಿತಾ, ಮುಳಬಾಗಿಲು ಉಪ ನೊಂದಣಾಧಿಕಾರಿ ಬಯ್ಯಾರೆಡ್ಡಿ, ಸಿಬ್ಬಂದಿ ಮಂಜುನಾಥ್, ಮುರಳೀಧರ್, ಎಂಜಿನಿಯರ್‌ಗಳಾದ ದೇವರಾಜ್, ಸಂದೀಪ್, ಕಂಪ್ಯೂಟರ್ ಆಪರೇಟರ್‌ಗಳಾದ ಮಂಜುನಾಥ್, ಸುಶ್ಮಿತ, ರೋಜಾ ಸೇರಿದಂತೆ ಹಲವರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...