ಬೀದರ್‌ | ಡಿಸಿಸಿ ಬ್ಯಾಂಕ್‌ನಲ್ಲಿ ₹400 ಕೋಟಿ ಸಾಲ ಪಡೆದಿರುವ ಖಂಡ್ರೆ, ಬ್ಯಾಂಕ್ ಮುಳುಗಿಸಲು ಹೊರಟಿದ್ದಾರೆ: ಖೂಬಾ

Date:

  • ಎಮ್.ಜಿ.ಎಸ್.ಎಸ್.ಕೆ. ಸಕ್ಕರೆ ಕಾರ್ಖಾನೆ ಮೇಲೆ ಸುಮಾರು 400 ಕೋಟಿ ಸಾಲವಿದೆ.
  • ಡಿ.ಸಿ.ಸಿ. ಬಾಂಕ್ ಕಸಿದುಕೊಳ್ಳಲು ಖಂಡ್ರೆ ಹಲವಾರು ರೀತಿಯ ಹೊಂಚು ಹಾಕುತ್ತಿದ್ದಾರೆ.

ಡಿ.ಸಿ.ಸಿ. ಬ್ಯಾಂಕಿನಿಂದ 400 ಕೋಟಿ ಸಾಲ ಪಡೆದು, ಆ ಸಾಲ ತಿರಿಸದೆ, ಅದನ್ನು ಮುಳುಗಿಸಲು, ತಮ್ಮ ಸಹೋದರ ಅಮರ ಖಂಡ್ರೆಯವರನ್ನು ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷರನ್ನಾಗಿ ಮಾಡಲು ಎಲ್ಲ ಕಡೆ ಪ್ರಚಾರ ಮಾಡುತ್ತಿದ್ದಾರೆ. ಇದು ಖಂಡ್ರೆಯವರ ಭ್ರಷ್ಟಾಚಾರ ಮತ್ತು ಕೆಟ್ಟ ಸಂಸ್ಕೃತಿಯನ್ನು ಎತ್ತಿ ತೊರಿಸುತ್ತದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಸಚಿವ ಈಶ್ವರ ಖಂಡ್ರೆ ವಿರುದ್ಧ ಕಿಡಿಕಾರಿದ್ದಾರೆ.

“ತನ್ನ ಮೊಸರನ್ನು ಯಾರು ಹುಳಿಯೆನ್ನುವುದಿಲ್ಲ ಎನ್ನುವ ಮಾತಿನಂತೆ, ಈಶ್ವರ ಖಂಡ್ರೆಯವರು ಮತದಾರರಿಂದ
ಮತಪಡೆದು, ಅಧಿಕಾರವನ್ನು ವಹಿಸಿಕೊಂಡ ಮೇಲೆ ಅವರ ಭ್ರಷ್ಟಾಚಾರ, ದುರಾಡಳಿತ, ಸ್ವಜನಪಕ್ಷಪಾತ, ಒಲೈಕೆ
ರಾಜಕಾರಣವನ್ನು ಜನರ ಮಧ್ಯದಲ್ಲಿ ಬುಡಮೇಲು ಮಾಡುತ್ತಿದ್ದೇನೆ ಎಂದು ತಿಳಿದು, ದುಡಿದು ತಿನ್ನುತ್ತಿರುವ ನಮ್ಮ
ಕುಟುಂಬ ಸದಸ್ಯರನ್ನು ಅನಾವಶ್ಯಕವಾಗಿ ಎಳೆದು ತರುತ್ತಿದ್ದಾರೆ, ನಾನೆಂದು ನಮ್ಮ ಪರಿವಾರದವರನ್ನು ಇಂತಹ ವಿಷಯಗಳಲ್ಲಿ ಸಹಕರಿಸುವ ಕೆಲಸ ಮಾಡಿಲ್ಲ, ನಮ್ಮ ಕುಟುಂಬದವರು ಕೆಲಸ ಮಾಡಲು ಯೋಗ್ಯರಿದ್ದಾರೆ” ಎಂದು ಪತ್ರಿಕಾ ಹೇಳಿಕೆಯಲ್ಲಿ ಈಶ್ವರ ಖಂಡ್ರೆಯವರ ಆರೋಪಗಳಿಗೆ ಸಚಿವ ಖೂಬಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಜನಪ್ರತಿನಿಧಿಯಾದ ನಮ್ಮಿಂದ ಜನರು ಪಾರದರ್ಶಕತೆ ಅಪೇಕ್ಷಿಸುತ್ತಾರೆ, ಈ ದೃಷ್ಟಿಯಲ್ಲಿ ನಿಮ್ಮ ನೈತಿಕೆತೆ ಉಳಿದಿಲ್ಲ. ಕಳೆದ ಕೆಲವು ದಿನಗಳ ಹಿಂದೆ, ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಶಂಕರ ಪಾಟೀಲ್ ಮುನೇನಕೊಪ್ಪ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಭೆಯಲ್ಲಿ, ನಿಮ್ಮ ಕುಟುಂಬ ಸದಸ್ಯರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಎಮ್.ಜಿ.ಎಸ್.ಎಸ್.ಕೆ. ಸಕ್ಕರೆ ಕಾರ್ಖಾನೆ ಮೇಲೆ, ಸುಮಾರು 400 ಕೋಟಿ ಸಾಲವಿದೆ, ಅದು ಡಿ.ಸಿ.ಸಿ. ಬ್ಯಾಂಕಿನಿಂದ ತೆಗೆದುಕೊಳ್ಳಲಾಗಿದೆ ಎಂದು ಇದರ ಬಗ್ಗೆ ನಾನು ಪ್ರಶ್ನಿಸಿದಾಗ, ನನಗೂ ಎಮ್.ಜಿ.ಎಸ್.ಎಸ್.ಕೆ ಸಕ್ಕರೆ ಕಾರ್ಖಾನೆಗೂ ಹಾಗೂ ಅದರ ಅಧ್ಯಕ್ಷ ನನ್ನ ತಮ್ಮನಿಗೂ ಯಾವೂದೇ ಸಂಬಂಧವಿಲ್ಲವೆಂದು ತಿಳಿಸಿದ್ದಿರಿ. ರೈತರಿಗಾಗಿ ಪ್ರಾರಂಭವಾದ ಮಹಾತ್ಮಾ ಗಾಂಧಿ ಸಕ್ಕರೆ ಕಾರ್ಖಾನೆಯಿಂದ ನೀವು ಹಾಗೂ ನಿಮ್ಮ ಕುಟುಂಬ ಸದಸ್ಯರು ಶ್ರೀಮಂತರಾಗಿದ್ದಿರಿ, ಆದರೆ ಇಂದು ಆ ಸಕ್ಕರೆ ಕಾರ್ಖಾನೆಯನ್ನು ಎನ್.ಪಿ.ಎ ಮಾಡಿ, ಸಂಕಷ್ಟದಲ್ಲಿ ತಳ್ಳಿದ್ದಿರಿ, ಇದರಿಂದ ರೈತರು ಮತ್ತೆ ಸಂಕಷ್ಟದಲ್ಲಿ ಬಿಳುವ ಹಾಗೆ ಮಾಡಿದ್ದಿರಿ. ಯಾವ ಕಾರ್ಖಾನೆಯಿಂದ ಶ್ರೀಮಂತರಾಗಿದ್ದಿರೋ, ಅದನ್ನು ಇಂದು ಸಂಕಷ್ಟದಲ್ಲಿ ಬಿಟ್ಟು ಹೊಗುವುದು ಯಾವ ನ್ಯಾಯ” ಎಂದು ಖೂಬಾ ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು, ರಾಜ್ಯದಲ್ಲಿ ಇಂದು ಒಳ್ಳೆಯ ರಿತಿಯಲ್ಲಿ ಕೆಲಸ ಮಾಡುತ್ತಿರುವ ಬೀದರ ಡಿ.ಸಿ.ಸಿ. ಬಾಂಕ್ ಕಸಿದುಕೊಳ್ಳಲು ಹಲವಾರು ರೀತಿಯ ಹೊಂಚು ಹಾಕುತ್ತಿದ್ದಿರಿ, ಜಿಲ್ಲೆಯ ರೈತ ಬಂಧುಗಳು ಇಂತಹ ಹೊಂಚು ಹಾಕುವವರಿಗೆ ಅವಕಾಶ ಮಾಡಿಕೊಡಬಾರದು. ಕಸಿದುಕೊಂಡು ತಿನ್ನುವವರಿಗೆ, ದುಡಿದು ತಿನ್ನುವವರ ಬಗ್ಗೆ ಮಾತನಾಡಲು ಯಾವೂದೇ ನೈತಿಕತೆಯಿರಲ್ಲ, ನಿಮ್ಮ ಭ್ರಷ್ಟಾಚಾರ, ದುರಾಡಳಿತ ಜಿಲ್ಲೆಯ ಜನತೆ ಗಮನಿಸುತ್ತಿದ್ದಾರೆ, ಸಮಯಕ್ಕೆ ಸರಿಯಾಗಿ ಜನರೇ ತಕ್ಕ ಪಾಠ ಕಲಿಸುತ್ತಾರೆ” ಎಂದು ಕೇಂದ್ರ ಸಚಿವ ಖೂಬಾ ಈಶ್ವರ ಖಂಡ್ರೆಯವರಿಗೆ ತಿರುಗೇಟು ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ ? ಬೀದರ್‌ | ಡಿಸಿಸಿ ಬ್ಯಾಂಕ್‌ನಲ್ಲಿ ಬದಲಾವಣೆ ಅಗತ್ಯ: ಸಚಿವ ಈಶ್ವರ ಖಂಡ್ರೆ

“ಜಿಲ್ಲೆಯಲ್ಲಿ ನಿಮ್ಮಷ್ಟು ಆಸ್ತಿ, ಪಾಸ್ತಿ, 20 ಅಡಿ ಎತ್ತರದ ಕಂಪೌಂಡವಾಲ್‌ಗಳು, ಸಾವಿರಾರು ಎಕ್ಕರೆ ಭೂಮಿ ಯಾರ ಬಳಿಯೂ ಇಲ್ಲಾ, ಇದರ ಆದಾಯ ಮೂಲ ಯಾವುದು ಎಂದು ಸಮಾಜದ ಮುಂದೆ ಬಹಿರಂಗಪಡಿಸಿ. ಇಷ್ಟು ಶ್ರೀಮಂತರಾಗಲು ಹಿಡಿದ ಮಾರ್ಗ ಯಾವುದು ಎಂಬುದು ತಿಳಿಸಿ. ಇದರ ಜೊತೆಗೆ ನೀವು ಕೇವಲ ನಾಲ್ಕೈದು ಜನ ಗುತ್ತಿಗೆದಾರರಿಗೆ ಇಟ್ಟುಕೊಂಡು, ಅವರಿಗೆ ಎಲ್ಲಾ ಕೆಲಸಗಳು ಸಿಗುವ ಹಾಗೆ ಮಾಡಲು ಅಧಿಕಾರಿಗಳ ಮೇಲೆ ಒತ್ತಡ ಹಾಕುವದರ ಹಿಂದಿನ ಗುಟ್ಟೇನು” ಎಂದು ಸಚಿವರು ಖಂಡ್ರೆಗೆ ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...