ಬೀದರ್‌ | ಮಗನ ಮೇಲಿನ ವ್ಯಾಮೋಹಕ್ಕೆ ಪಕ್ಷದ ಹಿರಿಯರನ್ನು ಮೂಲೆಗುಂಪು ಮಾಡಿದ ಖಂಡ್ರೆ : ಖೂಬಾ

Date:

ಬೀದರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ಶನಿವಾರ ಬೀದರ್‌ ಉತ್ತರ ಕ್ಷೇತ್ರದ ಚಿಮಕೋಡ್, ಮಾಳೆಗಾಂವ, ಜನವಾಡ ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು.

“ಕಳೆದ 10 ವರ್ಷಗಳಲ್ಲಿ ದೇಶದಲ್ಲಿ ಆಗಿರುವ ಅಭಿವೃದ್ಧಿಯನ್ನು ನೋಡಿ ಮತ ನೀಡಿ, ದೇಶದ ಅಭಿವೃದ್ದಿಗೆ, ರಕ್ಷಣೆಗೆ ಮೋದಿ ಬೇಕಾಗಿದ್ದಾರೆ. ದೇಶಕ್ಕೆ ಬೇಕಾಗಿರುವುದು ಬಿಜೆಪಿ ಹಾಗೂ ನರೇಂದ್ರ ಮೋದಿ, ಬೀದರ ಕ್ಷೇತ್ರಕ್ಕೆ ಬೇಕಾಗಿರುವುದು ಬಿಜೆಪಿ ಹಾಗೂ ಭಗವಂತ ಖೂಬಾ, ಇದು ಜನರ ಮನಸ್ಥಿತಿಯಾಗಿದೆ” ಎಂದು ಸಚಿವ ಖೂಬಾ ತಿಳಿಸಿದರು.

“ಕಾಂಗ್ರೆಸ್‌ನಲ್ಲಿ ನನ್ನ ಎದುರು ಸ್ಪರ್ಧಿಸಲು ಸಚಿವ ಈಶ್ವರ ಖಂಡ್ರೆಗೆ ಧೈರ್ಯವಾಗಲಿಲ್ಲ, ಆದರೆ ಅಧಿಕಾರ ಬೇರೆಯವರ ಮನೆಗೂ ಕೊಡಲು ಮನಸ್ಸಿರಲಿಲ್ಲ, ಆದ್ದರಿಂದ ಕಾಂಗ್ರೆಸ್‌ನಲ್ಲಿರುವ ಹಿರಿಯ ಮುಖಂಡರಿಗೆ ಮೂಲೆಗುಂಪು ಮಾಡಿ, ತಮ್ಮ ಪುತ್ರನಿಗೆ ಟಿಕೆಟ್ ಕೊಡಿಸಿದ್ದಾರೆ. ಸಚಿವ ಈಶ್ವರ ಖಂಡ್ರೆ ಒಬ್ಬ ಸ್ವಾರ್ಥ ರಾಜಕಾರಣಿ” ಎಂದು ಖಂಡ್ರೆ ವಿರುದ್ಧ ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಶ್ವರ ಖಂಡ್ರೆಗೆ ತನ್ನ ಮಗನ ಮೇಲಿನ ವ್ಯಾಮೋಹದಿಂದ ಕಾಂಗ್ರೆಸ್ ಕಾರ್ಯಕರ್ತರು ಬಲಿಯಾಗುತ್ತಿದ್ದಾರೆ. ಇವರಿಗೆ ಸತ್ಯ ಹಾಗೂ ಸುಳ್ಳಿನ ಮಧ್ಯದ ಅಂತರ ಗೊತ್ತಾಗುತ್ತಿಲ್ಲ, ಜಿಲ್ಲೆಯಲ್ಲಿ ಎಫ್.ಎಮ್ ಕೇಂದ್ರ ಪ್ರಾರಂಭವಾಗಿದೆ. ಜನ ಎಫ್‌. ಎಮ್ ಆಲಿಸುತ್ತಿದ್ದಾರೆ. ಸಿಪೇಟ್ ಕಾಲೇಜು ಪ್ರಾರಂಭವಾಗಿದೆ, ಬಿ.ಎಸ್.ಯಡಿಯೂರಪ್ಪ ನೇತ್ರತ್ವದ ಸರ್ಕಾರವಿದ್ದಾಗ ಬೀದರ್ ಏರಪೋರ್ಟ್ ನಾನು ಪ್ರಾರಂಭಿಸಿರುವೆ, ಆದರೆ ಖಂಡ್ರೆ ಇದ್ಯಾವುದು ಆಗಿಲ್ಲ ಅಂತಾರೆ. ಇಂತಹ ಸುಳ್ಳು ಹೇಳುವ ವ್ಯಕ್ತಿಯ ಕುಟುಂಬಕ್ಕೆ ತಾವ್ಯಾರು ಬೆಂಬಲಿಸಬಾರದು” ಎಂದು ವಿನಂತಿಸಿದರು.

ವಿಧಾನ ಪರಿಷತ್ ಸದಸ್ಯ ರಘುನಾಥರಾವ ಮಲ್ಕಾಪೂರೆ ಮಾತನಾಡಿ, “ಭಗವಂತ ಖೂಬಾ ಅವರು ಬೀದರ್ ಕ್ಷೇತ್ರಕ್ಕೆ ಮಾಡಿರುವ ಅಭಿವೃದ್ದಿ ಕಾರ್ಯಗಳು ಹಿಂದೆ ಯಾರು ಮಾಡಿಲ್ಲ, ಮೊದಲ ಬಾರಿ ಬೀದರ ಕ್ಷೇತ್ರದಿಂದ ಕೇಂದ್ರ ಮಂತ್ರಿ ಆಗಿದ್ದಾರೆ. ಇವರಿಗೆ ಮತ್ತೊಮ್ಮೆ ಗೆಲ್ಲಿಸಿ” ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್ ಮಾತನಾಡಿ, “ಬೀದರ ಲೋಕಸಭಾ ಕ್ಷೇತ್ರದ ಸರ್ವತೋಮುಖ ಅಭಿವೃದ್ದಿಗೆ ಖೂಬಾ ಅವರನ್ನು ಗೆಲ್ಲಿಸುವುದು ಅವಶ್ಯಕವಾಗಿದೆ. 60 ವರ್ಷದಿಂದ ದೇಶ ಹಾಗೂ ಬೀದರ ಜಿಲ್ಲೆಯಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಕುಟುಂಬ ರಾಜಕಾರಣಕ್ಕೆ ಅಧಿಕಾರದಿಂದ ದೂರವಿಡಬೇಕು” ಎಂದು ಹೇಳಿದರು.

ಈ ಸುದ್ದಿ ಒದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ಕಾಲದಲ್ಲಿ ಮೋದಿಯ ಬಾಂಡ್ ಭಯೋತ್ಪಾದನೆ

ಈ ಸಂದರ್ಭದಲ್ಲಿ ವಿಧಾನ ಪರಿಷತ್‌ ಸದಸ್ಯ ರಘುನಾಥರಾವ್‌ ಮಲ್ಕಾಪುರೆ, ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, ಮಾಜಿ ಶಾಸಕ ಎಮ್.ಜಿ.ಮೂಳೆ, ಮಂಡಲ ಅಧ್ಯಕ್ಷ ರಾಜೇಂದ್ರ ಪೂಜಾರಿ, ಮುಖಂಡರಾದ ಪೀರಪ್ಪ ಯರನಳ್ಳಿ, ಉಪೇಂದ್ರ ದೇಶಪಾಂಡೆ, ವಿಶ್ವನಾಥ ಪಾಟೀಲ್ ಮಾಡಗೂಳ, ಅರವಿಂದ ಪಾಟೀಲ್ ಚಿಲ್ಲರ್ಗಿ, ವಿಜಯಕುಮಾರ ಪಾಟೀಲ್ ಗಾದಗಿ, ಸುರೇಶ ಮಾಶೆಟ್ಟಿ, ಅಶೋಕ ಪಾಟೀಲ್, ದೀಪಕ ಅಲಿಯಂಬರ, ರವಿ ಚಿನ್ನಪ್ಪನೊರ, ಶಿವಕುಮಾರ ಸ್ವಾಮಿ, ಸಂದೀಪ ಪಸಾರಗೆ, ದಿನೇಶ ಮೂಲಗೆ, ನಿಜಲಿಂಗಪ್ಪ ಪಾಟೀಲ್ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...