ಮೈಸೂರು | ರೈತರ 448 ಎಕರೆ ಭೂಮಿ ಕಬಳಿಸಲು ಮುಂದಾದ ಕೆಐಎಡಿಬಿ

Date:

ಮೈಸೂರು ಜಿಲ್ಲೆ, ನಂಜನಗೂಡು ತಾಲ್ಲೂಕು, ಕಸಬಾ ಹೋಬಳಿಯ ಮುದ್ದಹಳ್ಳಿ, ಏಲಚಗೆರೆ ಮತ್ತು ಸಿಂಧುವಳ್ಳಿಪುರ ಗ್ರಾಮಗಳಲ್ಲಿ ಸರಿ ಸುಮಾರು 448.38 ಎಕರೆ ಭೂಮಿಯನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಭೂಸ್ವಾಧೀನಪಡಿಸಿಕೊಂಡು, ರೈತರ ವಿರೋಧದ ನಡುವೆಯೂ ಭೂದರ ನಿಗದಿಪಡಿಸಿ ಭೂಮಿ ಕಬಳಿಸಲು ಮುಂದಾಗಿದೆ.

ಕೆಲ ದಿನಗಳಿಂದ ಸದ್ದಿಲ್ಲದೆ ಸುಮ್ಮನಿದ್ದ ಕೆಐಎಡಿಬಿ ದಲ್ಲಾಳಿಗಳ ಮೂಲಕ ರೈತರಿಂದ ಬಲವಂತವಾಗಿ ಫಲವತ್ತಾದ 448.38 ಎಕರೆ ಜಮೀನನ್ನು ಕಬಳಿಸಲು, ರೈತರಿಗೆ ಜುಲೈ. 2 ರಂದು ಮದ್ಯಾಹ್ನ 12 ಗಂಟೆ ಸಮಯಕ್ಕೆ ನಂಜನಗೂಡು ಪಟ್ಟಣದ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಅಧಿಸೂಚಿತ ಖಾತೆದಾರರು ಗುರುತಿನ ಚೀಟಿಯೊಂದಿಗೆ ಸಭೆಗೆ ಕಡ್ಡಾಯವಾಗಿ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.

ಕೆಐಎಡಿ ಕಾಯ್ದೆ 1966 ಕಲಂ 28(4) ರ ಸರ್ಕಾರಿ ಅಧಿಸೂಚನೆ ಸಂಖ್ಯೆ ಸಿಐ 172 ಎಸ್ಪಿಕ್ಯೂ (ಇ) 2022 ದಿನಾಂಕ-23-11-2022 ರಾಜ್ಯಪತ್ರ ಪ್ರಕಟಗೊಂಡ ದಿನಾಂಕ-28-11-2022 ಉಲ್ಲೇಖ (1) ರಂತೆ ಭೋಸ್ವಾಧೀನಪಡಿಸಿಕೊಂಡಿರುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದರಿ ಜಮೀನುಗಳ ಸಂಭಂದವಾಗಿ ಕಲಂ 29(2) ರಡಿ ಒಪ್ಪಂದದ ದರದ ರೀತ್ಯಾ ಪರಿಹಾರವನ್ನು ನಿರ್ಧಾರಿಸುವ ಬಗ್ಗೆ ಉಲ್ಲೇಖ (2) ರಂತೆ ಸಭೆ ನಡೆಸಲು ವಿಶೇಷ ಜಿಲ್ಲಾಧಿಕಾರಿ, ಕೆಐಎಡಿಬಿ, ಬೆಂಗಳೂರು ರವರ ಅಧ್ಯಕ್ಷತೆಯಲ್ಲಿ ಭೂದರ ನಿರ್ಧಾರಣ ಸಲಹಾ ಸಮಿತಿ ಸಭೆಯನ್ನು ಕರೆಯಲಾಗಿದೆ.

ಕೆಐಎಡಿಬಿ ರೈತರ ಜಮೀನು ಕಬಳಿಸುವುದು ರೈತರಿಗೆ ಸರಿಯಾಗಿ ಭೂದರದ ಪರಿಹಾರ ವಿತರಿಸದೆ ಸತಾಯಿಸುವುದು. ಅಲ್ಲದೆ, ಭೂಮಿ ಕಳೆದುಕೊಂಡ ಕುಟುಂಬದ ಓರ್ವ ಸದಸ್ಯರಿಗೆ ಉದ್ಯೋಗ ಕಲ್ಪಿಸುವ ಭರವಸೆ ನೀಡಿ ಮೋಸ ಮಾಡುವುದರಲ್ಲಿ ನಿರತವಾಗಿದೆ. ಕೋಚನಹಳ್ಳಿ ರೈತರು ವರ್ಷಾನುಗಟ್ಟಲೆಯಿಂದ ಹೋರಾಟ ಮಾಡುತ್ತಲೇ ಇದ್ದಾರೆ. ಏಷಿಯನ್ ಪೈಂಟ್ಸ್, ಹೊರ ಮಾವು, ಹಿಮ್ಮಾವು, ಮೈಸೂರು ಚಿತ್ರ ನಗರಿ ನಿರ್ಮಾಣಕ್ಕೆ ಸ್ವಾಧೀನಪಡಿಸಿಕೊಂಡ ಭೂ ವಿಚಾರವಾಗಿ ಹೋರಾಟಗಳು ನಡೆಯುತ್ತಲೇ ಇರುವಾಗ ನಂಜನಗೂಡು ಭಾಗದ ಹಳ್ಳಿಗಳ ಕಡೆಗೆ ಕೆಐಎಡಿಬಿ ಮದ್ಯವರ್ತಿಗಳ ಮೂಲಕ ಭೂ ಕಬಳಿಕೆಗೆ ಮುಖ ಮಾಡಿದೆ.

ದಿನಾಂಕ-18-06-2025 ರಂದು ವಿಶೇಷ ಭೂಸ್ವಾಧೀನಾಧಿಕಾರಿ ಸಂಖ್ಯೆ: ಭೂಸ್ವಾ (4) ಸಿ. ಆರ್ /157/2025-26 ರ ಅನುಸಾರ ರೈತರಿಗೆ ನೋಟಿಸ್ ನೀಡಿದ್ದು. ಸಭೆಯಲ್ಲಿ ಕಡ್ಡಾಯವಾಗಿ ಭಾಗಿಯಾಗುವಂತೆ ತಿಳಿಸಿದೆ.

ಮುದ್ದಹಳ್ಳಿ ಗ್ರಾಮದ ರೈತರಾದ ಗುರುಸಿದ್ದಯ್ಯ ಬಿನ್ ತಗಡೂರಯ್ಯ ಅವರಿಗೆ ಸೇರಿದ 4 ಎಕರೆ 13 ಗುಂಟೆ ಭೂಮಿಯನ್ನು ವಶಪಡಿಸಿಕೊಂಡು ಭೂದರ ನಿಗದಿ ಸಭೆಗೆ ಬರುವಂತೆ ನೋಟಿಸ್ ನೀಡಿರುವುದರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವಿಶೇಷ ಸುದ್ದಿ ಓದಿದ್ದೀರಾ?ಕೊಡಗು | ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತ; ಈವರೆಗೆ ತಿರುಗಿ ನೋಡದ ಉಸ್ತುವಾರಿ ಸಚಿವರು

ಬೆಂಗಳೂರು ದೇವನಹಳ್ಳಿಯಲ್ಲಿ ನಡೆಯುತ್ತಿರುವ ಸಂಯುಕ್ತ ಹೋರಾಟದಂತೆ ಬಲವಂತವಾಗಿ ನಂಜನಗೂಡು ಭಾಗದಲ್ಲಿ ಕೆಐಎಡಿಬಿ ಭೂಮಿ ಕಬಳಿಸಲು ನಡೆಸುತ್ತಿರುವ ಪ್ರಯತ್ನಕ್ಕೆ ಹೋರಾಟದ ಮೂಲಕ ಪಾಠ ಕಲಿಸಬೇಕಾಗುತ್ತದೆ ಎಂದು ರೈತರು ಕಿಡಿಕಾರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...