ಚಿಕ್ಕಬಳ್ಳಾಪುರ | ಕುಖ್ಯಾತ ಅಪಹರಣಕಾರರ ಗ್ಯಾಂಗ್‌‌ನ ಎಂಟು ಮಂದಿಯ ಬಂಧನ

Date:

ಹಾಡಹಗಲೇ ಅಪಹರಣ ಮಾಡಿ, ಲಕ್ಷಾಂತರ ರೂಪಾಯಿ ಹಣ ಸುಲಿಗೆ ಮಾಡುತ್ತಿದ್ದ ಕುಖ್ಯಾತ ಅಪಹರಣಕಾರರ ಕಿಡ್ನ್ಯಾಪರ್ಸ್‌ಗಳನ್ನು ಚಿಕ್ಕಬಳ್ಳಾಪುರ ಪೊಲೀಸರು ಎಡೆಮುರಿಕಟ್ಟಿದ್ದಾರೆ.

ಕಳೆದ ಜೂನ್‌, ಜುಲೈ ತಿಂಗಳಲ್ಲಿ ನಗರ ಮತ್ತು ನಂದಿ ಹೋಬಳಿ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿದ್ದ ಹಲವು ಅಪಹರಣ, ಸುಲಿಗೆ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು 8 ಮಂದಿ ಕುಖ್ಯಾತ ಅಪಹರಣಕಾರರನ್ನು ಬಂಧಿಸಿದ್ದಾರೆ.

ಗ್ಯಾಂಗ್‌ ಲೀಡರ್‌ ಬರ್ಕತ್‌ ವುಲ್ಲಾ, ಲೋಹಿತ್‌ ಕುಮಾರ್, ಪ್ರವೀಣ್‌, ಮಾರುತಿ ಪ್ರಸನ್ನ, ಸಂತೋಷ್‌, ಭರತ್‌‌ ಕುಮಾರ್, ವೆಂಕಟೇಶ್‌, ಮರುಮಲ್ಲಪ್ಪ ಬಂಧಿತರು. ಬಂಧಿತರಿಂದ 41 ಲಕ್ಷ ರೂ. ನಗದು, 1 ಚಿನ್ನದ ಸರ, ಮಾರುತಿ ಸ್ವಿಷ್ಟ್‌, ಮಾರುತಿ ಬ್ರಿಜಾ ಹಾಗೂ ಫಾರ್ಚುನರ್‌ ಕಾರುಗಳು ಹಾಗೂ ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಆರೋಪಿಗಳು ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ನಾನಾ ಕೃತ್ಯಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಅದಲ್ಲದೆ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಕೃತ್ಯದಲ್ಲೂ ಭಾಗಿಯಾಗಿರುವುದು ತನಿಖೆಯ ವೇಳೆ ತಿಳಿದು ಬಂದಿದೆ.

ಕಳೆದ ಜೂನ್‌ನಲ್ಲಿ ಹಾರೋಬಂಡೆ ಗ್ರಾಮದ ಸಹಕಾರ ಭವನದ ಬಳಿ ವ್ಯಕ್ತಿಯೋರ್ವನನ್ನು ಅಪಹರಿಸಿ 18 ಲಕ್ಷ ರೂ. ನಗದು ಸುಲಿಗೆ ಮಾಡಿದ್ದರು. ಅದಾದ ಬಳಿಕ ಜು.20 ರಂದು ನಂದಿ ಗಿರಿಧಾಮ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿನ ಚಿಕ್ಕಸಾಗರ ಗ್ರಾಮದ ಬಳಿ ಬೆಳಗ್ಗೆ ವಾಕಿಂಗ್‌ ಮಾಡುತ್ತಿದ್ದ ವ್ಯಕ್ತಿಯನ್ನು ಅಪಹರಿಸಿ 60 ಲಕ್ಷ ರೂ. ಸುಲಿಗೆ ಮಾಡಿದ್ದರು.

ವಿಶೇಷ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಡಿವೈಎಸ್ಪಿಗಳಾದ ಎನ್.ಶಿವಕುಮಾರ್‌, ರವಿಕುಮಾರ್‌, ಪಿಐ ಮಂಜುನಾಥ್‌, ಕೆ.ಪಿ.ಸತ್ಯಾನಾರಾಯಣ್‌, ನಾಯಾರ್ಸ್‌ ಡೈ, ಪ್ರಶಾಂತ್‌ ವರ್ಣಿ, ಸೂರ್ಯಪ್ರಕಾಶ್‌, ಶ್ರೀನಿವಾಸ್‌, ಜನಾರ್ಧನ, ಪಿಎಸ್‌ಐಗಳಾದ ಶರಣಪ್ಪ, ಹರೀಶ್‌ ಹಾಗೂ ಸಿಬ್ಬಂದಿ ವರ್ಗದವರನ್ನು ಎಸ್‌ಪಿ ಕುಶಾಲ್‌ ಚೌಕ್ಸೆ ಅಭಿನಂದಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...