ಕೊಡಗು | ನಾಗರಹೊಳೆ ಅರಣ್ಯ: ಪ್ರವೇಶ ದ್ವಾರದಲ್ಲಿ ಎಲ್ಲ ವಾಹನಗಳಿಗೂ ಶುಲ್ಕ

Date:

  • ಕೊಡಗು ಅರಣ್ಯ ಪ್ರದೇಶಗಳಲ್ಲಿ ಕಸ ನಿಯಂತ್ರಣಕ್ಕೆ ಹರಸಾಹಸ
  • ಅರಣ್ಯ ಪ್ರದೇಶಗಳಲ್ಲಿ ಅನಧಿಕೃತ ವಾಹನ ನಿಲುಗಡೆ ಸ್ಥಗಿತ

ಕೊಡಗು ಜಿಲ್ಲೆಯ ನಾಗರಹೊಳೆಯ ಅರಣ್ಯ ದ್ವಾರಗಳಲ್ಲಿ ಅಂತರರಾಜ್ಯ ವಾಹನಗಳು ಮಾತ್ರವಲ್ಲದೆ ರಾಜ್ಯದ ವಾಹನಗಳೂ ಪ್ರವೇಶ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಜಿಲ್ಲೆಯ ಅರಣ್ಯ ಪ್ರದೇಶಗಳಲ್ಲಿ ವ್ಯಾಪಕವಾಗಿ ಕಸ ಎಸೆಯುತ್ತಿರುವುದನ್ನು ಕೊನೆಗೊಳಿಸಲು ಅರಣ್ಯ ಇಲಾಖೆ ಈ ಕ್ರಮ ಕೈಗೊಂಡಿದೆ.

“ಅರಣ್ಯದ ಅಂಚಿನಲ್ಲಿ ಕಸ ಎಸೆಯುವುದನ್ನು ನಿಯಂತ್ರಿಸುವುದು ಇಲಾಖೆಗೆ ಸವಾಲಾಗಿದೆ. ಆದರೆ, ನಾಗರಹೊಳೆ ಪ್ರವೇಶ ದ್ವಾರದಲ್ಲಿ ಕಟ್ಟುನಿಟ್ಟಾದ ತಪಾಸಣೆ ಮತ್ತು ಪ್ರವೇಶ ಶುಲ್ಕವನ್ನು ಜಾರಿಗೆ ತಂದ ಬಳಿಕ ಕೇರಳದಿಂದ ತಂದ ಭಾರೀ ಪ್ರಮಾಣದ ತ್ಯಾಜ್ಯ ವಸ್ತುಗಳನ್ನು ಕೊಡಗು ಅರಣ್ಯ ಪ್ರದೇಶಗಳಿಗೆ ಎಸೆಯುವುದನ್ನು ನಿಯಂತ್ರಿಸಲಾಗಿದೆ” ಎಂದು ಕೊಡಗು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್‌ ನಿರಂಜನ್ ಮೂರ್ತಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಕೆಂಭಾವಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇರಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ಕಸವನ್ನು ತಂದು ಸುರಿಯುತ್ತಿದ್ದ ದಕ್ಷಿಣ ಕೊಡಗಿನ ಮಾಕುಟ್ಟ ಗೇಟ್‌ನಲ್ಲಿ ಈಗ ಪ್ರವೇಶ ಶುಲ್ಕವನ್ನು ಸಂಗ್ರಹಿಸಲಾಗುವುದು. ಜನಪ್ರಿಯ ಪ್ರವಾಸಿ ತಾಣಗಳಾದ ಅರಣ್ಯ ಪ್ರದೇಶಗಳಲ್ಲಿ ಅನಧಿಕೃತ ವಾಹನ ನಿಲುಗಡೆ ಮತ್ತು ಕಸ ಹಾಕುವುದನ್ನು ತಡೆಗಟ್ಟಲು ಅರಣ್ಯ ಇಲಾಖೆ ನಿಯಮಿತವಾಗಿ ಜಾಗರೂಕತೆ ವಹಿಸುತ್ತಿದೆ” ಎಂದರು.

“ಭಾಗಮಂಡಲ-ಕರಿಕೆ ರಸ್ತೆಯ ಜಲಪಾತದ ಬಳಿ ಪ್ರವಾಸಿಗರು ಪಾರ್ಕಿಂಗ್ ಮಾಡುತ್ತಾರೆ. ಈ ಪ್ರದೇಶದಲ್ಲಿ ಪ್ಲಾಸ್ಟಿಕ್ ಮತ್ತು ಮದ್ಯದ ತ್ಯಾಜ್ಯವನ್ನು ಎಸೆಯುತ್ತಾರೆ. ಇದು ವನ್ಯಜೀವಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಹಾಗಾಗಿ ಇದನ್ನು ನಿಯಂತ್ರಿಸಲು ಇಲಾಖೆ ಕಠಿಣ ತಪಾಸಣೆ ನಡೆಸುತ್ತಿದೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...