ಕೊಡಗು | ಆಪ್ತಸಮಾಲೋಚಕರ ಹುದ್ದೆಗೆ ಅರ್ಜಿ ಅಹ್ವಾನ; ಅಕ್ಟೋಬರ್‌ 30 ಕೊನೆಯ ದಿನ

Date:

ನವದೆಹಲಿಯ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಮಂಡಳಿಯಿಂದ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ ಅಡಿಯಲ್ಲಿ ಮಂಜೂರಾಗಿರುವ ಮತ್ತು ಪ್ರಸ್ತುತ ಖಾಲಿ ಇರುವ ಡೆಸಿಗ್ನೇಟೆಡ್ ಎಸ್‌ಟಿಐ/ಆರ್‌ಟಿಐ ಕ್ಲಿನಿಕ್‌ಗಳಲ್ಲಿ ಖಾಲಿ ಇರುವ ಆಪ್ತಸಮಾಲೋಚಕರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಸೂಚಿಸಲಾಗಿದ್ದು, ಆಪ್ತಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಕೊಡಗಿನ ಮಡಿಕೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಸತೀಶ್ ಕುಮಾರ್ ಅವರು ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದು, ಅರ್ಜಿ ಆಹ್ವಾನಿಸಿದ್ದಾರೆ.

ಹುದ್ದೆಯ ಹೆಸರು: ಆಪ್ತಸಮಾಲೋಚಕರ ಹುದ್ದೆ ಜಿಲ್ಲಾ ಆಸ್ಪತ್ರೆ, ಮಡಿಕೇರಿ. ಹುದ್ದೆಯ ಸಂಖ್ಯೆ: 1 (ಗುತ್ತಿಗೆ ಆಧಾರದ ಮೇಲೆ 1 ವರ್ಷ ಗುತ್ತಿಗೆ ಆಧಾರ)

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೇತನಶ್ರೇಣಿ: ಸಂಚಿತ ಮೊತ್ತ ಮಾಸಿಕ ರೂ.21000, ಗರಿಷ್ಠ ವಯೋಮಿತಿ: 60 ವರ್ಷ
ಅರ್ಹತೆ : ಸಮಾಜ ಕಾರ್ಯ, ಮನೋವಿಜ್ಞಾನ, ಸಮಾಜಶಾಸ್ತ್ರ, ಮಾನವ ಶಾಸ್ತ್ರ, ಮಾನವ ಅಭಿವೃದ್ಧಿ, ನರ್ಸಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಹೊಂದಿದವರು ಅಥವಾ ಸಮಾಜ ಕಾರ್ಯ, ಮನೋವಿಜ್ಞಾನ, ಸಮಾಜಶಾಸ್ತ್ರ, ಮಾನವ ಶಾಸ್ತ್ರ, ಮಾನವ ಅಭಿವೃದ್ಧಿಯಲ್ಲಿ ಪದವಿ ಹೊಂದಿದವರು, ನರ್ಸಿಂಗ್-ಕೌನ್ಸೆಲಿಂಗ್‌ನಲ್ಲಿ 3 ವರ್ಷಗಳ ಅನುಭವದೊಂದಿಗೆ ಅಥವಾ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದ ಅಡಿಯಲ್ಲಿ ಶಿಕ್ಷಣ ಹೊಂದಿದವರು, ಸಮಾಜ ಕಾರ್ಯ, ಮನೋವಿಜ್ಞಾನ ಸಮಾಜಶಾಸ್ತ್ರ, ಮಾನವ ಶಾಸ್ತ್ರ, ಮಾನವ ಅಭಿವೃದ್ಧಿಯಲ್ಲಿ ಪದವಿ ಹೊಂದಿದವರು, ನರ್ಸಿಂಗ್-ಕೌನ್ಸೆಲಿಂಗ್‌ನಲ್ಲಿ ಒಂದು ವರ್ಷದ ಅನುಭವದೊಂದಿಗೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದ ಅಡಿಯಲ್ಲಿ ಶಿಕ್ಷಣ ಹೊಂದಿದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿ ಹಾಗೂ ಅರ್ಜಿಗಾಗಿ: ಮಡಿಕೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಓಂಕಾರೇಶ್ವರ ದೇವಸ್ಥಾನ ರಸ್ತೆ. ಈ ವಿಳಾಸವನ್ನು ಸಂಪರ್ಕಿಸಬಹುದು.

ಅರ್ಜಿಸಲ್ಲಿಸಲು ಕೊನೆಯ ದಿನಾಂಕ: ಇದೇ ಅಕ್ಟೋಬರ್‌ 30ರ ಸಂಜೆ 5 ಗಂಟೆಯೊಳಗೆ ಅರ್ಜಿ ಮತ್ತು ಮೂಲ ದಾಖಲಾತಿಗಳನ್ನು ಸಲ್ಲಿಸಬೇಕು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಾಹಿತಿ ತಂತ್ರಜ್ಞರ ಸೇವೆ ಪಡೆಯಲು ಅರ್ಜಿ ಆಹ್ವಾನ

“ಈ ನೇಮಕಾತಿಯು ರಾಷ್ಟ್ರೀಯ ಏಡ್ಸ್ ನಿಯಂತ್ರಣ ಮಂಡಳಿ(ಎನ್‌ಎಸಿಒ) ನವದೆಹಲಿ ಇವರಿಂದ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ ಎನ್‌ಎಸಿಪಿ-ವಿ ರ ಮಾರ್ಗಸೂಚಿ ಅನ್ವಯ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು. ದೂರವಾಣಿ ಸಂಖ್ಯೆ: 08272-296708ನ್ನು ಸಂಪರ್ಕಿಸಬಹುದು” ಎಂದು ಮಡಿಕೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಸತೀಶ್ ಕುಮಾರ್ ಅವರು ತಿಳಿಸಿದ್ದಾರೆಂದು ಇಲಾಖೆ ಮೂಲಗಳಿಂದ ಈ ದಿನ.ಕಾಮ್‌ಗೆ ಮಾಹಿತಿ ದೊರೆತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...