ಕೊಡಗು | ಭೂಮಿಯಿಂದ ಮೊಳೆತು ಬಂದ ಪಾಟ್ ಕಥೆಗಳು ಕೃತಿ ಬಿಡುಗಡೆ

Date:

ಸಾಹಿತಿ ಹಾಗೂ ನಿವೃತ್ತ ಪ್ರಾಂಶುಪಾಲ ಡಾ ಕೆ ಕಮಲಾಕ್ಷ ಅವರ ವಿನೂತನ ಕೃತಿ “ಭೂಮಿಯಿಂದ ಮೊಳೆತು ಬಂದ ಪಾಟ್ ಕಥೆಗಳು” ಕೃತಿಯನ್ನು ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಕೇಶವ ಕಾಮತ್ ಬಿಡುಗಡೆ ಮಾಡಿದರು.

ಕೊಡಗು ಜಿಲ್ಲೆಯ ಗೋಣಿಕೊಪ್ಪಲು ಬಳಿಯ ಅರವತೊಕ್ಲು ಗ್ರಾಮದ ಲಕ್ಷ್ಮೇಶ್ವರ ಎಸ್ಟೇಟ್‌ನ ಬೆಳದಿಂಗಳಿನಲ್ಲಿ ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, “ಗೋಣಿಕೊಪ್ಪಲಿನ ಜಾನಪದ, ಕಲೆ, ಸಂಸ್ಕೃತಿ ತುಂಬಾ ಅನನ್ಯವಾದದ್ದು. ಪ್ರಾಚೀನ ಜಾನಪದ ಬದುಕಿನ ಆಳಕ್ಕಿಳಿದು ಅಧ್ಯಯನ ಮಾಡಿದರೆ ಅನೇಕ ಮಹತ್ವದ ವಿಚಾರಗಳು ನಮ್ಮ ಅರಿವಿಗೆ ದಕ್ಕುತ್ತದೆ. ವಿವಿಧ ಪ್ರದೇಶಗಳ ಜಾನಪದೀಯ ಅಂಶಗಳನ್ನು ಕಲೆಹಾಕಿ ಪ್ರಸ್ತುತ ಕಾಲಘಟ್ಟಕ್ಕೆ ಇವುಗಳನ್ನು ಸಮನ್ವಯ ಮಾಡಿಕೊಳ್ಳಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಡಾ ಕೆ ಕಮಲಾಕ್ಷ ಅವರ ಕಾರ್ಯ ಅಭಿನಂದನೀಯ” ಎಂದರು.

“ಡಾ ಕೆ ಕಮಲಾಕ್ಷ ಈ ಹಿಂದೆ ಬರೆದ ʼಕೇರಳದ ಜನಪದ ವೀರ ತಚ್ಚೋಳಿ ಒದೆನನ್ʼ ಹಾಗೂ ʼಅಂಕ ಕಲಿಗಳ ವೀರಗಾಥೆʼ ಅನುವಾದಿತ ಕಲಾಕೃತಿಗಳು ಸಹ ಸಂಗ್ರಹ ಯೋಗ್ಯ ಪುಸ್ತಕಗಳಾಗಿವೆ. ಸಾಹಿತ್ಯ ಕೃತಿಗಳ ಅನುವಾದ ಸುಲಭ ಸಾಧುವಲ್ಲ. ಎರಡು ಭಾಷೆಗಳ ಹಿಡಿತ, ಜತೆಗೆ ಮೂಲ ಕೃತಿ ರಚನಕಾರರ ರಚನೆ ಕುರಿತ ಮನಸ್ಥಿತಿ, ಇವೆಲ್ಲದರ ಮೇಲೆ ಹಿಡಿತ ಹೊಂದಿ ಕೃತಿ ರಚನೆ ಮಾಡಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಡುಗಡೆ ಸಮಾರಂಭದ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಬೆಂಗಳೂರಿನ ‘ದೃಶ್ಯ’ ರಂಗತಂಡದ ಸಂಸ್ಥಾಪಕಿ ಹಾಗೂ ನಿರ್ದೇಶಕಿ ಡಾ ದಾಕ್ಷಾಯಿಣಿ ಭಟ್ ತೃತೀಯ ಕುರಿತು ಒಳನೋಟ ಬೀರಿದರು. ರಂಗಕಲೆಯಲ್ಲಿ ಜಾನಪದ ಕಥೆಗಳನ್ನು ಬಳಸಿಕೊಳ್ಳುವಲ್ಲಿನ ಅಗತ್ಯತೆಗಳನ್ನು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು ನಗರದಲ್ಲಿ ಅ. 22 ರಿಂದ ಮೈಸೂರು ಸ್ಯಾಂಡಲ್ ಸಾಬೂನು ಮೇಳ : ಕೆ. ಎಸ್. ಗಂಗಪ್ಪ

ಕೇಂದ್ರ ಸಾಹಿತ್ಯ ಅಕಾಡೆಮಿಯ ಬೆಂಗಳೂರು ವಲಯ ನಿವೃತ್ತ ಕಾರ್ಯದರ್ಶಿ ಮಹಾಲಿಂಗೇಶ್ವರ ಎಸ್ ಪಿ ಲೇಖಕರ ಬರವಣಿಗೆಗಳ ಕುರಿತು ಮಾತನಾಡಿ ಶುಭ ಹಾರೈಸಿದರು.

ಸುಳ್ಯದ ಉಪನ್ಯಾಸಕ ಲೇಖಕ ಡಾ ಸುಂದರ ಕೆನಾಜೆ ಜಾನಪದ ವೈವಿಧ್ಯ, ಭಾಷಾ ವೈವಿಧ್ಯ, ವಿವಿಧ ಸಾಂಸ್ಕೃತಿಕ ಮಜಲುಗಳು ಎಲ್ಲವೂ ಸೇರಿ ಹೇಗೆ ನಮ್ಮ ಸಮಾಜವನ್ನು ಆರೋಗ್ಯವಂತವಾಗಿಡಲು ಸಾಧ್ಯ ಎಂಬುದರ ಕುರಿತು ಸವಿವರವಾಗಿ ತಿಳಿಸಿದರು.

ಲಕ್ಷ್ಮೇಶ್ವರ ಎಸ್ಟೇಟ್ ಮಾಲೀಕ ಹಾಗೂ ಕೃತಿಗೆ ಆರ್ಥಿಕ ಸಹಾಯ ನೀಡಿದ್ದ ಪಿ ಆರ್ ಗಾಂಧಿರಾವ್, ಸುಭಾಷ್ ಕಾರೇಕಾಡ್,
ಸಾಹಿತಿಗಳು, ಸಾಹಿತ್ಯಾಸಕ್ತರು ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...