ಕೊಡಗು | ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭೇಟಿ; ಹಲವು ಪ್ರಶ್ನೆಗಳಿಗೆ ಉತ್ತರಿಸುವಂತೆ ಎಸ್‌ಡಿಪಿಐ ಮನವಿ

Date:

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಕೊಡಗು ಜಿಲ್ಲೆಗೆ ಭೇಟಿ ನೀಡುತ್ತಿರುವ ಸಂದರ್ಭದಲ್ಲಿ ಜಿಲ್ಲೆಯ ವಿಚಾರವಾಗಿ ಹಲವು ಪ್ರಶ್ನೆಗಳನ್ನು ಮುಂದಿರಿಸಿ ಉತ್ತರಿಸುವಂತೆ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೋಸಿನ್ ಒತ್ತಾಯಿಸಿದರು.

ಪತ್ರಿಕಾ ಹೇಳಿಕೆಯಲ್ಲಿ ಮನವಿ ಮಾಡಿರುವ ಅವರು, “2015ರಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಹೆಚ್ ಕಾಂತರಾಜ್ ಅವರು ವೈಜ್ಞಾನಿಕವಾಗಿ ತಯಾರಿಸಿದ ಹಿಂದುಳಿದ ವರ್ಗಗಳ ಜಾತಿ ಜನಗಣತಿ ವರದಿಯನ್ನು ಸಚಿವ ಸಂಪುಟದಲ್ಲಿ ಈವರೆಗೆ ಏಕೆ ಅಂಗೀಕರಿಸಿಲ್ಲ?. ವಿಧಾನಸಭೆ ಹಾಗೂ ಪರಿಷತ್ತಿನಲ್ಲಿ ಚರ್ಚೆಗೆ ಮಂಡಿಸಿಲ್ಲ? ರಾಹುಲ್ ಗಾಂಧಿಯವರು ಕೇಂದ್ರ ಮಟ್ಟದಲ್ಲಿ ಜಾತಿ ಜನಗಣತಿಗೆ ಒತ್ತು ನೀಡುತ್ತಿರುವಾಗ ರಾಜ್ಯದಲ್ಲಿ ಕಾಂತರಾಜ್ ಆಯೋಗದ ಶಿಫಾರಸು ಅನುಷ್ಠಾನಗೊಳಿಸಲು ಹಿಂದೇಟು ಹಾಕುತ್ತಿರುವುದು ಏಕೆ?” ಎಂದು ಕೇಳಿದರು.

“2023ರ ಚುನಾವಣೆ ಪ್ರಣಾಳಿಕೆಯ ಭರವಸೆಯಂತೆ ಹಿಂದಿನ ಬಿಜೆಪಿ ಸರ್ಕಾರ ಮುಸಲ್ಮಾನರಿಂದ ಕಿತ್ತುಕೊಂಡ ಶೇ.4ರಷ್ಟು 2ಬಿ ಮೀಸಲಾತಿಯನ್ನು ಮರುಸ್ಥಾಪಿಸುವ ಬದ್ಧತೆ ಏನಾಯಿತು? ಗೆದ್ದು ಅಧಿಕಾರಕ್ಕೆ ಬಂದ ಮೊದಲನೆಯ ಮಂತ್ರಿಮಂಡಲದಲ್ಲಿ ಅನುಷ್ಠಾನಗೊಳಿಸುವ ವಾಗ್ದಾನ ಜಾರಿಗೆ ಏಕೆ ಮುಂದಾಗುತ್ತಿಲ್ಲ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಎಸ್‌ಡಿಪಿಐ ಕೊಡಗು ಜಿಲ್ಲಾಧ್ಯಕ್ಷ 1

“ಸರ್ಕಾರದ ಭೂಮಿಯನ್ನು ಅಕ್ರಮವಾಗಿ ಹಿಡಿದಿಟ್ಟುಕೊಂಡಿರುವ ಭೂ ಹಿಡುವಳಿದಾರರಿಗೆ ಎಕರೆಗೆ ₹1000ದಂತೆ 25 ಎಕರೆವರೆಗೂ 30 ವರ್ಷಕ್ಕೆ ಗುತ್ತಿಗೆ ನೀಡಲು 2023ರ ಮೇ 18ರಂದು ಹೊರಡಿಸಿರುವ ಕರ್ನಾಟಕ ರಾಜ್ಯ ಆದೇಶ ಪತ್ರವನ್ನು ರದ್ದುಗೊಳಿಸಿ, ಶತಮಾನಗಳಿಂದ ಪಾರಂಪರಿಕ ನಿವೇಶನ ಹಾಗೂ ಭೂರಹಿತ ಬಡಕುಟುಂಬಗಳ ಸಮೀಕ್ಷೆ ನಡೆಸಿ ಹಕ್ಕುಪತ್ರ, ಪಹಣಿ ನೀಡಲು ಮುಂದಾಗುವಿರಾ? ಅಥವಾ ಭೂಹಿಡುವಳಿದಾರ ಬಲಾಢ್ಯ ಸಮಾಜದ ಪರವಾಗಿ ನಿಲ್ಲುವಿರಾ?” ಎಂದು ಕೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾಸನ | ಒಳಮೀಸಲಾತಿ ಅನುಷ್ಠಾನಕ್ಕೆ ಜನಪರ ಚಳುವಳಿಗಳ ಒಕ್ಕೂಟ ಆಗ್ರಹ

“ಸಂಸತ್ತಿನ ಜಂಟಿ ಸಮಿತಿಯು ವಕ್ಫ್(ತಿದ್ದುಪಡಿ) ಮಸೂದೆಗೆ ಬಹುತೇಕ ಬಿಜೆಪಿ ಸಂಸದರು ಸೂಚಿಸಿರುವ ಬದಲಾವಣೆಗಳನ್ನು ಎತ್ತಿ ಹಿಡಿದಿದ್ದು, ವಿರೋಧ ಪಕ್ಷದ ಸದಸ್ಯರ ಸಲಹೆಗಳಿಗೆ ಮನ್ನಣೆ ನೀಡದೆ ಮತದಾನದ ನಂತರ ಸದನಕ್ಕೆ ವರದಿ ಸಲ್ಲಿಸಲು ಮುಂದಾಗಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕರ್ನಾಟಕ ಸರ್ಕಾರ ಯಾವ ನಿಲುವನ್ನು ತೆಗೆದುಕೊಳ್ಳಲಿದೆ?. ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಬೀಳುವ ಹಂತದಲ್ಲಿದ್ದ ಕೊಡಗು ಜಿಲ್ಲಾಧಿಕಾರಿಯವರ ಕಚೇರಿ ಮುಂಭಾಗದ ತಡೆಗೋಡೆಯ ಕಾಮಗಾರಿಯನ್ನು ತ್ವರಿತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸುವ ಆದೇಶ ನೀಡಿ ಒಂದೂವರೆ ವರ್ಷ ಕಳೆದರೂ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಈ ಕಾಮಗಾರಿ ಪೂರ್ಣಗೊಳ್ಳಬೇಕಾದರೆ ಇನ್ನೆಷ್ಟು ಬಾರಿ ಅಧಿಕಾರಿಗಳಿಗೆ ತಾವು ಆದೇಶ ನೀಡಬೇಕಾಗಿದೆ” ಎಂದು ಪ್ರಶ್ನಿಸಿದರು.

“ಸಿದ್ದರಾಮಯ್ಯ 1.0 ಎಂದರೆ ಧೈರ್ಯ, ಸಮರ್ಥ, ಮಾತಿಗೆ ಬದ್ಧ, ನುಡಿದಂತೆ ನಡೆಯುವ ವ್ಯಕ್ತಿತ್ವ. ಸಿದ್ದರಾಮಯ್ಯ 2.0 ಬದಲಾಗಿದ್ದಾರಾ?” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...