ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ, ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್ ಟ್ರಸ್ಟ್ನ ಸಹಯೋಗದೊಂದಿಗೆ ಎಪ್ರಿಲ್.28ರಂದು ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಬ್ಯಾರಿ ಅಕಾಡೆಮಿ ಅಧ್ಯಕ್ಷರಾದ ಉಮರ್ ಯು. ಹೆಚ್ ಮಾಹಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ವಿಶೇಷ ವಿಡಿಯೋ ವೀಕ್ಷಿಸಿ:https://www.youtube.com/watch?v=eXeAlpsxb6g
ಮಡಿಕೇರಿಯಲ್ಲಿ ನಡೆದ ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್ ಟ್ರಸ್ಟ್ನ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು, ಸಮ್ಮೇಳನದ ಅಂಗವಾಗಿ ಮಹಿಳೆಯರು, ಪುರುಷರು ಮತ್ತು ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು, ಸಮ್ಮೇಳನದ ಸ್ವರೂಪ ಮತ್ತು ಕಾರ್ಯಕ್ರಮಗಳ ವಿವರ ನೀಡಿದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ಪ್ರಸ್ತುತ ಸಾಲಿನ ರಾಜ್ಯ ಬಜೆಟ್ ನಲ್ಲಿ ಕೃಷಿಗೆ ಮೊದಲ ಆಧ್ಯತೆ ನೀಡಿ: ಬಡಗಲಪುರ ನಾಗೇಂದ್ರ
ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್ ಟ್ರಸ್ಟ್ನ ಉಪಾಧ್ಯಕ್ಷ ಎಂ.ಎ. ನಾಸಿರ್, ಮಾಜಿ ಅಧ್ಯಕ್ಷ ಬಿ.ಎ. ಶಂಷುದ್ದೀನ್, ಟ್ರಸ್ಟ್ನ ನಿಕಟಪೂರ್ವ ಅಧ್ಯಕ್ಷ ಎಸ್.ಪಿ. ಮುನೀರ್ ಅಹ್ಮದ್, ಅಬ್ದುಲ್ಲಾ, ಎಂ.ಯು. ಖಾಲಿದ್, ಅಬ್ದುಲ್ ರಹಿಮಾನ್, ಅಹ್ಮದ್ ಕಬೀರ್, ಅಶ್ರಫ್, ತಾಜುದ್ದೀನ್, ಕಲೀಂ ಅಹ್ಮದ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಮುಹಮ್ಮದ್ ಶರೀಫ್ ಸೇರಿದಂತೆ ಇನ್ನಿತರರು ಇದ್ದರು.





