ಕೊಡಗು | ಶಾಸ್ತ್ರೀಯ ಕಲಾವಿದರಿಗಿಂತ ಜಾನಪದ ಕಲಾವಿದರು ಕಡಿಮೆಯೇನಿಲ್ಲ: ಜರಗನಹಳ್ಳಿ ಕಾಂತರಾಜು

Date:

ಜಾನಪದ ಕಲಾವಿದರು ಅನಾಥರಲ್ಲ. ಅವರೆಲ್ಲರನ್ನೂ ಸೇರಿಸಿ ನೇಪಾಳದಲ್ಲಿ ಸರ್ಕಾರಕ್ಕೆ ಮಾರ್ಗದರ್ಶಿಯಾಗಿರುವಂತೆ ಜನಪದ ಸಿರಿ ಕನ್ನಡ ವಾಹಿನಿ ವತಿಯಿಂದ ಬರುವ ತಿಂಗಳಿನಲ್ಲಿ ಅಂತರಾಷ್ಟೀಯ ಕಾರ್ಯಕ್ರಮ ಮಾಡಿ, ಶಾಸ್ತ್ರೀಯ ಕಲಾವಿದರಿಗಿಂತ ಜಾನಪದ ಕಲಾವಿದರು ಕಡಿಮೆಯೇನಿಲ್ಲವೆಂದು ತೋರಿಸುವ ಕಾರ್ಯಕ್ರಮ ಇದಾಗಿದೆ ಎಂದು ಜನಪದ ಸಿರಿಯ ಜರಗನಹಳ್ಳಿ ಕಾಂತರಾಜು ಅಭಿಪ್ರಾಯಪಟ್ಟರು.

ಕೊಡಗು ಜಿಲ್ಲೆಯ ಕುಶಾಲನಗರದ ಜನಪದ ಸಿರಿ ದೇಸಿ ಚಾನೆಲ್ ಅರ್ಪಿಸುವ ವೀರಭೂಮಿ ಜನಪದ ಗ್ರಾಮ ಸಹಯೋಗದಲ್ಲಿ ನಡೆದ ʼಜನರ ಬಳಿಗೆ ಜಾನಪದ ವೇದಿಕೆʼ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಕುಶಾಲನಗರದ ಪ್ರಖ್ಯಾತ ವೀರಭೂಮಿ ರೆಸ್ಟೋರೆಂಟ್ ಇಂದಿನಿಂದ ಜಾನಪದ ಕಲಾಗ್ರಾಮವೆಂದು ಸಾಕ್ಷಿಯಾಗಲು ಎಲ್ಲ ನಮ್ಮ ಕಲಾವಿದರು ಸಜ್ಜಾಗಿದ್ದೀರಿ” ಎಂದು ಹರ್ಷ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಚ್ ಎಲ್ ನಾಗೇಗೌಡ ಸ್ಥಾಪಿತ ಕರ್ನಾಟಕ ಜಾನಪದ ಪರಿಷತ್ ಯುನೆಸ್ಕೊ ಮಾನ್ಯತೆ ಪಡೆದಿದ್ದರಿಂದ ಅದರ ಈಗಿನ ಅಧ್ಯಕ್ಷ ಜಾನಪದ ವಿದ್ವಾಂಸ ಡಾ. ಹಿ ಚಿ ಬೋರಲಿಂಗಯ್ಯ ಅವರು ದೂರವಾಣಿಯ ಮುಖಾಂತರ ಹರ್ಷವ್ಯಕ್ತಪಡಿಸಿ, ತಮಿಳುನಾಡಿನಲ್ಲಿ ಪರಿಷತ್‌ನ ಶಾಖೆ ಪ್ರಾರಂಭವಾಗುತ್ತಿದೆಯೆಂದು ತಿಳಿಸಿದ್ದಾರೆ” ಎಂದರು.

ರಾಜ್ಯದ ನಾನಾ ಜಿಲ್ಲೆಗಳಿಂದ ಬಂದ 150 ಮಂದಿ ಮೂಲ ಜಾನಪದ ಕಲಾವಿದರು ತಮ್ಮ ತಂಡದೊಂದಿಗೆ ಕಲಾಪ್ರದರ್ಶನ ಪ್ರಸ್ತುತಪಡಿಸಿದವು ಹಾಗೂ ಪ್ರಖ್ಯಾತ ಹಾಡುಗಾರರಾದ ಮೈಸೂರು ಗುರುರಾಜ್, ಉಮಾ ವೈ ಜಿ, ಜುಂಜಪ್ಪ ಖ್ಯಾತಿಯ ಮೋಹನ್ ಕುಮಾರ್, ಆರ್ ರವಿಕುಮಾರ್, ಆರ್ ಮಹೇಂದ್ರ, ಗೌತಮಿ ಮಧುಸೂಧನ್ ಹಾಗೂ ಪದ್ಮಶ್ರೀ ಹಾಡಿ ಪ್ರೇಕ್ಷಕರನ್ನು ರಂಜಿಸಿದರು.

ಜನಪದ ಕಲಾವಿದರು ಪುರಿಗಾಲಿ ಮಹಾದೇವಸ್ವಾಮಿ, ಕೈಲಾಸ ಮೂರ್ತಿ, ಕೆಬ್ಬೇಪುರ ಸಿದ್ಧರಾಜು ಜನಪದ ಮಹಾಕಾವ್ಯಗಳನ್ನು ಪ್ರಸ್ತುತಪಡಿಸಿದರು. ವಿಶೇಷವಾಗಿ ಉಡುಪಿ ಜಿಲ್ಲೆಯ ಕಟಪಾಡಿ ಕಲೆ, ಕೊಡಗು ಜಿಲ್ಲೆಯ ಉಮ್ಮತ್ತಾಟ್ ಕಲೆ, ಸಿದ್ಧಿ ಜನಾಂಗದ ಮಹಿಳಾ ಕಲೆ, ಮಂಡ್ಯ ಕಲಾವಿದರ ಪೂಜಾ ಕುಣಿತ ಪ್ರೇಕ್ಷಕರ ಗಮನ ಸೆಳೆಯಿತು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಹೊನ್ನಟಗಿ ಗ್ರಾಮವು ಹೆಸರಿಗೆ ಮಾತ್ರ ಆದರ್ಶ ಗ್ರಾಮ; ಅಭಿವೃದ್ಧಿ ಮರೀಚಿಕೆ

ಕಾರ್ಯಕ್ರಮಕ್ಕೂ ಮುನ್ನ ದಿ ನಾಡೋಜ ಎಚ್ ಎಲ್ ನಾಗೇಗೌಡ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಅರ್ಪಿಸುವುದರ ಮೂಲಕ ಖ್ಯಾತ ವಿದ್ವಾಂಸರಾದ ಡಾ. ಕುರುವ ಬಸವರಾಜ, ಪದ್ಮಶ್ರೀ ಡಾ. ರಾಣಿ ಮಾಚಯ್ಯ, ಜಗದೀಶ ಮಲ್ನಾಡ್ ಉದ್ಘಾಟನೆ ನೆರವೇರಿಸಿದರು.

ವೇದಿಕೆಯಲ್ಲಿ ವೀರಭೂಮಿ ಕಲಾಗ್ರಾಮದ ಹೆಚ್ ಆರ್ ನಾಗೇಂದ್ರ, ಪುಷ್ಪ, ಬಿ ಸಿದ್ಧರಾಜಯ್ಯ ಕಲಾಗ್ರಾಮದ ಬಳಗ ಮತ್ತು ಇತರರು ಇದ್ದರು.

ವರದಿ: ಶಿವರಾಜ್ ಮೋತಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...