ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕೊಡಮಾಡುವ ‘ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ’ಗೆ ಕೊಡಗು ಜಿಲ್ಲೆಯ ಮಹಿಳಾ ಲೇಖಕಿಯರು ಪ್ರಕಟಿಸಿದ ಕನ್ನಡ ಭಾಷೆಯ ಕೃತಿಗಳನ್ನು ಆಹ್ವಾನಿಸಲಾಗಿದೆ.
2025-26ನೇ ಪ್ರಸಕ್ತ ಸಾಲಿನ ಪ್ರಶಸ್ತಿ ಪುರಸ್ಕಾರ ಪಡೆಯಲು ಆಸಕ್ತ ಮಹಿಳಾ ಲೇಖಕಿಯರು ತಾವು ರಚಿಸಿದ ಸೃಜನಶೀಲ, ಸಮಾಜಮುಖಿ ಕಥೆ, ಕಾದಂಬರಿ, ಕವನ ಸಂಕಲನ ಕೃತಿಗಳ ನಾಲ್ಕು ಪ್ರತಿಗಳನ್ನು ಅರ್ಜಿಯೊಂದಿಗೆ ಕಳುಹಿಸಿ ತಕ್ಕದ್ದು.
2020ರ ನಂತರ ಪ್ರಕಟಿತ ಪುಸ್ತಕಗಳನ್ನು ಮಾತ್ರ ಕಳುಹಿಸಿತಕ್ಕದ್ದು. ಪ್ರಶಸ್ತಿ ಆಯ್ಕೆಗೆ ಕಳಿಸುವ ಪುಸ್ತಕದ ಲೇಖಕಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಿರಬೇಕು. ಓರ್ವ ಲೇಖಕಿ ಒಂದು ಕೃತಿಯನ್ನು ಮಾತ್ರ ಕಳುಹಿಸಬಹುದು. ಕೊಡಗು ಜಿಲ್ಲೆಯ ಲೇಖಕಿಯರಿಗೆ ಮಾತ್ರ ಅವಕಾಶ.
ಈ ಸುದ್ದಿ ಓದಿದ್ದೀರಾ? ಕೊಡಗು | ಗೌರಮ್ಮ ದತ್ತಿ ಪ್ರಶಸ್ತಿಗೆ ಭಾಜನರಾದ ಸಾಹಿತಿ ಪೂಜಾರಿರ ಕೃಪಾ ದೇವರಾಜ್
ಲಕೊಟೆಯ ಮೇಲೆ ‘ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ’ಗೆ ಎಂದು ಬರೆದು, ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಂಬೇಡ್ಕರ್ ಭವನದ ಬಳಿ, ಸುದರ್ಶನ ವೃತ್ತ, ಮಡಿಕೇರಿ. ಮೊಬೈಲ್ ಸಂಖ್ಯೆ-94483 46276. ಇವರಿಗೆ ದಿನಾಂಕ-25-01-2026ರ ಒಳಗಾಗಿ ತಲುಪಿಸಬೇಕೆಂದು ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ಕೋರಿರುತ್ತಾರೆ.





