ಕೊಡಗು | ಕಿತ್ತೂರು ರಾಣಿ ಚೆನ್ನಮ್ಮ ಜೀವನ ಚರಿತ್ರೆ ಎಲ್ಲರೂ ತಿಳಿದುಕೊಳ್ಳಬೇಕು: ಜಿಲ್ಲಾಧಿಕಾರಿ ವೆಂಕಟ್ ರಾಜಾ

Date:

ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ ನಡೆಯಿತು.

‘ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ಮಹಾನ್ ವ್ಯಕ್ತಿಗಳ ಜೀವನ ಚರಿತ್ರೆ ಎಲ್ಲರೂ ತಿಳಿದುಕೊಳ್ಳಬೇಕು’ ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು.

1824 ರಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಅವರು ಬ್ರಿಟೀಷರ ವಿರುದ್ದ ಹೋರಾಟ ನಡೆಸಿ ಇಂದಿಗೆ 200 ವರ್ಷ ಘಟಿಸಿದೆ. ಚೆನ್ನಮ್ಮ ಜೊತೆ ಸಂಗೊಳ್ಳಿರಾಯಣ್ಣ ಸಹ ಹೋರಾಡಿದ್ದರು. ಪ್ರತಿ ದಿನ ಪ್ರತಿ ಕ್ಷಣ ಅವರ ನೆನಪು ಇರಬೇಕು. ನೆನಪಷ್ಟೇ ಅಲ್ಲದೆ ಅವರ ಜೀವನ ಸಂದೇಶವನ್ನು ಪಾಲಿಸಬೇಕು. ಆಗ ಅವರ ಕನಸು ನನಸಾಗುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಲೆ ಮಹೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸಿದ್ದರಾಜು ಬೆಳ್ಳಯ್ಯ ಮಾತನಾಡಿ, ಕಿತ್ತೂರು ರಾಣಿ ಚೆನ್ನಮ್ಮ ಭರತ ಖಂಡದ ಸ್ವಾಭಿಮಾನದ ಪ್ರತೀಕ. ದೇಶಕ್ಕೆ ದಿಕ್ಸೂಚಿ ತೋರಿಸಿದ್ದಾರೆ. ಈ ದಿಕ್ಸೂಚಿಯಡಿ ನಾವೆಲ್ಲರೂ ನಡೆಯಬೇಕು. ಹುಟ್ಟು ಆಕಸ್ಮಿಕ, ಸಾವು ಖಚಿತ ಎಂಬಂತೆ ಬದುಕು ಹೇಗಿರಬೇಕು ಎಂದರೆ ನಮ್ಮ ಬಗ್ಗೆ ಬೇರೆಯವರು ಬರೆದಿಡಬೇಕು. ‘ಧೈಯಂ ಸರ್ವತ್ರ ಸಾಧನಂ’ ಎಂಬಂತೆ 1824ರಲ್ಲಿ ಬ್ರಿಟೀಷರ ವಿರುದ್ದ ದೇಶಕ್ಕಾಗಿ ಹೋರಾಡಿದರು. ತೊಟ್ಟಿಲನ್ನು ತೂಗುವ ಕೈ ದೇಶವನ್ನು ಆಳಬಲ್ಲುದು ಎಂಬುದನ್ನು ಕಿತ್ತೂರು ರಾಣಿ ಚೆನ್ನಮ್ಮ ಅವರು ಸಾಬೀತುಪಡಿಸಿದರು ಎಂದರು.

ಕಿತ್ತೂರು ರಾಣಿ ಚೆನ್ನಮ್ಮ ಅವರು ನಿರಂತರ ಕತ್ತಿವರಸೆ, ಬಿಲ್ಲುಗಾರಿಕೆ ತರಬೇತಿ ಪಡೆದಿದ್ದರು. ನಿರಂತರವಾದ ಒಳ್ಳೆಯ ಅಭ್ಯಾಸಗಳು ನಮ್ಮನ್ನು ಉತ್ತಮಗೊಳಿಸುತ್ತದೆ. ಕಿತ್ತೂರು ರಾಣಿ ಚೆನ್ನಮ್ಮ ಅವರು 1778 ರ ಅಕ್ಟೋಬರ್, 23 ರಂದು ಅಂದಿನ ಅಖಂಡ ಧಾರಾವಾಡದ (ಇಂದಿನ ಬೆಳಗಾವಿ ಜಿಲ್ಲೆಯ) ಕಾಕತಿ ಎಂಬ ಗ್ರಾಮದಲ್ಲಿ ಜನಿಸಿದರು ಎಂದು ತಿಳಿಸಿದರು.

ಕಿತ್ತೂರು ರಾಣಿ ಚೆನ್ನಮ್ಮ ಅವರ ಸಾಹಸ, ಶೌರ್ಯ, ಧೈರ್ಯ, ದೇಶಪ್ರೇಮದ ಪ್ರತಿರೂಪ. ಕನ್ನಡದ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅವರಂತೆ ಎಲ್ಲರೂ ರಾಷ್ಟ್ರಾಭಿಮಾನ ಬೆಳೆಸಿಕೊಳ್ಳಬೇಕು ಎಂದರು.

ಇದನ್ನು ಓದಿದ್ದೀರಾ? ಚನ್ನಪಟ್ಟಣ ಉಪಚುನಾವಣೆ | ‌ಮ‌ತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಮುಂದಾದ ನಿಖಿಲ್‌ ಕುಮಾರಸ್ವಾಮಿ

ಬ್ಲಾಸಂ ಶಾಲೆಯ ಮುಖ್ಯ ಶಿಕ್ಷಕಿ ಅನಸೂಯ ಮಾತನಾಡಿ, ಕಿತ್ತೂರು ಚೆನ್ನಮ್ಮನವರು ತಮ್ಮ ಪತಿಯ ಮರಣದ ನಂತರ ಕಿತ್ತೂರು ರಾಣಿ ಚೆನ್ನಮ್ಮ ರಾಣಿಯಾಗುತ್ತಾರೆ. ಬ್ರಿಟೀಷರ ವಿರುದ್ದ ಕನ್ನಡದ ಮಹಿಳೆ ಹೋರಾಡಿ ಭಾರತದ ನಾರಿಶಕ್ತಿಯನ್ನು ಪ್ರದರ್ಶಿಸಿದ್ದಾರೆ. ಅವರನ್ನು ದೇಶದಾದ್ಯಂತ ಸ್ಮರಿಸುವಂತಾಗಬೇಕು ಎಂದರು.

ಅನೂಪ್ ಮಾದಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಕುಮಾರ್, ಭವ್ಯ, ಮಣಜೂರು ಮಂಜುನಾಥ್ ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...