ಕೊಡಗು | ಮಹಾತ್ಮ ಗಾಂಧಿಯವರ ʼನನ್ನ ಜೀವನವೇ, ನನ್ನ ಸಂದೇಶʼ ಎಲ್ಲರ ಬದುಕಿಗೆ ಆದರ್ಶವಾಗಬೇಕು: ವೆಂಕಟ್ ರಾಜಾ

Date:

ಮಹಾತ್ಮ ಗಾಂಧೀಜಿಯವರ ‘ನನ್ನ ಜೀವನವೇ, ನನ್ನ ಸಂದೇಶ’ ಎಂಬ ಮಾತು ಎಲ್ಲರ ಜೀವನಕ್ಕೂ ಆದರ್ಶವಾಗಬೇಕು. ಆ ನಿಟ್ಟಿನಲ್ಲಿ ಪ್ರತಿಯೊಬ್ಬರ ಬದುಕು, ಜೀವನದ ಸಂದೇಶವಾಗುವಂತೆ ಬಾಳಬೇಕು ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ
ಪ್ರತಿಪಾದಿಸಿದರು.

ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಡಿಕೇರಿಯ ಗಾಂಧಿ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಪದವಿ ಪೂರ್ವ ಶಿಕ್ಷಣ, ಕಾಲೇಜು ಶಿಕ್ಷಣ ಇಲಾಖೆ, ನಗರಸಭೆ, ಸರ್ವೋದಯ ಸಮಿತಿ, ಕನ್ನಡ ಸಾಹಿತ್ಯ ಪರಿಷತ್ತು, ಸ್ಕೌಟ್ಸ್ ಮತ್ತು ಗೈಡ್ಸ್, ಜಾನಪದ ಪರಿಷತ್ತು ಹಾಗೂ ಭಾರತೀಯ ಸೇವಾದಳ ಇವರ ಸಹಕಾರದಲ್ಲಿ ಹಮ್ಮಿಕೊಂಡಿದ್ದ “ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 155ನೇ ಮತ್ತು ಮಾಜಿ ಪ್ರಧಾನ ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 120 ನೇ ಜನ್ಮ ವರ್ಷಾಚರಣೆ” ಕಾರ್ಯಕ್ರಮದಲ್ಲಿ ಮಾತನಾಡಿದರು.

“ವಿಶ್ವಸಂಸ್ಥೆ ಸೇರಿದಂತೆ ದೇಶ ವಿದೇಶಗಳಲ್ಲಿಯೂ ಕೂಡಾ ಗಾಂಧೀಜಿಯವರ ಪುತ್ಥಳಿಯನ್ನು ಕಾಣಬಹುದಾಗಿದೆ. ವಿಶ್ವ ಸಂಸ್ಥೆಯು ಗಾಂಧೀಜಿ ಜನ್ಮ ದಿನವನ್ನು ‘ವಿಶ್ವ ಅಹಿಂಸಾ’ ದಿನವನ್ನಾಗಿ ಘೋಷಿಸಿ, ಆಚರಿಸುತ್ತಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಶ್ವ ನಾಯಕರು ಗಾಂಧೀಜಿಯವರ ಜೀವನ ಬೋಧನೆಯನ್ನು ಪಾಲಿಸುತ್ತಾರೆ. ಗಾಂಧೀಜಿಯವರ ಜೀವನ ಹಾಗೂ ಲಾಲ್ ಬಹದ್ದೂರ್‌ ಶಾಸ್ತ್ರಿಯವರ ಸರಳ ಜೀವನ ಎಲ್ಲರಿಗೂ ಮಾದರಿ” ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದರು.

ಸರ್ವೋದಯ ಸಮಿತಿ ಮಾಜಿ ಅಧ್ಯಕ್ಷ ಟಿ ಪಿ ರಮೇಶ್ ಮಾತನಾಡಿ, “ಭಾರತಕ್ಕೆ ಅಹಿಂಸಾ ಮಾರ್ಗದ ಮೂಲಕ ಸ್ವಾತಂತ್ರ್ಯವನ್ನು ತಂದುಕೊಟ್ಟ ಗಾಂಧೀಜಿ, ಇಡೀ ವಿಶ್ವಕ್ಕೆ ಶಾಂತಿ ಸ್ಥಾಪಿಸಿದ್ದರು. ಗಾಂಧೀಜಿಯವರು ಜಗತ್ತು ಕಂಡ ಒಬ್ಬ ಶ್ರೇಷ್ಠ ಸಮಾಜ ಸುಧಾರಕ, ಸತ್ಯಾಗ್ರಹಿ, ಪತ್ರಕರ್ತರಾಗಿ ಗ್ರಾಮ ಸ್ವರಾಜ್ಯದ ಹರಿಕಾರರಾಗಿ ವಿವಿಧ ಕ್ಷೇತ್ರಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಲಾಲ್ ಬಹದ್ದೂರು ಶಾಸ್ತ್ರಿಯವರು ಭಾರತದ ಎರಡನೇ ಪ್ರಧಾನಮಂತ್ರಿಯಾಗಿ ಸರಳ, ಸಜ್ಜನಿಕೆಗೆ ಹೆಸರು ವಾಸಿಯಾಗಿದ್ದರು. ಸೇನೆ ಮತ್ತು ಕೃಷಿಗೆ ಹೆಚ್ಚಿನ ಒತ್ತು ನೀಡಿದವರಾಗಿದ್ದರು” ಎಂದು
ಹೇಳಿದರು.

ಜಾನಪದ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಬಿ ಜಿ ಅನಂತಶಯನ ಮಾತನಾಡಿ‌, “ಗಾಂಧೀಜಿಯವರ ವಿಚಾರಧಾರೆಗಳನ್ನು ತಿಳಿದುಕೊಳ್ಳಲು ಪ್ರತಿಯೊಬ್ಬರೂ ಪುಸ್ತಕ ಅಧ್ಯಯನ ಮಾಡುವಂತಾಗಬೇಕು. ಗಾಂಧೀಜಿಯವರು ಅಹಿಂಸಾ ಮಾರ್ಗದ ಮೂಲಕ ಸ್ವಾತಂತ್ರ್ಯ ತಂದುಕೊಟ್ಟರು.
ಸತ್ಯಕ್ಕಾಗಿ ಹೋರಾಟ ಗಾಂಧಿ ಕಲಿಸಿದ ಪಾಠವಾಗಿದೆ” ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರ್ ಐಶ್ವರ್ಯ ಮಾತನಾಡಿ, “ಗಾಂಧೀಜಿ ಸ್ವಾತಂತ್ರ್ಯದ ಪ್ರತೀಕ, ಗ್ರಾಮ ಸ್ವರಾಜ್ಯದ ಸಾಕಾರ ಮೂರ್ತಿ, ಎಲ್ಲರ ಮೆಚ್ಚಿನ ಬಾಪು” ಎಂದು ವರ್ಣಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಮೆಟ್ರೋ ಆಸ್ಪತ್ರೆಯಲ್ಲಿ ಆರಬೈಟಲ್ ಅಥೆರೆಕ್ಟಮಿ ಚಿಕಿತ್ಸೆ ಯಶಸ್ವಿ

ಸ್ಕೌಟ್ಸ್ ಮತ್ತು ಗೈಡ್ಸ್‌ನ ಪ್ರಧಾನ ಆಯುಕ್ತ ಕೆ ಟಿ ಬೇಬಿ ಮ್ಯಾಥ್ಯೂ ಮಾತನಾಡಿ, “ಗಾಂಧೀಜಿ ಕರ್ನಾಟಕ ರಾಜ್ಯಕ್ಕೆ ಹಲವು ಬಾರಿ ಭೇಟಿ ನೀಡಿ, ಕೊಡಗು ಜಿಲ್ಲೆಗೂ ಭೇಟಿ ನೀಡಿದ್ದು ವಿಶೇಷ” ಎಂದು ಸ್ಮರಿಸಿದರು.

ಪದ್ಮಶ್ರೀ ಪ್ರಶಸ್ತಿ ಪುರಸ್ಕತೆ ರಾಣಿ ಮಾಚಯ್ಯ, ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ ಎಸ್ ಸುಂದರರಾಜ್, ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ಲು ಕುಶಾಲಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪ ನಿರ್ದೇಶಕ ಸಿ ರಂಗಧಾಮಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಮಂಜುಳ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ ಬಸಪ್ಪ, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಸಿದ್ದೇಗೌಡ, ತಹಶೀಲ್ದಾರ್ ಪ್ರವೀಣ್ ಕುಮಾರ್, ಪೌರಾಯುಕ್ತ ರಮೇಶ್, ಬಿಸಿಎಂ ಇಲಾಖೆ ಅಧಿಕಾರಿ ಕವಿತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಸ್ಕೌಟ್ಸ್ ಮತ್ತು ಗೈಡ್ಸ್ ನ ದಮಯಂತಿ, ಅಂಬೆಕಲ್ಲು ನವೀನ್, ಸಂಪತ್ ಕುಮಾರ್, ಟಿ ಎಂ ಮುದ್ದಯ್ಯ, ಹರಿಣಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...