ಕೊಡಗು | ಮಕ್ಕಳ ಮಾನಸಿಕತೆ, ಬೌದ್ಧಿಕ ಜ್ಞಾನದ ಮೇಲೆ ಮೊಬೈಲ್ ತರಂಗಗಳ ದುಷ್ಪರಿಣಾಮ: ಡಾ ಸೌರೇಶ್ ಹೆಗಡೆ

Date:

ಮಕ್ಕಳ ಮಾನಸಿಕತೆ, ಬೌದ್ಧಿಕ ಜ್ಞಾನದ ಮೇಲೆ ಮೊಬೈಲ್ ತರಂಗಗಳು ದುಷ್ಪರಿಣಾಮ ಬೀರುತ್ತವೆ. ಭಾವಿ ಪ್ರಜೆಗಳ ನಿರ್ಮಾಣಕ್ಕಾಗಿ ನಾವೆಲ್ಲರೂ ಮೊಬೈಲ್ ಬಳಕೆಯ ದುಷ್ಪರಿಣಾಮದ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಬೇಕು ಎಂದು ಸುಳ್ಯದ ಕೆವಿಜಿ ವೈದ್ಯಕೀಯ ಆಸ್ಪತ್ರೆಯ ಡಾ ಸೌರೇಶ್ ಹೆಗಡೆ ಕರೆ ನೀಡಿದರು.

ಕೊಡಗು ಜಿಲ್ಲೆಯ ಮಡಿಕೇರಿ ನಗರದ ಹೊಸ ಬಡಾವಣೆ ಅಂಗನವಾಡಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಇತ್ತೀಚಿನ ದಿನಗಳಲ್ಲಿ ಹಿರಿಯರಿಂದ ಹಿಡಿದು ಕಿರಿಯರವರೆಗೆ ಮೊಬೈಲ್ ಬಳಕೆ ಹೆಚ್ಚಾಗುತ್ತಿದೆ. ಮೊಬೈಲ್ ಬಳಕೆಯನ್ನು ಆದಷ್ಟು ಕಡಿಮೆಗೊಳಿಸಬೇಕು, ಅದರಲ್ಲೂ ಸಣ್ಣ ಮಕ್ಕಳಿಗೆ ಮೊಬೈಲ್ ನೀಡದಿರುವುದೇ ಲೇಸು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್ಥಿಕ ಸಲಹೆಗಾರ್ಥಿ ಗೀತ ಗಿರೀಶ್ ಮಾತನಾಡಿ, “ಮಕ್ಕಳ ಪೋಷಣೆಯಲ್ಲಿ ಪೋಷಕರು ಹೆಚ್ಚಿನ ಜವಾಬ್ದಾರಿ ವಹಿಸಿಕೊಳ್ಳಬೇಕು. ಮಕ್ಕಳ ಆರೋಗ್ಯದ ಬಗ್ಗೆ ಅಂಗನವಾಡಿ ಕೇಂದ್ರಗಳಲ್ಲೂ ಕೂಡ ಹೆಚ್ಚಿನ ಜಾಗೃತಿಯಾಗಬೇಕು. ಕೊಡಗಿನ ಬಹುತೇಕ ಅಂಗನವಾಡಿಗಳಲ್ಲಿ ಮಕ್ಕಳ ಪೌಷ್ಟಿಕಾಂಶದ ಬಗ್ಗೆ ಹೆಚ್ಚಿನ ಕಾಳಜಿ ವ್ಯಕ್ತಪಡಿಸುತ್ತಿರುವುದು ಕಂಡುಬರುತ್ತಿದೆ. ಇದು ಪ್ರಶಂಸನೀಯ” ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ನ್ಯಾ. ರವೀಂದ್ರ ಹೆಗಡೆಯವರಿಗೆ ಆತ್ಮೀಯ ಬೀಳ್ಕೊಡುಗೆ

“ಇಂದಿನ ಆಹಾರ ಪದ್ಧತಿ ಮಕ್ಕಳ ಬೆಳವಣಿಗೆಗೆ ತೊಂದರೆಯನ್ನುಂಟು ಮಾಡುತ್ತದೆ. ಈ ನಿಟ್ಟಿನಲ್ಲಿ ನಾವು ತೆಗೆದುಕೊಳ್ಳುವ ಪ್ರತಿಯೊಂದು ಆಹಾರ ನೈಸರ್ಗಿಕವಾಗಿರುವುದನ್ನು ಗಮನಿಸಿ ಅಂತಹ ಆಹಾರಗಳನ್ನು ಸೇವಿಸಿದರೆ ನಮ್ಮ ದೇಹಕ್ಕೆ ಒಳಿತಾಗುತ್ತದೆ. ಇಂದು ಆಧುನಿಕ ಯುಗದಲ್ಲಿ ಎಲ್ಲರಿಗೂ ಸುಲಭವಾಗಿ ಸಿಗುವ ದಿಢೀರ್ ಆಹಾರ ಪದಾರ್ಥಗಳತ್ತ ಚಿತ್ತ ಹರಿಸುತ್ತಿರುವುದನ್ನು ನಿಲ್ಲಿಸಬೇಕಾಗಿದೆ. ನೈಸರ್ಗಿಕವಾಗಿರುವ ಆಹಾರ ಸೇವಿಸದ್ದಿದ್ದರೆ ಮುಂದೆ ನಾವು ಭಾರೀ ಬೆಲೆ ತೆತ್ತೆಬೇಕಾಗುತ್ತದೆ” ಎಂದರು.

ಹೊಸ ಬಡಾವಣೆಯ ಅಂಗನವಾಡಿ ಶಿಕ್ಷಕಿ ಮುತ್ತಮ್ಮ ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...