ಕೊಡಗು | ಪೊನ್ನಂಪೇಟೆ ತಾಲೂಕು ಕಚೇರಿಯಲ್ಲಿ ದಲ್ಲಾಳಿಗಳ ಹಾವಳಿ; ನಾಗರಿಕ ಹೋರಾಟ ಸಮಿತಿ ದೂರು

Date:

ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕು ಕಚೇರಿಯಲ್ಲಿ ಹೆಚ್ಚಿನ ಭ್ರಷ್ಟಾಚಾರ ನಡೆಯುತ್ತಿದೆ. ದಲ್ಲಾಳಿಗಳ ಹಾವಳಿ ಮಿತಿ ಮೀರಿದ್ದು ಸಾರ್ವಜನಿಕರ ಕೆಲಸ ಕಾರ್ಯಗಳು ಸುಗಮವಾಗಿ ಆಗುತ್ತಿಲ್ಲ ಎಂದು ಪೊನ್ನಂಪೇಟೆಯ ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ವಿಶ್ವನಾಥ್, ಶಾಸಕ ಎ ಎಸ್ ಪೊನ್ನಣ್ಣನವರಿಗೆ ದೂರು ನೀಡಿದ್ದಾರೆ.

ದೂರು ಪಡೆದ ಶಾಸಕ ಪೊನ್ನಣ್ಣ, ಭ್ರಷ್ಟಾಚಾರವನ್ನು ತನ್ನ ಕ್ಷೇತ್ರದಲ್ಲಿ ಸಹಿಸಲು ಸಾಧ್ಯವಿಲ್ಲ. ಭ್ರಷ್ಟಾಚಾರದಲ್ಲಿ ಭಾಗಿಯಾಗುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಲೋಕಾಯುಕ್ತರನ್ನು ತಾಲೂಕು ಕಚೇರಿಗೆ ಭೇಟಿ ನೀಡಲು ತಿಳಿಸಿದ್ದು, ಸಾರ್ವಜನಿಕರು ತಮಗಾದ ಸಮಸ್ಯೆಗಳ ಬಗ್ಗೆ ದೂರು ನೀಡುವಂತೆ ತಿಳಿಸಿದರು.

ಪೊನ್ನಂಪೇಟೆಯಲ್ಲಿ ಕೆಲವರು ಶಾಸಕರ ಹೆಸರಿನಲ್ಲಿ ದಲ್ಲಾಳಿ ವೃತ್ತಿಯನ್ನು ಆರಂಭಿಸಿದ್ದು ಕಚೇರಿ ಸಿಬ್ಬಂದಿಗಳಿಗೆ ಹಾಗೂ ಅಧಿಕಾರಿಗಳಿಗೆ ಶಾಸಕರಿಗೆ ದೂರು ನೀಡುವುದಾಗಿ ಹೆದರಿಸಿ ತಮ್ಮ ಕೆಲಸ ಕಾರ್ಯಗಳನ್ನು ಮಾಡಿಸಿಕೊಳ್ಳುತ್ತಿದ್ದಾರೆ. ತಾಲೂಕು ಕಚೇರಿ ಸರ್ವೆ ಇಲಾಖೆಯಲ್ಲಿ ಬೆಳಗಿನಿಂದಲೇ ಆಗಮಿಸಿ ಕಚೇರಿಗಳಲ್ಲಿ ಕಾಣಿಸಿಕೊಂಡು ಕಡತಗಳನ್ನು ಪರಿಶೀಲಿಸುವ ಕೆಲಸ ಮಾಡುತ್ತಿದ್ದಾರೆ. ಕೆಲವೊಮ್ಮೆ ಸಾರ್ವಜನಿಕರ ಕೆಲಸಗಳನ್ನು ಮಾಡಿಕೊಡಲು ದೊಡ್ಡವರ ಹೆಸರು ಬಳಸಿ ಹಣ ಪೀಕುತ್ತಿದ್ದಾರೆ. ಕೂಡಲೆ ಅಧಿಕಾರಿಗಳು ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡಿ ದಲ್ಲಾಳಿಗಳನ್ನು ದೂರ ಇಡುವಂತೆ ಹಾಗೂ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಮಾಡುವ ದಲ್ಲಾಳಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಕೊಡಗು | ಹೋರಾಟದಿಂದ ನೆಲೆಗೊಂಡ ಕಾನ್ಶೀರಾಂ ನಗರಕ್ಕೆ ಹದಿನೆಂಟನೇ ವರ್ಷದ ಸಂಭ್ರಮ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...