ಕೊಡಗು | ವಿದ್ಯಾಭ್ಯಾಸದ ಜತೆಗಿನ ಪೂರ್ವ ನಿಯೋಜಿತ ಗುರಿ, ಸಾರ್ಥಕ ಬದುಕು ಕಟ್ಟಿಕೊಳ್ಳಲು ಸಹಕಾರಿ: ಶಾಸಕ ಎ ಎಸ್ ಪೊನ್ನಣ್ಣ

Date:

ವಿದ್ಯಾಭ್ಯಾಸದ ಜತೆಗೆ ಪೂರ್ವ ನಿಯೋಜಿತ ಗುರಿ ಸಾರ್ಥಕ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ ಎಸ್ ಪೊನ್ನಣ್ಣ ವಿದ್ಯಾರ್ಥಿಗಳಿಗೆ ತಿಳಿಸಿದರು.

ವಿರಾಜಪೇಟೆಯಲ್ಲಿ ದಿ. ಎ ಕೆ ಸುಬ್ಬಯ್ಯ ಮತ್ತು ಪೊನ್ನಮ್ಮ ದತ್ತಿನಿಧಿ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿ, “ಪ್ರತಿಯೊಬ್ಬ ವಿಧ್ಯಾರ್ಥಿಯೂ ತಮ್ಮ ಬದುಕಿನುದ್ದಕ್ಕೂ, ವಿದ್ಯೆಯ ಜೊತೆಗೆ ಜೀವನದ ಗುರಿ, ಮುಂದಿನ ದೃಢವಾದ ಆಲೋಚನೆ, ಸಮಾಜಕ್ಕಾಗಿ ದುಡಿಯುವ ಮನಸ್ಸು, ತನ್ನಿಂದ ಜನರಿಗಾಗಿ ಏನೆಲ್ಲ ಮಾಡಬಹುದೆನ್ನುವ ಕನಸನ್ನು ಈಗಿನಿಂದಲೇ ರೂಢಿಸಿಕೊಳ್ಳುವುದು ಬಹುಮುಖ್ಯ” ಎಂದು ಹೇಳಿದರು.

“ಅರ್ಥಿಕ ಸಂಕಷ್ಟದಿಂದಾಗಿ ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸುತ್ತಿದ್ದಾರೆ. ಇನ್ನು ಪೋಷಕರ ಅಸಹಾಯಕತೆ ಪರಿಸ್ಥಿತಿ ಏನೂ ಮಾಡಲು ಸಾಧ್ಯವಿರದಾಗಿದೆ. ಇಂತಹ ಬಡ ಕುಟುಂಬದ ಮಕ್ಕಳಿಗೆ ಆರ್ಥಿಕವಾಗಿ ನೆರವಿನ ಅಗತ್ಯತೆವಿದೆ. ಸಮಾಜದಲ್ಲಿ ಸಮಾನ ಮನಸ್ಥಿತಿ ಉಳ್ಳವರು ಸಹಾಯ ಹಸ್ತ ಚಾಚಬೇಕಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿದ್ಯಾರ್ಥಿಗಳು ಉದ್ಯೋಗ ಗಿಟ್ಟಿಸಿಕೊಳ್ಳುವುದಷ್ಟೇ ಅಲ್ಲದೆ, ಸಮಾಜಿಕ ಬದುಕು ಮತ್ತು ಮಾನವೀಯ ಗುಣಗಳನ್ನು ಹೊಂದಬೇಕು. ಗುರಿ ಸಾಧಿಸಲು ಶ್ರಮಿಸಬೇಕು. ಸಮಾಜ ನಮಗೆಲ್ಲವನ್ನೂ ನೀಡಿದೆ, ನಮ್ಮಿಂದ ಸಮಾಜಕ್ಕೆ ನೆರವಾಗುವಂತಹ ಕೆಲಸ ಮಾಡಬೇಕು” ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿ ಶಕ್ತಿ ದಿನಪತ್ರಿಕೆ ಪ್ರಧಾನ ಸಂಪಾದಕ ಚಿದ್ವಿಲಾಸ್ ಮಾತನಾಡಿ, “ವಿದ್ಯಾ ದಾನಂ ಮಹಾದಾನಂ’ ಎಂಬಂತೆ ಶಾಸಕರು ಸೇರಿದಂತೆ ಕುಟುಂಬ ಪೋಷಕರ ಹೆಸರಿನಲ್ಲಿ ದತ್ತಿ ನಿಧಿ ಸ್ಥಾಪಿಸಿ ಪ್ರತಿಭಾನ್ವಿತ ವಿಧ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುತ್ತಿರುವುದು ಪ್ರಶಂಸಾನಾರ್ಹ. ರಾಜಕೀಯದ ಕೆಲವು ವ್ಯಕ್ತಿಗಳು ಗಳಿಕೆಯನ್ನು ಮಾಡಿ ತಮ್ಮೋರಿಗೆ ಮಾತ್ರ ವಿನಿಯೋಗ ಮಾಡುತ್ತಾರೆ. ಆದರೆ ಶಾಸಕ ಎ ಎಸ್ ಪೊನ್ನಣ್ಣ ಸಮಾಜ ಸೇವೆ, ವಿದ್ಯಾರ್ಥಿಗಳ ಜೀವನ ಸುಧಾರಣೆ, ಸಮಾಜದ ಒಳಿತಿಗಾಗಿ ಮನ ಮಿಡಿಯುತ್ತಿರುವುದು ಶ್ಲಾಘನೀಯ” ಎಂದರು.

ಈ ಸುದ್ದಿ ಓದಿದ್ದೀರಾ? ಹಿರಿಯ ಪತ್ರಕರ್ತ ಕುವೇಂಡ ವೈ ಹಂಝತುಲ್ಲಾರಿಗೆ ಬ್ಯಾರಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಗೌರವ

ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ನರೇನ್ ಕಾರ್ಯಪ್ಪ, ಹಿರಿಯರಾದ ಗಂಗಮ್ಮ ಸುಬ್ರಮಣಿ, ಚಂದಲೇ ಕಾರ್ಯಪ್ಪ, ಶಿಕ್ಷಕ ಮಂಜುನಾಥ್ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...