ಕೊಡಗು | ರಾಜೀವ್ ಗಾಂಧಿ ಆಧುನಿಕ ಭಾರತದ ಶಿಲ್ಪಿ : ತೆನ್ವಿರಾ ಮೈನಾ

Date:

ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಹಾಗೂ ಕಾಂಗ್ರೆಸ್ ಹಿಂದುಳಿದ ವರ್ಗದ ಘಟಕಗಳ ಆಶ್ರಯದಲ್ಲಿ ನಡೆದ ದಿವಗಂತ ರಾಜೀವ್ ಗಾಂಧಿಯವರ 81 ನೇ ಹಾಗೂ ದಿವಂಗತ ದೇವರಾಜ್ ಅರಸು ರವರ 110 ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ‌ ಮಾತನಾಡಿದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಮಾಜಿ ಪ್ರಧಾನಿ, ಭಾರತ ರತ್ನ ರಾಜೀವ್ ಗಾಂಧಿಯವರು ‘ಆಧುನಿಕ ಭವ್ಯ ಭಾರತದ ಶಿಲ್ಪಿ’ ಎಂದು ಬಣ್ಣಿಸಿದರು.

ದೇಶದ ಅತ್ಯಂತ ಕಿರಿಯ ವಯಸ್ಸಿನ ಪ್ರಧಾನಿಯಾದ ರಾಜೀವ್ ಗಾಂಧಿಯವರು ತಮ್ಮ ದೂರದೃಷ್ಟಿಯ ಚಿಂತನೆಗಳನ್ನು ಸಾಕಾರಗೊಳಿಸಿ ಭಾರತ ದೇಶವನ್ನು ಅಭಿವೃದ್ಧಿ ಪತದತ್ತ ಕೊಂಡೊಯ್ದರು. ರಾಜೀವ್ ಗಾಂಧಿಯವರು ಪ್ರಧಾನಿಯಾಗಿ ನಿರ್ವಹಿಸಿದ ಕೆಲಸ ಕಾರ್ಯಗಳನ್ನು ದೇಶ ಮರೆಯುವಂತಿಲ್ಲ ಎಂದು ಇದೇ ಸಂದರ್ಭದಲ್ಲಿ ಹೇಳಿದರು.

ಕರ್ನಾಟಕ ರಾಜ್ಯದ ಸುಧೀರ್ಘ ಅವಧಿಯ ಮುಖ್ಯ ಮಂತ್ರಿಗಳಾಗಿ ಸೇವೆ ಸಲ್ಲಿಸಿದ ದೇವರಾಜ್ ಅರಸು ರವರು ಸಮಾನತೆಯ ಹರಿಕಾರರಾಗಿ ತಮ್ಮ ಹೆಸರನ್ನು ಚಿರಸ್ಥಾಯಿಗೊಳಿಸಿದ್ದಾರೆ. ಉಳುವವನೆ ಭೂಮಿ ಒಡೆಯ ಎಂದ ಅರಸುರವರು ಎಂದಿಗೂ ಚಿರಸ್ಮರಣಿಯರು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ಜಿಲ್ಲಾ ಕಾಂಗ್ರೆಸ್ ಗೌರವ ಕಾರ್ಯದರ್ಶಿ ವಿ. ಪಿ. ಸುರೇಶ್ ಕಾಂಗ್ರೆಸ್ ಪಕ್ಷದ ಮಹಾನ್ ನಾಯಕರುಗಳಾದ ರಾಜೀವ್ ಗಾಂಧಿ ಮತ್ತು ದೇವರಾಜ್ ಅರಸುರವರ ಸಾಧನೆಗಳನ್ನು ಪ್ರತಿಯೊಬ್ಬರಿಗೆ ತಿಳಿಸುವ ಕೆಲಸವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡಬೇಕು ಎಂದು ಕರೆ ನೀಡಿದರು.

ಮಡಿಕೇರಿ ತಾಲ್ಲೂಕು ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷ ನೆರವಂಡ ಉಮೇಶ್ ಮಾತನಾಡಿ ದೇವರಾಜ್ ಅರಸುರವರಿಗೆ ಸಮಾನವಾದ ಮತ್ತೊಬ್ಬ ಮುಖ್ಯಮಂತ್ರಿಯನ್ನು ಈ ರಾಜ್ಯ ಮತ್ತು ದೇಶದಲ್ಲಿ ಕಾಣಲು ಸಾಧ್ಯವಿಲ್ಲ. ಅವರ ಸಮಾಜವಾದಿ ಚಿಂತನೆಗಳು ಬಡವರು, ದುರ್ಬಲರಿಗೆ ವರದಾನವಾಯಿತು ಎಂದು ತಿಳಿಸಿದರು. ರಾಗದ್ವೇಷಗಳನ್ನು ಹೊಂದಿರದ ಪ್ರಧಾನಿಯಾಗಿದ್ದ ರಾಜೀವ್ ಗಾಂಧಿಯವರು ಅಟಲ್ ಬಿಹಾರಿ ವಾಜಪೇಯಿರವರ ಚಿಕಿತ್ಸೆಗೆ ನೆರವಾಗಿದ್ದ ಘಟನೆಯನ್ನು ಸ್ಮರಿಸಿದರು.

ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ಆಚಾರ್ಯ ಮಾತನಾಡಿ ಕಾಂಗ್ರೆಸ್ ಪಕ್ಷದ ನೇತಾರರ ಬಗ್ಗೆ ಹೆಚ್ಚು ಕಾರ್ಯಕ್ರಮ ರೂಪಿಸಬೇಕು ಎಂದು ಸಲಹೆ ನೀಡಿದರು. ಕಾಂಗ್ರೆಸ್ ಹಿಂದುಳಿದ ಘಟಕದ ಅಧ್ಯಕ್ಷ ಜಿ. ಸಿ. ಜಗದೀಶ್ ಮಾತನಾಡಿ ತಾವು ನಿರುದ್ಯೋಗಿಯಾಗಿದ್ದಾಗ ತಮ್ಮ ನೆರವಿಗೆ ರಾಜೀವ್ ಗಾಂಧಿಯವರು ಜಾರಿಗೊಳಿಸಿದ ರೋಜ್ ಗಾರ್ ಯೋಜನೆಯ ಫಲಾನುಭವಿಯಾಗಿದ್ದನ್ನು ವಿವರಿಸಿದರು. ಸೇವಾ ದಳದ ಜಿಲ್ಲಾಧ್ಯಕ್ಷ ಕಾನೆ ಹಿತ್ಲು ಮೊಣ್ಣಪ್ಪ ಕಾರ್ಯಕ್ರಮದ ಕುರಿತು ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ವಿಕಲಚೇತನರ ಮನೆ ಬಾಗಿಲಿಗೆ ಯುಡಿಐಡಿ ಕಾರ್ಡ್ : ಡಾ ರವಿಕುಮಾರ್

ಕಾರ್ಯಕ್ರಮದಲ್ಲಿ ಕೆಡಿಪಿ ಸದಸ್ಯರು , ನಗರ ಸಭಾ ಸದಸ್ಯರು ,ಅನುಷ್ಠಾನ ಸಮಿತಿ ಸದಸ್ಯರು, ಸೇರಿದಂತೆ ಕಾರ್ಯಕರ್ತರು, ಪ್ರಮುಖರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...