ಕೊಡಗು | ಗೌರಮ್ಮ ಸಾಹಿತ್ಯ ವಲಯದಲ್ಲಿ ಮೂಡಿಸಿದ ಸಂಚಲನ ಅನನ್ಯವಾದದ್ದು : ಉಪನ್ಯಾಸಕಿ ಎಚ್ ನಿವೇದಿತಾ

Date:

ಕೊಡಗು ಕಸಾಪ , ಮಡಿಕೇರಿ ಕಸಾಪ , ಮುರ್ನಾಡು ಹೋಬಳಿ ಕಸಾಪ ಹಾಗೂ ಪಿಎಂಶ್ರೀ ಮಾದರಿ ಪ್ರಾಥಮಿಕ ಶಾಲೆ ಮುರ್ನಾಡು ಸಂಯುಕ್ತಾಶ್ರಯದಲ್ಲಿ ‘ ಕೊಡಗಿನ ಗೌರಮ್ಮ ದತ್ತಿ ‘ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮೈಸೂರು ಯುವರಾಜ ಕಾಲೇಜಿನ ಉಪನ್ಯಾಸಕಿ ಎಚ್ ನಿವೇದಿತಾ ‘ ಕೊಡಗಿನ ಗೌರಮ್ಮ ಸಾಹಿತ್ಯ ವಲಯದಲ್ಲಿ ಮೂಡಿಸಿದ ಸಂಚಲನ ಅನನ್ಯವಾದದ್ದು ‘ ಎಂದರು.

” ಕೇವಲ 27 ವರ್ಷ ಜೀವಿಸಿದ ಕೊಡಗಿನ ಗೌರಮ್ಮ ಜೀವಿತಾವಧಿಯಲ್ಲಿ 21 ಅತಿ ಸಣ್ಣ ಕಥೆಗಳನ್ನು ಬರೆದರು. ಅದರಲ್ಲಿ ಮಹಿಳಾ ಸ್ವಾತಂತ್ರ್ಯ, ವಿಧವಾ ವಿವಾಹ, ಬಾಲ್ಯ ವಿವಾಹ, ವಿಧವಾ ಸಮಸ್ಯೆಗಳ ಬಗ್ಗೆ ಬರೆದಿದ್ದಾರೆ. ಅವರು ನೇರವಾಗಿ ಸ್ವಾತಂತ್ರ ಹೋರಾಟಕ್ಕೆ ಇಳಿಯದಿದ್ದರೂ ಗಾಂಧೀಜಿಯವರು 1934 ರಲ್ಲಿ ಹರಿಜನೋದ್ಧಾರಕ್ಕಾಗಿ ನಿಧಿ ಸಂಗ್ರಹಿಸಲು ಕರ್ನಾಟಕದಲ್ಲಿ 12 ದಿನಗಳ ಪ್ರವಾಸವನ್ನು ಕೈಗೊಂಡರು. ಫೆಬ್ರವರಿ 22-23, 1934 ರಂದು ಗಾಂಧಿಯವರು ಕೊಡಗು ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಗೌರಮ್ಮ ವಾಸಿಸುತ್ತಿದ್ದ ಗುಂಡುಕಟ್ಟೆ ಮಂಜುನಾಥಯ್ಯರವರ ಎಸ್ಟೇಟ್‌ ನಲ್ಲಿ ತಂಗಿದ್ದರು”.

” ನಿಧಿ ಸಂಗ್ರಹಿಸಲು ಬಂದ ಗಾಂಧೀಜಿಯವರನ್ನು ಭೇಟಿ ಮಾಡುವ ಉದ್ದೇಶದಿಂದ ಗೌರಮ್ಮ ಸಹಾಯಕರಲ್ಲಿ ತಮ್ಮ ಎಸ್ಟೇಟ್‌ಗೆ ಬಂದು ದೇಣಿಗೆಯನ್ನು ಸ್ವೀಕರಿಸುವಂತೆ ಕೇಳಿಕೊಂಡರು. ಗಾಂಧೀಜಿಯವರು ಬಾರದಿದ್ದಾಗ.ತಮ್ಮಿಂದ ಕಾಣಿಕೆ ಸ್ವೀಕರಿಸಬೇಕು ಮತ್ತು ತಮ್ಮ ಮನೆಗೆ ಆಗಮಿಸಬೇಕೆಂದು ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸಿದರು”.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಗಾಂಧೀಜಿಯವರ ಕಿವಿಗೆ ತಲುಪಿತು. ಗೌರಮ್ಮ ಅವರನ್ನು ತಾವು ತಂಗಿದ್ದ ಸ್ಥಳಕ್ಕೆ ಕರೆದು, ಮನೆಗೆ ಬರುವುದಾಗಿ ಭರವಸೆ ನೀಡಿದರು. ಅದರ ಪ್ರಕಾರ, ಮನೆಗೆ ಭೇಟಿ ನೀಡಿದರು. ಗೌರಮ್ಮ ತಾವು ಧರಿಸಿದ್ದ ಅನೇಕ ಆಭರಣಗಳನ್ನು ತೆಗೆದು ಸ್ವಾತಂತ್ರ್ಯ ಹೋರಾಟದ ನಿಧಿಗೆ ನೀಡಿದರು.ಗಾಂಧೀಜಿಯವರು ಚಿನ್ನದ ಆಭರಣಗಳಿಗಾಗಿ ನೀವು ಮತ್ತೆ ನಿಮ್ಮ ಗಂಡನನ್ನು ಹಿಂಸಿಸುತ್ತೀರಾ ಎಂದು ಕೇಳಿದಾಗ, ನಾನು ಭರವಸೆ ನೀಡಿದಂತೆ ಖಾದಿ ಹೊರತುಪಡಿಸಿ ಯಾವುದೇ ದುಬಾರಿ ವಸ್ತ್ರ ಚಿನ್ನಾಭರಣ ಧರಿಸುವುದಿಲ್ಲ ಎಂದು ಭರವಸೆ ನೀಡಿದರು. ಮಾರ್ಚ್ 2, 1934 ರಂದು ‘ಹರಿಜನ’ ಪತ್ರಿಕೆಯಲ್ಲಿ ಈ ಘಟನೆಯನ್ನು ಉಲ್ಲೇಖಿಸಿದ್ದಾರೆ ” ಎಂದರು.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿಯನ್ನು ಈ ಬಾರಿ ಸಾಹಿತಿ ಕುಡಕಂಡಿ ಓಂ ಶ್ರೀ ದಯಾನಂದ ಅವರ ‘ ಪುಟಾಣಿ ರೈಲು ಅಂದದ ಕಥೆಗಳ ಲೋಕದಲ್ಲಿ ಒಂದು ಸುಂದರ ಪಯಣ ‘ ಮಕ್ಕಳ ಕಥೆ ಪುಸ್ತಕಕ್ಕೆ ನೀಡಿ ಗೌರವಿಸಿದರು.

ಪ್ರಶಸ್ತಿ ಸ್ವೀಕರಿ ಮಾತನಾಡಿದ ಕುಡಕಂಡಿಯವರು ” ಕೊಡಗಿನ ಗೌರಮ್ಮ ಪ್ರಶಸ್ತಿ ನನ್ನ ಮೊದಲ ಪುಸ್ತಕಕ್ಕೆ ಬಂದದ್ದು ಖುಷಿ ಕೊಟ್ಟಿದೆ. ಇಂದು ಇಂಟರ್ನೆಟ್ ಯುಗದಲ್ಲಿ ಮಕ್ಕಳಿಗೆ ನಾವು ಕಥೆಗಳನ್ನು ಹೇಳಿಕೊಡುತ್ತಿಲ್ಲ, ಮಕ್ಕಳಿಗೆ ಅದರ ಅವಶ್ಯಕತೆ ಇದೆ. ಆದರೆ ನಮಗೆ ಪುರುಸೊತ್ತಿಲ್ಲ. ಹಿಂದಿನ ಕಾಲದಲ್ಲಿ ಮನೆಯ ಹಿರಿಯರು ಮಕ್ಕಳಿಗೆ ಕಥೆಗಳನ್ನು ಹೇಳುವ ಮೂಲಕ ನೀತಿ ಪಾಠ ಹೇಳಿಕೊಡುತ್ತಿದ್ದರು. ಪಂಚತಂತ್ರ, ರಾಮಾಯಣ, ಮಹಾಭಾರತದ ಕಥೆಗಳನ್ನು ಮಕ್ಕಳಿಗೆ ಹೇಳುವ ಮೂಲಕ ಅವರಲ್ಲಿ ಸಾಮಾಜಿಕ ಬದ್ಧತೆ, ಸೃಜನಶೀಲತೆ, ಸಾಮಾಜಿಕ ಕಳಕಳಿ ಬೆಳೆಸುತಿದ್ದರು. ಆ ಕಾರಣಕ್ಕಾಗಿ ತಾವು ಮಕ್ಕಳ ಕಥೆಗಳನ್ನು ರಚಿಸಿರುವುದಾಗಿ ” ಹೇಳಿದರು.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ ಪಿ ಕೇಶವ ಕಾಮತ್ ಮಾತನಾಡಿ ” ಕೊಡಗಿನ ಗೌರಮ್ಮ ಬಹುಮುಖ ಪ್ರತಿಭೆಯ ವ್ಯಕ್ತಿತ್ವ, ಕೇವಲ ಕತೆ ಬರೆಯುವುದು ಮಾತ್ರವಲ್ಲದೆ ಅಂದಿನ ಸಮಾಜ ಸುಧಾರಕರಲ್ಲಿ ಒಬ್ಬರು ಕೂಡ. ಬಾಲ್ಯ ವಿವಾಹ, ವಿಧವಾ ವಿವಾಹ, ಮಹಿಳೆಯರ ಸಮಸ್ಯೆಗಳ ಕುರಿತು ಶತಮಾನದ ಹಿಂದೆಯೇ ಪ್ರಸ್ತಾಪ ಮಾಡಿದ್ದೂ ಅಲ್ಲದೆ ಸ್ವಾತಂತ್ರ್ಯ ಸಂಗ್ರಾಮಕ್ಕೆ ತಮ್ಮ ಮೈ ಮೇಲಿನ ಚಿನ್ನ ನೀಡುವ ಮೂಲಕ ಅಂದಿನ ಜನರಿಗೆ ಮಾದರಿಯಾಗಿದ್ದರು. ಅವರ ಹೆಸರಿನಲ್ಲಿ ಅವರ ಪುತ್ರ ವಸಂತ್ ರವರು ಅಂದಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಟಿ ಪಿ ರಮೇಶ್ ರವರ ನೇತೃತ್ವದಲ್ಲಿ ದತ್ತಿ ಪ್ರಶಸ್ತಿಯನ್ನು ಸ್ಥಾಪಿಸಿದರು. ಇಂದು 22 ಮಹಿಳಾ ಲೇಖಕರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ ” ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಅರಣ್ಯ ಪಾಲಾದ ಲಕ್ಷ್ಮಣಪುರ ಗ್ರಾಮ : ಪರಿಹಾರವೂ ಇಲ್ಲ, ಪುನರ್ವಸತಿಯು ಇಲ್ಲ

ಕೊಡಗು ಕಸಾಪ ಮಾಜಿ ಅಧ್ಯಕ್ಷ ಟಿ ಪಿ ರಮೇಶ್, ಕೊಡಗು ಕಸಾಪ ನಿಕಟ ಪೂರ್ವ ಅಧ್ಯಕ್ಷ ಬಿ ಎಸ್ ಲೋಕೇಶ್ ಸಾಗರ್, ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ ಎಸ್ ಕುಶನ್ ರೈ, ಪಿಎಂಶ್ರೀ ಮಾದರಿ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ ಬಿ ಸಿ ವೆಂಕಪ್ಪ, ಮುಖ್ಯೋಪಾಧ್ಯಾಯಿನಿ ಬಿ ಎನ್ ಪುಷ್ಪಾವತಿ, ಮಡಿಕೇರಿ ತಾಲೂಕು ಕಸಾಪ ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್, ಮೂರ್ನಾಡು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಈರಮಂಡ ಹರಿಣಿ ವಿಜಯ್, ಸಮಾಜ ಸೇವಕ ವಿ ಬಿ ಎಂ ಧನಂಜಯ, ಸಿ ಬಿ ಎಸ್ ಸೂರಜ್ ತಮ್ಮಯ್ಯ, ಮತ್ತು ವಿರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ, ಪ್ರೊ ಕುಡಕಂಡಿ ದಯಾನಂದ,ಡಾ ಬಿ ಕೋರನ ಸರಸ್ವತಿ, ಸಹನಾ ಕಾಂತಬೈಲು, ಕೊಡಗು ಜಿಲ್ಲಾ ಜಾನಪದ ಪರಿಷತ್ತಿನ ಅಧ್ಯಕ್ಷ ಬಿ ಜಿ ಅನಂತಶಯನ, ಸರ್ವೋದಯ ಸಮಿತಿಯ ಅಧ್ಯಕ್ಷ ಅಂಬೆಕಲ್ ಕುಶಾಲಪ್ಪ,ಕಸಾಪ ಸದಸ್ಯರು ಹಾಗೂ ಸಾಹಿತಿ ಕಿಗ್ಗಾಲು ಗಿರೀಶ್, ಸದಸ್ಯರುಗಳಾದ ದಂಬೆಕೋಡಿ ಸುಶೀಲ, ಈರಮಂಡ ಸೋಮಣ್ಣ, ಎಂ ಯು ಮಹಮದ್, ಕೊಂಪುಳಿರ ಮಮತಾ, ಅಪ್ಪಚಂಡ ಸುಚಿತಾ ಡೈಜಿ, ಗ್ರೇಸಿ , ಮುಂಡಂಡ ವಿಜು, ಮೀನಾಕ್ಷಿ ಕೇಶವ, ಪ್ರಿಯಾ, ಕಲ್ಪನಾ ಸಾಮ್ರಾಟ್, ತಿರಚಿಕ್ರ ಸುಮಿತ್ರಾ, ಭವಾನಿ, ಅಮ್ಮಟಂಡ ವಿಂಧ್ಯ, ರಾಜೇಶ್,ಗಂಗಮ್ಮ,ಪಿಎಂಶ್ರೀ ಶಾಲಾ ಆಧ್ಯಾಪಕರು ಮತ್ತು ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...