ಕೊಡಗು | ಪೊಲೀಸರು ಸಮಾಜಕ್ಕೆ ನೀಡಿರುವ ಸೇವೆ ಮರೆಯಬಾರದು; ಜಿಲ್ಲಾಧಿಕಾರಿ ವೆಂಕಟ್ ರಾಜಾ

Date:

ಪೊಲೀಸರು ಸಮಾಜಕ್ಕೆ ನೀಡಿದ ಸೇವೆಯನ್ನು ಯಾರೂ ಕೂಡಾ ಮರೆಯಬಾರದು ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು.

ದೇಶದಲ್ಲಿ ಶಾಂತಿ, ಸೌಹಾರ್ದತೆ, ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಆಸ್ತಿ ರಕ್ಷಣೆ ಸಂದರ್ಭದಲ್ಲಿ ಹುತಾತ್ಮರಾದ ಪೊಲೀಸರಿಗೆ ಕೊಡಗು ಜಿಲ್ಲೆ ಮಡಿಕೇರಿ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ ಅಂಗವಾಗಿ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಿದ ವೇಳೆ ಮಾತನಾಡಿದರು.

“ಪೊಲೀಸರ ಕರ್ತವ್ಯ ನಿಷ್ಠೆಯನ್ನು ಸದಾ ಸ್ಮರಿಸುವಂತಾಗಬೇಕು. ಸಮಾಜದ ರಕ್ಷಣೆ ಮಾಡುವಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿದೆ. ಪೊಲೀಸರು ಸಮಾಜಕ್ಕೆ ನೀಡಿದ ಸಂದೇಶಗಳನ್ನು ಮರೆಯಬಾರದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಮಾಜದ ಸಮಗ್ರ ಸುರಕ್ಷತೆ ಹಾಗೂ ಭದ್ರತೆಗಾಗಿ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುವ ಪೊಲೀಸರ ಕರ್ತವ್ಯ ನಿಷ್ಠೆ ಹಾಗೂ ನಿಸ್ವಾರ್ಥ ಸೇವೆ ಸ್ಮರಿಸುವಂತಾಗಬೇಕು” ಎಂದು ಹೇಳಿದರು.

ಪೊಲೀಸ್‌ ಹುತಾತ್ಮ ದಿನ

ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ 2023-24ನೇ ಸಾಲಿನಲ್ಲಿ ದೇಶದಲ್ಲಿ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಕರ್ನಾಟಕದ ಐವರು ಸೇರಿದಂತೆ ಒಟ್ಟು 216 ಮಂದಿ ಹುತಾತ್ಮ ಪೊಲೀಸರ ಹೆಸರುಗಳನ್ನು ಓದಿದರು.

ಪೊಲೀಸ್ ಕವಾಯತು ಸಿಬ್ಬಂದಿಗಳು ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿದರು. ಗಣ್ಯರು ಸೇರಿದಂತೆ ಎಲ್ಲರೂ ಎದ್ದುನಿಂತು ಗೌರವ ವಂದನೆ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಭಾರೀ ಮಳೆ; ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ

ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾ, ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ತ್ರಿಪಾಠಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ ಎಸ್ ಸುಂದರರಾಜ್, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಮೋಹನ್ ಕುಮಾರ್, ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಪೊಲೀಸ್ ನಿರೀಕ್ಷಕ ಚೆನ್ನನಾಯಕ, ವೈಯರ್‍ಲೆಸ್ ವಿಭಾಗದ ಪೊಲೀಸ್ ಇನ್ಸ್‌ಪೆಕ್ಟರ್ ಆನಂದ್, ಮಾಜಿ ಸೈನಿಕರ ಪರವಾಗಿ ನಿವೃತ್ತ ಏರ್ ಮಾರ್ಷಲ್ ಕೆ ಸಿ ಕಾರ್ಯಪ್ಪ, ಬಿ ಎಂ ಕುಶಾಲಪ್ಪ, ಐ ಪಿ ಮೇದಪ್ಪ, ಬ್ಯಾಂಡ್ ಮಾಸ್ಟರ್ ಸಿದ್ದೇಶ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್, ನಿರಂಜನ, ಮುತ್ತಪ್ಪ, ಸೂರ್ತಲೆ ಸೋಮಣ್ಣ, ಸುಬ್ರಮಣಿ, ಅಂಬೆಕಲ್ಲು ನವೀನ್, ಸುದಯ್ ನಾಣಯ್ಯ, ಪೊಲೀಸ್ ಮುಖ್ಯ ಕಾಬೀಲರಾದ ಎಂ ಇ ಫಾರೂಕ್ ಮತ್ತು ಎಂ ಎಸ್ ಲೋಕೇಶ್ ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...