ಕೊಡಗು | ಮಹಿಳೆಯ ಕೊಲೆ ಪ್ರಕರಣ; ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Date:

ಇಬ್ಬರು ಮಹಿಳೆಯರ ಮೇಲೆ ಹಲ್ಲೆ ನಡೆಸಿ ಓರ್ವ ಮಹಿಳೆಯನ್ನು ಹತ್ಯೆ ಮಾಡಿದ್ದು, ಮತ್ತೊಬ್ಬರನ್ನು ಗಾಯಗೊಳಿಸಿ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಟಿ ಶೆಟ್ಟಿಗೇರಿ ನಿವಾಸಿ ರಾಜೇಶ್(42)ಎಂಬಾತನೇ ಬಂಧನಕ್ಕೊಳಗಾದ ಆರೋಪಿ. ಆಸ್ತಿ ವಿಚಾರಕ್ಕಾಗಿ ಆತ ಈ ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ.

ಘಟನೆಯ ಹಿನ್ನೆಲೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊನ್ನಂಪೇಟೆ ತಾಲೂಕಿನ ಟಿ ಶೆಟ್ಟಿಗೇರಿ ಗ್ರಾಮದ ನಿವಾಸಿಗಳಾದ ಪ್ರೇಮಾ ಹಾಗೂ ಅವರ ತಂಗಿ ವೀಣಾ ಎಂಬುವವರು 2022ರ ಫೆ.6ರಂದು ಪೊನ್ನಂಪೇಟೆಯ ಕೊಡವ ಸಮಾಜದ ಮದುವೆ ಕಾರ್ಯಕ್ರಮಕ್ಕೆ ತೆರಳಿ ಮನೆಗೆ ಹಿಂದಿರುಗುವ ವೇಳೆ ಸಂಜೆ 5ರ ಸುಮಾರಿಗೆ ಅವರ ಮನೆಯ ಸಮೀಪದ ರಸ್ತೆಯಲ್ಲಿ ಮಹಿಳೆಯರ ಮೇಲೆ ಹಲ್ಲೆ ನಡೆಸಿ ತಲೆ ಮತ್ತು ಕುತ್ತಿಗೆಗೆ ಮಾರಕಾಸ್ತ್ರದಿಂದ ಚುಚ್ಚಿ ಪ್ರೇಮಾ ಅವರನ್ನು ಕೊಲೆ ಮಾಡಿದ್ದು, ವೀಣಾ ಅವರನ್ನು ಗಂಭೀರ ಗಾಯಗೊಳಿಸಿರುವ ಕುರಿತು ಶ್ರೀಮಂಗಲ ಪೊಲೀಸ್‌ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 302, 307ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದಲ್ಲಿ ಗಂಭೀರವಾಗಿ ಹಲ್ಲೆಗೊಳಗಾಗಿದ್ದ ವೀಣಾ ಅವರನ್ನು ವಿಚಾರಣೆಗೊಳಪಡಿಸಿದ ಬಳಿಕ ಪ್ರೇಮಾ ಅವರ ಪತಿ ಸೋಮಶೇಖರ್ ಅಕ್ಕನ ಮಗನಾದ ರಾಜೇಶ್ ಎಂಬಾತ ಆಸ್ತಿ ವಿಚಾರಕ್ಕಾಗಿ ಕೊಲೆ ಮಾಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಕೃತ್ಯ ನಡೆದ ಸ್ಥಳದ ಸುತ್ತಮುತ್ತಲಿನ ಸಿಸಿ ಕ್ಯಾಮೆರಾ ದೃಶ್ಯಾವಳಿಯನ್ನು ಪರಿಶೀಲಿಸಿದಾಗ ಗಾಯಾಳುಗಳು ನಡೆದುಕೊಂಡು ಹೋಗುವ ಹಾಗೂ ರಾಜೇಶನು ತನ್ನ ಬೈಕಿನಲ್ಲಿ ಅವರನ್ನು ಹಿಂಬಾಲಿಸಿರುವ ದೃಶ್ಯಾವಳಿ ಕಂಡುಬಂದಿರುತ್ತದೆ.

ಈ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿ, ಸಿಬ್ಬಂದಿಗಳು ಭೇಟಿ ನೀಡಿ ಕೃತ್ಯಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ಸಾಕ್ಷ್ಯಾಧಾರಗಳನ್ನು ಕಲೆಹಾಕಿ ತಲೆಮರೆಸಿಕೊಂಡಿರುವ ಆರೋಪಿಯ ಪತ್ತೆಗಾಗಿ ವೀರಾಜಪೇಟೆ ಉಪ ವಿಭಾಗದ ಡಿವೈಎಸ್‌ಪಿ ಆರ್ ಮೋಹನ್‌ಕುಮಾರ್, ಕುಟ್ಟ ವೃತ್ತದ ಇನ್ಸ್‌ಪೆಕ್ಟರ್ ಮಂಜಪ್ಪ ಸಿ ಎ, ಶ್ರೀಮಂಗಲ ಪಿಎಸ್‌ಐ ರವೀಂದ್ರ, ಎಎಸ್ಐ ಪಿಎಸ್‌ಐ ಪ್ರಮೋದ್, ಸಿಬ್ಬಂದಿ ಮಹದೇವಸ್ವಾಮಿ, ಪೊನ್ನಂಪೇಟೆ ಠಾಣೆಯ ಅಪರಾಧ ಪತ್ತೆ ಸಿಬ್ಬಂದಿಗಳು ಮತ್ತು ತಾಂತ್ರಿಕ ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಉಡುಪಿ | ಸಮಾಜದ ಅಸ್ಥಿರತೆಯನ್ನು ಹೋಗಲಾಡಿಸಲು ಯುವಜನತೆ ಶ್ರಮಿಸಬೇಕು: ನ್ಯಾ. ಕಿರಣ್ ಎಸ್

ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಟಿ ಶೆಟ್ಟಿಗೇರಿ ನಿವಾಸಿ ಆರೋಪಿ ರಾಜೇಶನ ಪತ್ತೆಗಾಗಿ ವಿಶೇಷ ತಂಡವು ಸತತ ಎರಡು ವರ್ಷಗಳಿಂದ ವಿಶೇಷ ಕಾರ್ಯಾಚರಣೆ ನಡೆಸಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪದ ಕುಂಬ್ರ ಎಂಬಲ್ಲಿ ಬಂಧಿಸಿ ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

ಆರೋಪಿ ರಾಜೇಶನ ಮಾವ ಸೋಮಶೇಖರ್ 2021ರಲ್ಲಿ ಮೃತಪಟ್ಟಿದ್ದು, ಮಾವನ ಸಾವಿಗೆ ಅವರ ಪತ್ನಿ ಪ್ರೇಮಾ ಕಾರಣವಾಗಿರಬಹುದು ಹಾಗೂ ತನ್ನ ಕುಟುಂಬಕ್ಕೆ ಸೇರಿದ ಆಸ್ತಿಯನ್ನು ಪ್ರೇಮಾ ಅವರು ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ರಾಜೇಶನು ಈ ಕೃತ್ಯ ಎಸಗಿ ಮುರುಡೇಶ್ವರಕ್ಕೆ ತೆರಳಿ, ನಂತರ ಭಟ್ಕಳದಲ್ಲಿ ಮೊಬೈಲ್‌ ನಾಶಗೊಳಿಸಿ ಮಹಾರಾಷ್ಟ್ರ ರಾಜ್ಯದ ಪನ್‌ವೇಲ್‌ನಲ್ಲಿ ಕೆಲಸ ಮಾಡಿಕೊಂಡಿರುವುದಾಗಿ ವಿಚಾರಣೆಯಲ್ಲಿ ತಿಳಿದುಬಂದಿದೆ.

ಪ್ರಕರಣದ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ ರಾಮರಾಜನ್ ಶ್ಲಾಘಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...