ಕೊಡಗು | ಬೆಂಕಿ ಅವಘಡದಲ್ಲಿ ದಂಪತಿ ಸಾವು; ಅನಾಥವಾದ ಅನಾಥಾಶ್ರಮ

Date:

ಅನಾಥಾಶ್ರಮ ನಡೆಸುತ್ತಿದ್ದ ದಂಪತಿ ಅಡುಗೆ ಅನಿಲ ಸೋರಿಕೆ ದುರಂತದಲ್ಲಿ ಮೃತಪಟ್ಟಿದ್ದಾರೆ. ದಂಪತಿ ಸಾವಿನಿಂದ ಅವರ ಮೂವರು ಮಕ್ಕಳು ಮಾತ್ರವಲ್ಲದೆ, ಸುಮಾರು 33 ಮಂದಿ ನಿರ್ಗತಿಕರು ಮತ್ತೆ ಅನಾಥರಾಗಿದ್ದಾರೆ.

ಕೊಡಗು ಜಿಲ್ಲೆಯ ಮಡಿಕೇರಿ ನಿವಾಸಿಗಳಾದ ರಮೇಶ್ ಮತ್ತು ರೂಪಾ ದಂಪತಿ ಕಳೆದ 15 ವರ್ಷಗಳಿಂದ ಕುಶಾಲನಗರ ತಾಲೂಕಿನ ಗದ್ದೆಹಳ್ಳದಲ್ಲಿ ‘ವಿಕಾಸ್ ಜನಸೇವಾ’ ಅನಾಥಾಶ್ರಮ ನಡೆಸುತ್ತಿದ್ದರು.‌ ಕೊಡಗು ಜಿಲ್ಲೆಯಲ್ಲಿ ಯಾರೇ ಅನಾಥರು ಕಂಡರೂ ಅವರನ್ನ ಕರೆತಂದು ತಮ್ಮ ಅನಾಥಾಶ್ರಮದಲ್ಲಿ ಇರಿಸಿಕೊಂಡು  ಪೋಷಿಸುತ್ತಿದ್ದರು. ಊಟ, ಬಟ್ಟೆ ಸೇರಿದಂತೆ ನಾನಾ ಸೌಲಭ್ಯಗಳನ್ನು ಉಚಿತವಾಗಿ ನೀಡುತ್ತಿದ್ದರು. ಅನಾಥರು ಮೃತಪಟ್ಟಾಗ ತಮ್ಮ ಮನೆಯವರೆಂಬಂತೆ ಮುಂದೆ ನಿಂತು ಅಂತ್ಯಕ್ರಿಯೆಯನ್ನೂ ಮಾಡಿದ್ದರು.

ಆದರೆ, ಅವರ ಮನೆಯಲ್ಲಿ ಸಂಭವಿಸಿದ ಅಡುಗೆ ಅನಿಲ ಸೋರಿಕೆಯ ದುರಂತದಲ್ಲಿ ದಂಪತಿ ಇಹಲೋಕ ತ್ಯಜಿಸಿದ್ದಾರೆ. ಅಕ್ಟೋಬರ್ 4ರಂದು ರೂಪಾ ಅವರು ಅಡುವೆ ಮಾಡಲು ಗ್ಯಾಸ್‌ ಸ್ಟವ್ ಹಚ್ಚಿದ್ದಾರೆ. ಮೊದಲೇ ಅನಿಲ ಸೋರಿಕೆಯಾಗಿದ್ದರಿಂದ ಬೆಂಕಿ ಆವರಿಸಿಕೊಂಡಿದೆ. ರೂಪ ಮತ್ತು ರಮೇಶ್‌ ಅವರಿಗೆ ತೀವ್ರ ಸುಟ್ಟಗಾಯಗಳಾಗಿದ್ದವು. ರಮೇಶ್ ಅವರ ತಂದೆಗೂ ಸುಟ್ಟ ಗಾಯಗಳಾಗಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ರಮೇಶ್ ಅವರು ಅಕ್ಟೋಬರ್ 8ರಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ರೂಪ ಕೂಡ ಅಸುನೀಗಿದ್ದಾರೆ. ಹೀಗಾಗಿ, ಇಡೀ ಅನಾಥಾಶ್ರಮವೇ ಈಗ ಅನಾಥವಾಗಿದೆ. ಅನಾಥಾಶ್ರಮದಲ್ಲಿದ್ದ 33 ಮಂದಿ ಈಗ ಮತ್ತೆ ನಿರ್ಗತಿಕರಾಗುವ ಆತಂಕದಲ್ಲಿದ್ದಾರೆ. ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳ ಆಕ್ರಂದನ ಮುಗಿಲು ಮುಟ್ಟಿದೆ.

ಸಧ್ಯ ರಮೇಶ ಅವರ ಕುಟುಂಬಸ್ಥರು ಅನಾಥಾಶ್ರಮವನ್ನು ಮುಂದುವರೆಸಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...