ಕೊಡಗು | ಗ್ರಾಮದಲ್ಲಿ ಕಾಡಾನೆ, ಹುಲಿ ಹಾವಳಿ; ದೂರು ನೀಡಿದರೂ ಸ್ಪಂದಿಸದ ಅರಣ್ಯ ಇಲಾಖೆ; ಆರೋಪ

Date:

ಹಲವಾರು ದಿನಗಳಿಂದ ಗ್ರಾಮದಲ್ಲಿ ಹುಲಿ ಮತ್ತು ಕಾಡಾನೆಗಳ ಹಾವಳಿ ನಿರಂತರವಾಗಿದೆ. ಗ್ರಾಮಸ್ಥರು ಹೊರ ಹೋಗುವುದಕ್ಕೆ ಹೆದರುವ ಪರಿಸ್ಥಿತಿ ಇದೆ. ಹುಲಿ, ಕಾಡಾನೆ ಹಾವಳಿ ಬಗ್ಗೆ ದೂರು ನೀಡಿದರೂ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಕೊಡಗು ಜಿಲ್ಲೆಯ ಗೋಣಿಕೊಪ್ಪಲು ಬಳಿಯ ಕೋಳತೋಡು ಗ್ರಾಮಸ್ಥರು ಆರೋಪಿಸಿದ್ದಾರೆ.

ಕಳೆದ ಹಲವು ತಿಂಗಳಿಂದ ನಡೆಯುತ್ತಿರುವ ವನ್ಯಜೀವಿಗಳ ಉಪಟಳದಿಂದಾಗಿ ಜನ ಬೇಸತ್ತು ಹೋಗಿದ್ದಾರೆ. ಕಾಡಿನಲ್ಲಿ ಇರಬೇಕಾದ ವನ್ಯಜೀವಿಗಳು ನಾಡಿಗೆ ಬಂದು ಕೃಷಿಕರಿಗೆ ತೀವ್ರ ತೊಂದರೆ ನೀಡುತ್ತಿವೆ. ಇದಕ್ಕೆ ಅರಣ್ಯ ಇಲಾಖೆಯ ನಿರ್ಲಕ್ಷವೇ ಕಾರಣ ಎಂದು ಗ್ರಾಮದ ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವನ್ಯಜೀವಿಗಳ ಹಾವಳಿ ಬಗ್ಗೆ ಮಾತನಾಡಿದ ಗ್ರಾಮದ ಮುರುವಂಡ ಸಾವನ್, “ಹಲವು ತಿಂಗಳಿಂದ ಹುಲಿಯೊಂದು ಗ್ರಾಮದಲ್ಲಿ ನಿರಂತರವಾಗಿ ಅಡ್ಡಾಡುತ್ತಿದೆ. ತನ್ನ ಮರಿಯೊಂದಿಗೆ ಆಗಿದ್ದಾಗೆ ಜನರ ಕಣ್ಣಿಗೆ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ, ಗ್ರಾಮಸ್ಥರು ಭಯದಿಂದಲೇ ದಿನ ಕಳೆಯುವಂತಾಗಿದೆ. ಕಳೆದ ಎರಡು ದಿನಗಳ ಹಿಂದೆ ಗ್ರಾಮಸ್ಥರೊಬ್ಬರ ಎರಡು ನಾಯಿಗಳು ಕಾಣೆಯಾಗಿದ್ದು, ಇವುಗಳು ಹುಲಿಯ ದಾಳಿಗೆ ಬಲಿಯಾಗಿರುವ ಸಾಧ್ಯತೆ ಇದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹುಲಿ ಸಂಚಾರದಿಂದಾಗಿ ಕಾರ್ಮಿಕರು ಭಯಪಡುತ್ತಿದ್ದು, ತೋಟದ ಕೆಲಸಗಳಿಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಇದು ಕೃಷಿ ಚಟುವಟಿಕೆಗಳಿಗೆ ನೇರ ಪರಿಣಾಮ ಬೀರುತ್ತಿದೆ. ಅಲ್ಲದೆ ಈ ಭಾಗದಲ್ಲಿರುವ ಕೃಷಿಕರ ಮತ್ತು ಕೃಷಿ ಕಾರ್ಮಿಕರ ಮಕ್ಕಳು ಪ್ರತಿನಿತ್ಯ ಆತಂಕದಲ್ಲೇ ಶಾಲಾ-ಕಾಲೇಜುಗಳಿಗೆ ತೆರಳುವ ಪರಿಸ್ಥಿತಿ ನಿರ್ಮಾಣಗೊಂಡಿದೆ” ಎಂದು ಸಾವನ್ ವಿವರಿಸಿದ್ದಾರೆ.

“ಗ್ರಾಮದ ಸಣ್ಣ ಮತ್ತು ಅತಿ ಸಣ್ಣ ಭತ್ತದ ಕೃಷಿಕರು ತಮಗಿರುವ ಅಲ್ಪ ಸ್ವಲ್ಪ ಗದ್ದೆಯಲ್ಲಿ ಭತ್ತದ ಕೃಷಿ ಮಾಡಿದ್ದಾರೆ. ಇದೀಗ ಭತ್ತ ಕೊಯ್ಲಿಗೆ ಬರುತ್ತಿದ್ದಂತೆ ಗ್ರಾಮಕ್ಕೆ ಲಗ್ಗೆ ಇಡುವ ಕಾಡಾನೆಗಳ ಹಿಂಡು ಭತ್ತದ ಗದ್ದೆಗೆ ನುಗ್ಗಿ ಇಡೀ ಕೃಷಿಯನ್ನೇ ನಾಶಗೊಳಿಸುತ್ತಿದೆ. ಪ್ರತಿ ದಿನ ರಾತ್ರಿ ಗದ್ದೆ ಭಾಗದಲ್ಲಿ ಕಾಡಾನೆಗಳು ಕಾಣಿಸಿಕೊಳ್ಳುತ್ತಿದ್ದು, ತೆರೆಗಳನ್ನು ತುಳಿದು ಧ್ವಂಸ ಮಾಡುತ್ತಿದೆ ಎಂದು ಸಮಸ್ಯೆ ವಿವರಿಸಿದ ಸಾವನ್, ಈ ಕುರಿತು ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರೆ ವಿವಿಧ ನೆಪಗಳನ್ನು ಒಡ್ಡಿ ಸಮಸ್ಯೆ ಪರಿಹಾರಕ್ಕೆ ಮುಂದಾಗುತ್ತಿಲ್ಲ” ಎಂದು ಆಪಾದಿಸಿದ್ದಾರೆ.

“ಭತ್ತ ಕೃಷಿ ಕಟಾವಿಗೆ ಬಂದಿದ್ದು, ವನ್ಯ ಪ್ರಾಣಿಗಳಿಂದ ಬೆಳೆಗಳಿಗೆ ರಕ್ಷಣೆ ನೀಡಬೇಕಾಗಿರುವುದು ಅರಣ್ಯ ಇಲಾಖೆಯ ಹೊಣೆಗಾರಿಕೆಯಾಗಿದೆ. ಆದ್ದರಿಂದ ಗ್ರಾಮದಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಹುಲಿಯ ಸೆರೆಗಾಗಿ ಬೋನನ್ನು ಅಳವಡಿಸಿ ಅರಣ್ಯ ಇಲಾಖೆ ಗ್ರಾಮದಲ್ಲಿ ಗಸ್ತು ನಡೆಸಬೇಕು. ಗ್ರಾಮಕ್ಕೆ ಲಗ್ಗೆ ಇಡುವ ಕಾಡಾನೆಗಳನ್ನು ಕಾಡಿಗಟ್ಟಿ ಅವುಗಳು ನಾಡಿಗೆ ಬರದಂತೆ ಸೂಕ್ತ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಗ್ರಾಮಸ್ಥರ ಪರವಾಗಿ ಒತ್ತಾಯಿಸಿರುವ ಸಾವನ್, ಇನ್ನಾದರೂ ಅರಣ್ಯ ಇಲಾಖೆ ಸ್ಪಂದಿಸದಿದ್ದಲ್ಲಿ ಗ್ರಾಮದ ಮಹಿಳೆಯರು ಸೇರಿದಂತೆ ಸಾರ್ವಜನಿಕರೊಡಗೂಡಿ ಅರಣ್ಯ ಇಲಾಖೆಯ ಕಚೇರಿ ಪ್ರತಿಭಟನೆ ನಡೆಸಲಾಗುವುದು” ಎಂದು ಎಚ್ಚರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...