ಕೊಡಗು | ಕೌಟುಂಬಿಕ ಹಾಕಿ ಪಂದ್ಯಾವಳಿ; 2ನೇ ಬಾರಿಗೆ ಚಾಂಪಿಯನ್ ಪಟ್ಟ ಉಳಿಸಿಕೊಂಡ ಅಪ್ಪಂಡೇರಂಡ ತಂಡ

Date:

ವಿರಾಜಪೇಟೆ ತಾಲೂಕಿನ ಕಂಡಂಗಾಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕ್ರೀಡಾ ಸಮಿತಿ ಆಯೋಜಿಸಿದ್ದ ಮೂರು ನಾಡು ವ್ಯಾಪ್ತಿಯ 2ನೇ ವರ್ಷದ ಕೌಟುಂಬಿಕ ಹಾಕಿ ಪಂದ್ಯಾವಳಿ ಮುಕ್ತಾಯಗೊಂಡಿದೆ. ಕಳೆದ ಬಾರಿ ಚಾಂಪಿಯನ್‌ ಆಗಿದ್ದ ಕಂಡಂಗಾಲದ ಅಪ್ಪಂಡೇರಂಡ ತಂಡ ಈ ಬಾರಿಯೂ ಗೆದ್ದು ಚಾಂಪಿಯನ್‌ ಪಟ್ಟ ಉಳಿಸಿಕೊಂಡಿದೆ.

ಸೋಮವಾರ ನಡೆದ ಫೈನಲ್ ಪಂದ್ಯಾವಳಿಯಲ್ಲಿ 5-3 ಗೋಲಿನ ಅಂತರದಿಂದ ಮದ್ರೀರ ತಂಡವನ್ನು ಮಣಿಸಿದ ಅಪ್ಪಂಡೇರಂಡ ತಂಡ ಸತತವಾಗಿ 2ನೇ ಬಾರಿಗೆ ವಿಜಯದ ಮಾಲೆಯನ್ನು ತನ್ನ ಕೊರಳಿಗೇರಿಸಿಕೊಂಡಿದೆ.

ಫೈನಲ್ಸ್ ಪಂದ್ಯದಲ್ಲಿ ಆರಂಭದಿಂದಲೇ ಬಿರುಸಿನ ಆಟಕ್ಕೆ ಒತ್ತು ನೀಡಿದ ವಿಜೇತ ಅಪ್ಪಂಡೇರಂಡ ತಂಡ ಎದುರಾಳಿ ಆಟಗಾರರ ವಿರುದ್ಧ ರಕ್ಷಣಾತ್ಮಕ ಮತ್ತು ಸಂಘಟಿತವಾದ ಆಟವಾಡಿ ಪ್ರಶಸ್ತಿ ಗೆದ್ದುಕೊಂಡಿತು. ಅಪ್ಪಂಡೇರಂಡ ತಂಡದ ಪರವಾಗಿ ಆಡಿದ ಅತಿಥಿ ಆಟಗಾರರು ಇಡೀ ಪಂದ್ಯದಕ್ಕೂ ಪ್ರೇಕ್ಷಕರ ಗಮನ ಸೆಳೆದರಲ್ಲದೆ, ತಂಡದ ವಿಜಯದಲ್ಲಿ ನಿರ್ಣಾಯಕ ಪಾತ್ರ ವಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಜೇತ ತಂಡದ ಪರವಾಗಿ ಅತಿಥಿ ಆಟಗಾರರಾದ ಲಿಖಿತ್ 2 ಗೋಲು, ಆಭರಣ ಸುಧೇವ್, ನಿತಿನ್ ಮತ್ತು ಭರತ್ ತಲಾ ಒಂದು ಗೋಲು ಹೊಡೆದರು. ತಂಡದ ವಿರುದ್ಧ ದಾಖಲಾಗಬಹುದಾಗಿದ್ದ ಸಾಕಷ್ಟು ಗೋಲುಗಳನ್ನು ತಡೆಗೋಡೆಯಂತೆ ನಿಂತು ತಡೆದ ಅಪ್ಪಂಡೇರಂಡ ತಂಡದ ಗೋಲ್ ಕೀಪರ್ ಕೌಶಿಕ್ ಸುಬ್ರಮಣಿ ಪಂದ್ಯಾವಳಿಯ ಸರಣಿ ಪುರುಷೋತ್ತಮ ವಿಶೇಷ ಪ್ರಶಸ್ತಿಗೆ ಪಾತ್ರರಾದರು. ಅಪ್ಪಂಡೇರಂಡ ಯಶ್ವಂತ್ ಕಾಳಪ್ಪ ತರಬೇತಿದಾರರಾಗಿ ಮತ್ತು ಅಪ್ಪಂಡೇರಂಡ ಸುರೇಶ್ ವಿಜೇತ ತಂಡದ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...