ಕೊಡಗು | ಪಾಲೆಮಾಡು ಕಾನ್ಷಿರಾಂ ನಗರದ 90 ಕುಟುಂಬಗಳಿಗೆ ಶೀಘ್ರವೇ ಹಕ್ಕುಪತ್ರ ವಿತರಣೆ: ಮಂತರ್ ಗೌಡ

Date:

ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲೆಮಾಡು ಕಾನ್ಷಿರಾಮ್ ನಗರ ನಿವಾಸಿಗಳ 90 ಕುಟುಂಬಗಳಿಗೆ ಹೊಸ ವರ್ಷದ ವೇಳೆಗೆ ಹಕ್ಕುಪತ್ರ ವಿತರಿಸಲಾಗುವುದು ಎಂದು ಶಾಸಕ ಡಾ.ಮಂತರ್ ಗೌಡ ತಿಳಿಸಿದ್ದಾರೆ.

ಹೊದ್ದೂರು ಬಳಿಯ ಪಾಲೆಮಾಡು ಗ್ರಾಮದ ಕಾನ್ಷಿರಾಮ್ ನಗರ ನಿವಾಸಿಗಳ ಕುಂದುಕೊರತೆ ಸಭೆ ನಡೆಸಿ ಮಾತನಾಡಿದರು.

ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲೆಮಾಡು ಬಳಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಆಗುವುದರಿಂದ ಸ್ಥಳೀಯರಿಗೆ ಉದ್ಯೋಗ ದೊರೆಯಲಿದೆ. ಇದರಿಂದ ಸುತ್ತಮುತ್ತಲ ಪ್ರದೇಶಗಳ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಆ ನಿಟ್ಟಿನಲ್ಲಿ ಪಾಲೆಮಾಡು ಕಾನ್ಷಿರಾಮ್ ನಗರದಲ್ಲಿ ವಾಸಿಸುತ್ತಿರುವ ಎಲ್ಲ ಅರ್ಹ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಾಗುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಸ್ತೆ ಅಗಲೀಕರಣ, ರಸ್ತೆ ಸರಿಪಡಿಸುವುದು, ಕುಡಿಯುವ ನೀರು ಸಂಪರ್ಕ ಕಲ್ಪಿಸುವುದು, ಬಸ್ ಸೌಕರ್ಯದ ಜತೆಗೆ ನ್ಯಾಯ ಬೆಲೆ ಅಂಗಡಿ ಕಲ್ಪಿಸುವುದು ಸೇರಿದಂತೆ ಹಲವು ಮೂಲ ಸೌಕರ್ಯಗಳನ್ನು ತ್ವರಿತವಾಗಿ ಬಗೆಹರಿಸಲಾಗುವುದು” ಎಂದು ಹೇಳಿದರು.

“ಸರ್ಕಾರ ಬಡ ಜನರ ಏಳಿಗೆಗಾಗಿ ಎಲ್ಲ ರೀತಿಯ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದು, ಅದನ್ನು ಬಳಸಿಕೊಂಡು ಇತರರಂತೆ ಬದುಕು ಕಟ್ಟಿಕೊಳ್ಳುವಂತಾಗಬೇಕು” ಎಂದು ಸಲಹೆ ನೀಡಿದರು.

ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, “ಪಾಲೆಮಾಡು ನಿವಾಸಿಗಳಿಗೆ ಹಕ್ಕುಪತ್ರ ಕಲ್ಪಿಸುವ ನಿಟ್ಟಿನಲ್ಲಿ ಉಪ ವಿಭಾಗಾಧಿಕಾರಿಯವರ ನ್ಯಾಯಾಲಯದಲ್ಲಿ ಇತ್ಯರ್ಥಪಡಿಸಿ ಕಾನೂನು ಪ್ರಕಾರ 90 ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಲಾಗುವುದು” ಎಂದು ಹೇಳಿದರು.

“ಇಲ್ಲಿನ 34 ಕುಟುಂಬಗಳಿಗೆ 94ಸಿ ಅಡಿ ನಿವೇಶನ ರಹಿತರಿಗೆ ನಿವೇಶನ ಒದಗಿಸಲಾಗುವುದು. ಪಾಲೆಮಾಡು ಕಾನ್ಷಿರಾಮ್ ನಗರದ ಅಭಿವೃದ್ಧಿಗೆ ಗ್ರಾಮ ಪಂಚಾಯಿತಿ ವತಿಯಿಂದ ಎಲ್ಲ ರೀತಿಯ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವಲ್ಲಿ ಸರ್ಕಾರಕ್ಕೆ ಗ್ರಾಮ ಪಂಚಾಯಿತಿ ಮೂಲಕ ಕ್ರಿಯಾ ಯೋಜನೆಯ ಪ್ರಸ್ತಾವನೆ ಸಲ್ಲಿಸಲಾಗುವುದು” ಎಂದು ಜಿಲ್ಲಾಧಿಕಾರಿ ತಿಳಿಸಿದರು.

“ಗ್ರಾಮದಲ್ಲಿ 260 ಕುಟುಂಬಗಳು ವಾಸಿಸುತ್ತಿದ್ದು, ನ್ಯಾಯಬೆಲೆ ಅಂಗಡಿ ಹಾಗೂ ಹತ್ತಿರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಆರಂಭಕ್ಕೆ ಕ್ರಮವಹಿಸಲಾಗುವುದು. ಬಸ್ ಸೌಲಭ್ಯ ಕಲ್ಪಿಸಲು ಸಾರಿಗೆ ಇಲಾಖೆಯೊಂದಿಗೆ ಚರ್ಚಿಸಲಾಗುವುದು” ಎಂದು ನುಡಿದರು.

“ಜಿಲ್ಲಾಡಳಿತ ವತಿಯಿಂದ ಗ್ರಾಮಕ್ಕೆ ಎಲ್ಲ ರೀತಿಯ ಮೂಲ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಲಾಗುವುದು. ತಮ್ಮ ಹಕ್ಕುಗಳಿಗೆ ಜಿಲ್ಲಾಡಳಿತ ಸ್ಪಂದಿಸಲಿದೆ. ಆ ನಿಟ್ಟಿನಲ್ಲಿ ಎಲ್ಲರೂ ಜಿಲ್ಲಾಡಳಿತದ ಜೊತೆ ಸಹಕರಿಸಬೇಕು. ಪ್ರತಿಯೊಬ್ಬರೂ ಶಿಕ್ಷಣ ಪಡೆಯುವತ್ತ ಗಮನಹರಿಸಬೇಕು” ಎಂದರು.

ಗ್ರಾಮದ ಮುಖ್ಯಸ್ಥ ಕೆ ಮೊಣ್ಣಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, “ಇಲ್ಲಿನ ಜನರ ಬದುಕು ಹಸನು ಮಾಡುವ ನಿಟ್ಟಿನಲ್ಲಿ ಕಳೆದ 16 ವರ್ಷಗಳಿಂದ ಹೋರಾಟ ಮಾಡಿಕೊಂಡು ಬರಲಾಗಿದ್ದು, ಇಲ್ಲಿನ ಕುಂದುಕೊರತೆಯನ್ನು ಪರಿಹರಿಸಬೇಕು” ಎಂದು ಮನವಿ ಮಾಡಿದರು.

“ಹಕ್ಕುಪತ್ರ ವಿತರಣೆಯಲ್ಲಿ ಲೋಪವಾಗಿದ್ದು, ಇದನ್ನು ಸರಿಪಡಿಸಬೇಕು. 1200ಕ್ಕೂ ಅಧಿಕ ಮಂದಿ ವಾಸ ಮಾಡುತ್ತಿದ್ದು, ಕನಿಷ್ಟ ಸೌಲಭ್ಯ ಈಡೇರಿಸಬೇಕು. ಇಲ್ಲಿನ ಕ್ರೀಡಾಂಗಣ ನಿರ್ಮಾಣ ಮತ್ತು ಸ್ಮಶಾನ ಜಾಗಕ್ಕೆ ಸಂಬಂಧಿಸಿದಂತೆ ಗೊಂದಲವಿದ್ದು, ಇದನ್ನು ಸರಿಪಡಿಸಬೇಕು. ಜನಸಂಖ್ಯೆ ಆಧಾರದಲ್ಲಿ ಪ್ರತಿ ಕುಟುಂಬಕ್ಕೂ 2 ಎಕರೆ ಭೂಮಿ ಒದಗಿಸಬೇಕು. ಸಮಾಜ ಮುಖಿಯಾಗಿ ಬದುಕಲು ಅವಕಾಶ ಮಾಡಬೇಕು. ನೊಂದ ಜನರಿಗೆ ನ್ಯಾಯ ಒದಗಿಸಬೇಕು” ಎಂದು ಮೊಣ್ಣಪ್ಪ ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಕರಾವಳಿ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಆಗ್ರಹ

ಗ್ರಾ.ಪಂ.ಅಧ್ಯಕ್ಷೆ ಎಚ್ ಎ ಹಂಸ, ಜಿ.ಪಂ.ಮಾಜಿ ಅಧ್ಯಕ್ಷೆ ಕೆ ಪಿ ಚಂದ್ರಕಲಾ, ಹಮೀದ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಲ್ಲಾಳ್,  ಗ್ರಾ.ಪಂ. ಉಪಾಧ್ಯಕ್ಷೆ ಅನುರಾಧ, ಗ್ರಾ.ಪಂ.ಸದಸ್ಯರು, ತಹಶೀಲ್ದಾರ್ ಪ್ರವೀಣ್ ಕುಮಾರ್, ತಾ.ಪಂ.ಇಒ ಶೇಖರ್, ಭೂ ದಾಖಲೆಗಳ ಉಪ ನಿರ್ದೇಶಕ ಪಿ.ಶ್ರೀನಿವಾಸ್, ಪಿಡಿಒ ಅಬ್ದುಲ್ಲಾ, ರಂಜಿತ್ ಮೌರ್ಯ, ಲಕ್ಷ್ಮಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...