ಕೊಡಗು | ಧ್ವನಿ ಇಲ್ಲದವರ ಸಾಮಾಜಿಕ ಭದ್ರತೆಯೇ ಸಂವಿಧಾನ: ಸೂಫಿ ಹಾಜಿ

Date:

ರಾಷ್ಟ್ರದ ಸರ್ವೋಚ್ಚ ಕಾನೂನಾಗಿರುವ ನಮ್ಮ ದೇಶದ ಶ್ರೇಷ್ಠ ಸಂವಿಧಾನದಿಂದಾಗಿ ದಮನಿತರ, ಶೋಷಿತರ, ಹಿಂದುಳಿದ ವರ್ಗಗಳ, ಬಡವರು ಸೇರಿದಂತೆ ತಳಸಮುದಾಯಗಳ ಮೇಲೆ ನಾಗರಿಕತೆಯ ಬೆಳಕು ಬೀಳುವಂತಾಯಿತು. ಧ್ವನಿ ಇಲ್ಲದವರ ಧ್ವನಿಯಾಗಿರುವ ನಮ್ಮ ಸಂವಿಧಾನ ತಳಸಮುದಾಯಗಳಿಗೆ ಸಾಮಾಜಿಕ ಭದ್ರತೆ ಒದಗಿಸುವ ಪ್ರಮುಖ ಆಧಾರ ಸ್ತಂಭವಾಗಿದೆ ಎಂದು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ಅಧ್ಯಕ್ಷ ದುದ್ದಿಯಂಡ ಹೆಚ್ ಸೂಫಿ ಹಾಜಿ ಅಭಿಪ್ರಾಯಪಟ್ಟರು.

1949ರ ನವೆಂಬರ್ 26ರಂದು ನಮ್ಮ ದೇಶದ ಶ್ರೇಷ್ಠ ಸಂವಿಧಾನ ಅಂಗೀಕಾರಗೊಂಡ ಹಿನ್ನೆಲೆಯಲ್ಲಿ ಆಚರಿಸಲಾಗುವ ಸಂವಿಧಾನ ದಿನಾಚರಣೆಯ ಅಂಗವಾಗಿ ಕೊಡಗು ಜಿಲ್ಲೆಯ ವಿರಾಜಪೇಟೆಯ ಕೆಎಂಎ ಪ್ರಧಾನ ಕಚೇರಿ ಸಭಾಂಗಣದಲ್ಲಿ ಅಳವಡಿಸಲಾದ ಸಂವಿಧಾನದ ಪೀಠಿಕೆ ಫಲಕ ಅನಾವರಣಗೊಳಿಸಿ ಬಳಿಕ ನಡೆದ ಸಮಾರಂಭದಲ್ಲಿ ಮಾತನಾಡಿದರು.

“ನಾಗರಿಕರ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ವ್ಯಾಖ್ಯಾನಿಸಿರುವ ನಮ್ಮ ಸಂವಿಧಾನ ಜಾತ್ಯತೀತತೆ ಮತ್ತು ಸಮಾನತೆಯನ್ನು ಪ್ರತಿಪಾದಿಸಿದೆ. ತಮ್ಮ ಶ್ರೇಷ್ಠ ಚಿಂತನೆಯ ಮೂಲಕ ತಳಸಮುದಾಯಗಳ ಉನ್ನತಿಗಾಗಿ ನೂರಾರು ವರ್ಷಗಳ ದೂರದೃಷ್ಟಿತ್ವದ ಸಂವಿಧಾನ ರೂಪಿಸಿದ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರು ಇಂದಿಗೂ ಜನಮಾನಸದಲ್ಲಿ ಸ್ಥಾನ ಪಡೆದಿರುವುದು ಈ ಕಾರಣಕ್ಕಾಗಿಯೇ” ಎಂದು ಒತ್ತಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಲ್ಪಸಂಖ್ಯಾತರ ಹಿತಾಸಕ್ತಿಗಳ ರಕ್ಷಣೆ ಮತ್ತು ಅಲ್ಪಸಂಖ್ಯಾತರು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮತ್ತು ನಿರ್ವಹಿಸುವ ಹಕ್ಕನ್ನೂ ನಮ್ಮ ಸಂವಿಧಾನ ನೀಡಿದೆ. ಭಾರತದ ಸಂವಿಧಾನದ 19ನೇ ವಿಧಿಯ ಪ್ರಕಾರ ಭಾರತದ ಪ್ರತಿಯೊಬ್ಬ ನಾಗರಿಕನಿಗೆ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವಿರುವುದು ಪ್ರಜಾಪ್ರಭುತ್ವದ ಮೌಲ್ಯವನ್ನು ಮತ್ತಷ್ಟು ಹೆಚ್ಚಿಸಿದೆ. ಸಂವಿಧಾನದ ಆಶಯದಿಂದಲೇ ಕಾನೂನಿನ ಮುಂದೆ ಪ್ರತಿಯೊಬ್ಬರೂ ಸಮಾನರೆಂದು ಪರಿಗಣಿಸಲ್ಪಟ್ಟಿದೆ. ಆದ್ದರಿಂದ ಇಂದು ಯಾರೂ ಕೂಡ ಯಾವುದೇ ಗುಲಾಮಗಿರಿಯ ದಾಸರಾಗುವ ಅಗತ್ಯವಿಲ್ಲ” ಎಂದು ಹೇಳಿದರು.

“ನಮ್ಮ ದೇಶದ ಸಂವಿಧಾನದ ಪೀಠಿಕೆಯಲ್ಲಿರುವ ಕೆಲವು ವಾಕ್ಯಗಳು ಭಾರತದ ಸಂವಿಧಾನವು ರಚಿತವಾಗಿರುವ ಕೆಲವು ಮೂಲಭೂತ ಮೌಲ್ಯಗಳು ಮತ್ತು ಸಾತ್ವಿಕ ಸೂಚಿಗಳನ್ನು ಎತ್ತಿ ತೋರಿಸುತ್ತದೆ. ಈ ಪೀಠಿಕೆಯು ನಮ್ಮ ಸಂವಿಧಾನದ ದಿಕ್ಸೂಚಿಯಂತೆ ಕೆಲಸ ಮಾಡುತ್ತದೆ. ಪೀಠಿಕೆಯ ಮೊದಲ ಪದವಾದ “ಭಾರತದ ಪ್ರಜೆಗಳಾದ ನಾವು” ಎಂಬುದು ದೇಶದಲ್ಲಿ ಅಧಿಕಾರ ಜನಗಳ ಕೈಯಲ್ಲಿದೆ ಎಂಬ ವಿಚಾರದ ಪ್ರಾಮುಖ್ಯತೆಯನ್ನು ಹೇಳುತ್ತದೆ. ಪೀಠಿಕೆಯು ದೇಶದ ಪ್ರತಿಯೊಬ್ಬ ನಾಗರಿಕ ಸಾಧಿಸಬೇಕಾದ ಬಹು ಮುಖ್ಯವಾದ ರಾಷ್ಟ್ರೀಯ ಧ್ಯೇಯಗಳಾದ ಸಮಾಜವಾದ, ಜಾತಿ ನಿರಪೇಕ್ಷತೆ ಮತ್ತು ರಾಷ್ಟ್ರೀಯ ಭಾವೈಕ್ಯತೆಯ ಬಗ್ಗೆ ಪ್ರತ್ಯೇಕವಾಗಿ ಬಿಡಿಸಿ ಹೇಳುತ್ತದೆ” ಎಂದು ಸೂಫಿ ಹಾಜಿ ನುಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕನ್ನಡ ನಾಡು-ನುಡಿ ರಕ್ಷಣೆ ಎಲ್ಲರ ಹೊಣೆ : ಡಾ. ಎಸ್.ಎಸ್ ಮೈನಾಳೆ

ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಅಕ್ಕಳತಂಡ ಎಸ್ ಮೊಯ್ದು, ಹಿರಿಯ ನಿರ್ದೇಶಕ ಚಿಮ್ಮಿಚ್ಚಿರ ಕೆ. ಇಬ್ರಾಹಿಂ (ಉಮ್ಮಣಿ), ಪದಾಧಿಕಾರಿಗಳಾದ ಮಂಡೇಂಡ ಎ. ಮೊಯ್ದು, ದುದ್ದಿಯಂಡ ಹೆಚ್. ಮೊಯ್ದು, ಕೋಳುಮಂಡ ರಫೀಕ್, ಆಲೀರ ಹೆಚ್. ಅಬ್ದುಲ್ ಲತೀಪ್, ಮಂದಮಾಡ ಮುನೀರ್ ಮೊದಲಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...