ಕೊಡಗು ಕ್ರೀಡಾ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಲಿ: ಸೂಫಿ ಹಾಜಿ

Date:

ಕ್ರೀಡೆಯ ತವರು ಎಂದು ಕರೆಸಿಕೊಂಡಿರುವ ಕೊಡಗು ಜಿಲ್ಲೆಯಲ್ಲಿ ವಿವಿಧ ಕ್ರೀಡಾಕೂಟಗಳು ನಿರಂತರವಾಗಿ ನಡೆಯುತ್ತಿದೆ. ಈ ರೀತಿಯ ಕ್ರೀಡಾಕೂಟಗಳನ್ನು ಉತ್ತೇಜಿಸಲು ‘ಕೊಡಗು ಕ್ರೀಡಾ ಅಭಿವೃದ್ಧಿ ಪ್ರಾಧಿಕಾರ’ವನ್ನು ರಚಿಸಲು ಸರ್ಕಾರ ಮುಂದಾಗಬೇಕು ಎಂದು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ಅಧ್ಯಕ್ಷ ವಿರಾಜಪೇಟೆಯ ದುದ್ದಿಯಂಡ ಹೆಚ್. ಸೂಫಿ ಹಾಜಿ ಒತ್ತಾಯಿಸಿದ್ದಾರೆ.

ಕೊಡಗು ಜಿಲ್ಲೆಯ ಗೋಣಿಕೊಪ್ಪಲು ತಾಲೂಕಿನ ನಲ್ವತ್ತೋಕ್ಲಿನಲ್ಲಿ ಚೋಕ್ ಸಿಟಿ ಫುಟ್ಬಾಲ್ ಕ್ಲಬ್ ಆಯೋಜಿಸಿದ್ದ ರಾಜ್ಯಮಟ್ಟದ ಫೈಸ್ ಫುಟ್ಬಾಲ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. “ಕೊಡಗು ಕ್ರೀಡಾ ಅಭಿವೃದ್ಧಿ ಪ್ರಾಧಿಕಾರವನ್ನು ಸರ್ಕಾರ ರಚಿಸಬೇಕು. ಇದರಿಂದ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯುವುದಲ್ಲದೆ ಜಿಲ್ಲೆಯಿಂದ ಹೆಚ್ಚಿನ ಪ್ರತಿಭಾನ್ವಿತ ಕ್ರೀಡಾಪಟುಗಳನ್ನು ತಯಾರು ಮಾಡಬಹುದು” ಎಂದು ಹೇಳಿದರು.

“ದೇಶದ ಹಾಕಿ ಸೇರಿದಂತೆ ವಿವಿಧ ಕ್ರೀಡೆಗಳಿಗೆ ಕೊಡಗು ಜಿಲ್ಲೆ ನೀಡಿದ ಕೊಡುಗೆ ಇಡೀ ಭಾರತವೇ ಹೆಮ್ಮೆಪಡುವ ಮಟ್ಟಿಗಿದೆ. ಈ ಹಿನ್ನೆಲೆಯಲ್ಲಾದರೂ ಕ್ರೀಡಾ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಬೇಕು. ಅಲ್ಲದೆ ಪ್ರತಿ ವರ್ಷದ ಬಜೆಟ್ಟಿನಲ್ಲಿ ಇದಕ್ಕಾಗಿ ಹಣವನ್ನು ಮೀಸಲಿಟ್ಟು ಕೊಡಗಿನಲ್ಲಿ ನಡೆಯುವ ಕ್ರೀಡಾಕೂಟಗಳನ್ನು ಸರ್ಕಾರ ಉತ್ತೇಜಿಸಬೇಕು. ಇದಕ್ಕಾಗಿ ಕೊಡಗಿನ ಜನಪ್ರತಿನಿಧಿಗಳು ಸರ್ಕಾರದ ಉನ್ನತ ಮಟ್ಟದಲ್ಲಿ ಒತ್ತಡ ಹೇರಬೇಕು. ಮುಂಬರುವ ಬಜೆಟ್ಟಿನಲ್ಲೇ ಈ ಪ್ರಾಧಿಕಾರವನ್ನು ಘೋಷಿಸಲು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಬೇಕು ಎಂದು ಒತ್ತಾಯಿಸಿದ ಸೂಫಿ ಹಾಜಿ, ಕೊಡಗಿನ ಕ್ರೀಡಾ ಚಟುವಟಿಕೆಗಳಿಗೆ ಸರಕಾರ ಸೂಕ್ತವಾಗಿ ಉತ್ತೇಜನ ನೀಡದಿದ್ದಲ್ಲಿ ಕೊಡಗನ್ನು ಕ್ರೀಡೆಯ ತವರು ಎಂದು ಕರೆಸಿಕೊಳ್ಳುವುದರಲ್ಲಿ ಯಾವುದೇ ಅರ್ಥವಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯಮಟ್ಟದ ಫೈಸ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಸ್ಕ್ವಾಡ್ ಚೋಕ್ ಸಿಟಿ ತಂಡ ವಿನ್ನರ್ಸ್ ಪ್ರಶಸ್ತಿ ಪಡೆದುಕೊಂಡರೆ, ಸುಂಕದಕಟ್ಟೆಯ ಉತ್ತಮ್ ಫ್ರೆಂಡ್ಸ್ ತಂಡ ರನ್ನರ್ಸ್ ಸ್ಥಾನ ಪಡೆಯಿತು. ಫೈನಲ್ ಪಂದ್ಯದಲ್ಲಿ ಸ್ಕ್ವಾಡ್ ಚೋಕ್ ಸಿಟಿ ತಂಡ ಸುಂಕದಕಟ್ಟೆಯ ಉತ್ತಮ ಫ್ರೆಂಡ್ಸ್ ತಂಡವನ್ನು 2-0 ಗೋಲುಗಳಿಂದ ಸೋಲಿಸಿ ವಿಜಯದ ಮಾಲೆಯನ್ನು ತನ್ನ ಕೊರಳಿಗೇರಿಸಿಕೊಂಡಿತು.

ಇದಕ್ಕೂ ಮೊದಲು ನಡೆದ ಮೊದಲ ಸೆಮಿ ಫೈನಲ್ ಪಂದ್ಯಾವಳಿಯಲ್ಲಿ ಸ್ಕ್ವಾಡ್ ಚೋಕ್ ಸಿಟಿ ತಂಡ ಚಾಮೆ ಫುಟ್ಬಾಲ್ ಕ್ಲಬ್ ತಂಡವನ್ನು 1-0 ಗೋಲಿನಿಂದ ಮತ್ತು ಸುಂಕದಕಟ್ಟೆಯ ಉತ್ತಮ್ ಫ್ರೆಂಡ್ಸ್ ತಂಡ ಸಿ.ಎಫ್.ಸಿ ಅಮ್ಮತ್ತಿ ತಂಡವನ್ನು 1-0 ಗೋಲುಗಳಿಂದ ಮಣಿಸಿ ಫೈನಲ್ ಪ್ರವೇಶಿಸಿತ್ತು. ವಿಜೇತ ತಂಡಗಳಿಗೆ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ನಗದು ಬಹುಮಾನ ಸೇರಿದಂತೆ ಪಾರಿತೋಷಕಗಳನ್ನು ವಿತರಿಸಲಾಯಿತು. ಒಟ್ಟು 32 ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು.

ಕಾರ್ಯಕ್ರಮದಲ್ಲಿ ಜಿಲ್ಲಾ ನಿವೃತ್ತ ಖಜಾನಾಧಿಕಾರಿ ಕನ್ನಡಿಯಂಡ ಎ. ಆಲಿ ಹಾಜಿ, ನಲ್ವತ್ತೋಕ್ಲಿನ ಮೊಹಿದೀನ್ ಜುಮಾ ಮಸೀದಿಯ ಆಡಳಿತ ಮಂಡಳಿ ಉಪಾಧ್ಯಕ್ಷರಾದ ಡಿ. ಎಫ್. ಆಶ್ರಫ್, ಸ್ಥಳೀಯರಾದ ಹೆಚ್. ಎ. ಮೊಹಮ್ಮದ್ ಹಾಜಿ, ಕೆ.ಎಂ. ಹ್ಯಾರಿಸ್, ಪಿ.ಎ. ಬಶೀರ್, ಡಿ.ಎಸ್. ಶರ್ಹಾನ್, ಸಯಿದ್, ಡಿ.ಎಂ. ಸಿರಾಜ್, ಎಚ್.ಎಂ. ನೌಫಲ್ ಮೊದಲಾದವರು ಭಾಗವಹಿಸಿದ್ದರು.

ಪಂದ್ಯಾವಳಿ ಆಯೋಜಕರಾದ ನಲ್ವತ್ತೋಕ್ಲಿನ ಚೋಕ್ ಸಿಟಿ ಫುಟ್ಬಾಲ್ ಕ್ಲಬ್ ನ ಮುಖ್ಯಸ್ಥರಾದ ಶಾಹಿದ್, ಶರ್ಮಿದ್, ಮೊಹಾದ್, ಅಜನಾಸ್, ಅಜ್ಮಲ್ ಮೊದಲಾದವರು ಪಂದ್ಯಾವಳಿಯ ಮೇಲುಸ್ತುವಾರಿ ವಹಿಸಿದ್ದರು.

ಚಿತ್ರ ಶೀರ್ಷಿಕೆ: ನಲ್ವತ್ತೋಕ್ಲಿನಲ್ಲಿ ಮುಕ್ತಾಯಗೊಂಡ ರಾಜ್ಯಮಟ್ಟದ ಫೈಸ್ ಫುಟ್ಬಾಲ್ ಪಂದ್ಯಾವಳಿಯ ವಿನ್ನರ್ಸ್ ತಂಡಕ್ಕೆ ಟ್ರೋಫಿ ವಿತರಿಸುತ್ತಿರುವ ಸೂಫಿ ಹಾಜಿ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...