ಆಘಾತಕಾರಿ ಘಟನೆಯೊಂದರಲ್ಲಿ 15 ವರ್ಷದ ಬಾಲಕಿಯನ್ನು ಕೊಂದ ಹಂತಕ ಆಕೆಯ ರುಂಡದೊಂದಿಗೆ ಪರಾರಿಯಾಗಿರುವುದು ಕೊಡಗು ಜಿಲ್ಲೆಯ ಸೋಮವಾರಪೇಟೆಯ ಮುತ್ಲು ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.
ಹಂತಕನನ್ನು 32 ವರ್ಷದ ಪ್ರಕಾಶ್ ಎಂದು ಗುರುತಿಸಲಾಗಿದೆ. ಹತ್ಯೆಯಾದ ಬಾಲಕಿ ಹಾಗೂ ಹಂತಕನ ನಿಶ್ಚಿತಾರ್ಥವನ್ನು ಮಹಿಳಾ ಮತ್ತು ಮಕ್ಕಳ ಇಲಾಖೆಯ ಅಧಿಕಾರಿಗಳು ಮೇ.9 ರಂದು ತಡೆದಿದ್ದರು.
ಅಪ್ರಾಪ್ತೆಯನ್ನು ಈಗಲೇ ಮದುವೆ ಮಾಡಬೇಡಿ ಎಂದು ಅಧಿಕಾರಿಗಳು ಬಾಲಕಿಯ ಪೋಷಕರಿಗೆ ಮನವರಿಕೆ ಮಾಡಿದ್ದರು ಎಂದು ತಿಳಿದು ಬಂದಿದೆ.
ಆದಾಗ್ಯೂ ಹಂತಕ ಕಳೆದ ರಾತ್ರಿ ಬಾಲಕಿಯ ಮನಗೆ ನುಗ್ಗಿ ಆಕೆಯನ್ನು ಅಪಹರಿಸಿದ್ದಾನೆ. ಮಾರನೇ ದಿನ ಗ್ರಾಮದ ಪಕ್ಕದ ಅರಣ್ಯದ ಬಳಿ ಬಾಲಕಿಯ ರುಂಡವಿಲ್ಲದ ದೇಹ ಪತ್ತೆಯಾಗಿದೆ. ಆರೋಪಿ ರುಂಡದೊಂದಿಗೆ ಪರಾರಿಯಾಗಿದ್ದಾನೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಜೆಡಿಎಸ್-ಬಿಜೆಪಿ ಜಂಟಿ ಕೃತ್ಯ, ಘನಘೋರ ಲೈಂಗಿಕ ಹತ್ಯಾಕಾಂಡ
ಪೊಲೀಸರು ಹಂತಕನಿಗಾಗಿ ಪತ್ತೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕೊಡಗು ಎಸ್ಪಿ ರಾಮ್ರಾಜನ್, ಕೊಲೆಯಾದ ಬಾಲಕಿ ನಿನ್ನೆ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಏಕೈಕ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿಸಿದ್ದಾರೆ.
ಸಂತ್ರಸ್ತೆಯ ತಾಯಿಗೂ ಹಲ್ಲೆಗೊಳಗಾಗಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಆರೋಪಿಯ ತಾಯಿಯನ್ನು ವಿಚಾರಣೆ ನಡೆಸಿದ ನಂತರ ಕೊಲೆಯ ಉದ್ದೇಶ ತಿಳಿಯಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.





