ಕೊಡಗು | ಮುಸ್ಲಿಂ ಕಪ್-2024: ಜನವರಿ 19 ರಿಂದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ

Date:

ಕೊಡಗು ಜಿಲ್ಲಾ ಮುಸ್ಲಿಂ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಸೋಸಿಯೇಷನ್ ಪ್ರತಿ ವರ್ಷದಂತೆ ಈ ವರ್ಷವೂ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಿದೆ. ‘ಮುಸ್ಲಿಂ ಕಪ್-2024’ ಪಂದ್ಯಾವಳಿಯು 2024ರ ಜನವರಿ 19ರಿಂದ 21ರವರೆಗೆ ವಿರಾಜಪೇಟೆಯ ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಅಸೋಷಿಯೇಷನ್ ಅಧ್ಯಕ್ಷ ಪಿ.ಎ ಹನೀಫ್‌ ತಿಳಿಸಿದ್ದಾರೆ.

ಕೊಡಗು ಜಿಲ್ಲೆಯ ಗೋಣಿಕೊಪ್ಪಲಿನಲ್ಲಿ ನಡೆದ ಪಂದ್ಯಾವಳಿಯ ಪೂರ್ವಸಿದ್ದತಾ ಸಭೆಯಲ್ಲಿ ಅವರು ಮಾತನಾಡಿದರು. “ಜಿಲ್ಲೆಯ ಮುಸ್ಲಿಂ ಜಮಾಅತ್ ತಂಡಗಳ ನಡುವೆ ಮೂರು ದಿನಗಳ ಕಾಲ ಪಂದ್ಯಾವಳಿ ನಡೆಯಲಿದೆ. 60ಕ್ಕೂ ಹೆಚ್ಚು ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ. 25 ಲಕ್ಷ ರೂಪಾಯಿ ವೆಚ್ಚದಲ್ಲಿ ಪಂದ್ಯಾವಳಿ ನಡೆಸಲು ರೂಪುರೇಷೆ ತಯಾರಾಗಿದೆ. ಜಿಲೆಯ ವಿವಿಧಡೆಯ ದಾನಿಗಳ ಮತ್ತು ಕ್ರೀಡಾ ಪ್ರೇಮಿಗಳ ಆರ್ಥಿಕ ನೆರವಿನಿಂದ ಈ ಕ್ರೀಡಾಕೂಟವನ್ನು ಯಶಸ್ವಿಗೊಳಿಸುವ ಆಶಾಭಾವನೆ ಇದೆ” ಎಂದು ಹೇಳಿದ್ದಾರೆ.

“2009ರಿಂದ ಆರಂಭಿಸಲಾದ ಮುಸ್ಲಿಂ ಕಪ್ ವಾಲಿಬಾಲ್ ಪಂದ್ಯಾವಳಿ 2019 ರವರೆಗೆ ನಿರಂತರವಾಗಿ ಜರುಗಿದೆ. ಬಳಿಕ ಎದುರಾದ ಕೋವಿಡ್ ತಲ್ಲಣ ಕಾಲಘಟ್ಟದಲ್ಲಿ ಪಂದ್ಯಾವಳಿಯನ್ನು ಅನಿವಾರ್ಯ ಕಾರಣಗಳಿಂದ ನಡೆಸಲು ಸಾಧ್ಯವಾಗಲಿಲ್ಲ. ಮೂರು ವರ್ಷದ ಬಳಿಕ ಮುಂದಿನ ಜನವರಿಯಲ್ಲಿ ನಡೆಯಲಿರುವ ಈ ಪಂದ್ಯಾವಳಿಯನ್ನು ಮತ್ತಷ್ಟು ಅದ್ದೂರಿಯಾಗಿ ಮತ್ತು ಯೋಜನಾಬದ್ಧವಾಗಿ ನಡೆಸಲು ತೀರ್ಮಾನಿಸಲಾಗಿದೆ. ಪಂದ್ಯಾವಳಿಗೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲೆಯ ಎಲ್ಲಾ ಜಮಾಅತ್ತುಗಳಿಗೆ ಮಾಹಿತಿ ರವಾನಿಸಲಾಗಿದೆ. ನಿಗಧಿತ ನಮೂನೆಯ ಅರ್ಜಿಯನ್ನು ಭರ್ತಿ ಮಾಡಿ ರೂ. 3000 ಪ್ರವೇಶ ಶುಲ್ಕದೊಂದಿಗೆ ತಂಡಗಳ ಹೆಸರನ್ನು ನೋಂದಾಯಿಸಲು ಮುಂದಿನ ಜ.12ರವರೆಗೆ ಅಂತಿಮ ಗಡುವು ನೀಡಲಾಗಿದೆ ಎಂದು ಮಾಹಿತಿ ನೀಡಿದ ಹನೀಫ್, ಪ್ರೇಕ್ಷಕರ ಅನುಕೂಲಕ್ಕಾಗಿ ವಿರಾಜಪೇಟೆ ತಾಲೂಕು ಮೈದಾನದ ಸುತ್ತಲೂ ಗ್ಯಾಲರಿ ನಿರ್ಮಿಸುವ ಕಾರ್ಯವನ್ನು ಜನವರಿ ಮೊದಲ ವಾರದಿಂದ ಕೈಗೆತ್ತಿಕೊಳ್ಳಲಾಗುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯಲ್ಲಿದ್ದ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎಂ.ಎಂ. ಇಸ್ಮಾಯಿಲ್ ಅವರು ಮಾತನಾಡಿ, “ಆಯಾ ಜಮಾಅತ್ ತಂಡಗಳನ್ನು ಹೊರತುಪಡಿಸಿ ಬರುವ ಬೇರೆ ಯಾವುದೇ ತಂಡಗಳಿಗೆ ಪಂದ್ಯಾವಳಿಯಲ್ಲಿ ಆಡಲು ಅವಕಾಶವಿರುವುದಿಲ್ಲ. ಸಂಬಂಧಿಸಿದ ಜಮಾಅತ್ ವ್ಯಾಪ್ತಿಯ ಸದಸ್ಯರು ಆಯಾ ಜಮಾಅತ್ತು ತಂಡದಲ್ಲಲ್ಲದೆ ಬೇರೆ ಜಮಾಅತ್ ತಂಡಗಳನ್ನು ಪ್ರತಿನಿಧಿಸುವಂತಿಲ್ಲ ಎಂದು ಪಂದ್ಯಾವಳಿಯ ನಿಯಮಗಳನ್ನು ವಿವರಿಸಿದರಲ್ಲದೆ, ಪಂದ್ಯಾವಳಿಯಲ್ಲಿ ವಿಜೇತರಾಗುವ ಪ್ರಥಮ, ದ್ವಿತೀಯ ಮತ್ತು ತೃತೀಯ ತಂಡಗಳಿಗೆ ಆಕರ್ಷಕ ನಗದು ಬಹುಮಾನದೊಂದಿಗೆ ಈ ಬಾರಿ ವಿಶೇಷವಾಗಿ ಮರದಿಂದ ಕೆತ್ತಲಾದ ವಿನೂತನ ಪಾರಿತೋಷಕವನ್ನು ನೀಡಲಾಗುವುದು. ಆಸಕ್ತರು ಪಂದ್ಯಾವಳಿಯ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆಗಳಾದ 9686395731/19945635158/ 94499 89018 ಅನ್ನು ಸಂಪರ್ಕಿಸಹುದು” ಎಂದು ತಿಳಿಸಿದರು.

ಸಭೆಯಲ್ಲಿ ಕೊಡಗು ಜಿಲ್ಲಾ ಮುಸ್ಲಿಂ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಸೋಸಿಯೇಷನ್ ಪದಾಧಿಕಾರಿಗಳಾದ ಹೆಚ್. ಎ. ಹಂಸ. ಕರೀಂ ಕಡಂಗ, ಮೊಹಮ್ಮದ್ ರಾಫಿ ಕೋಳುಮಂಡ ರಫೀಕ್, ಕೆ.ಎಸ್. ಸೂಫಿ, ಏಜಾಜ್ ಅಹಮದ್, ಜಲೀಲ್ ಮಂದಮಾಡ ಮುನೀರ್ ಮೊದಲಾದವರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...