ಕೊಡಗು | ಕಾಫಿ ಕೊಯ್ಲಿಗೆ ಸಿಗುತ್ತಿಲ್ಲ ಕಾರ್ಮಿಕರು; ವೇತನದ ಜಾಹೀರಾತು ಹಿಡಿದು ನಿಂತ ಮಾಲೀಕರು

Date:

ಕರ್ನಾಟಕವೂ ಸೇರಿದಂತೆ ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಹೆಮ್ಮರವಾಗಿದೆ. ಉದ್ಯೋಗಗಳ ಕೊರತೆ ಮತ್ತು ಉದ್ಯೋಗಾಕಾಂಕ್ಷಿಗಳ ಹೆಚ್ಚಳದಿಂದ ಉದ್ಯೋಗಿಗಳಿಗೆ ವೇತನವೂ ಅಗತ್ಯಕ್ಕಿಂತ ಕಡಿಮೆಯೇ ಇದೆ. ಕೂಲಿ ಕೆಲಸ ಮಾಡುವವರೂ ಕೂಡ ಶ್ರಮಕ್ಕೆ ತಕ್ಕ ಕೂಲಿ ಸಿಗದೆ ಬೇಸತ್ತಿದ್ದಾರೆ. ಹೀಗಾಗಿ, ಶ್ರಮಕ್ಕೆ ತಕ್ಕ ಪ್ರತಿಫಲ ಅರಸಿ ವಲಸೆ ಹೋಗುತ್ತಿದ್ದಾರೆ. ಇಂತಹ ವಲಸೆ ಕೊಡಗು ಜಿಲ್ಲೆಯಲ್ಲೂ ನಡೆದಿದ್ದು, ಸ್ಥಳೀಯ ಕಾಫಿ ತೋಟಗಳಲ್ಲಿ ಕೆಲಸ ಮಾಡಲು ಕೂಲಿಕಾರರೇ ಇಲ್ಲದಂತಾಗಿದೆ. ಕಾಫಿ ಎಸ್ಟೇಟ್ ಮಾಲೀಕರು ಕೂಲಿ ಕಾರ್ಮಿಕರಿಗಾಗಿ ಹುಡುಕಾಡುತ್ತಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಕಾಫಿ ಬೀಜಗಳ ಕೊಯ್ಲಿಗೆ ಕಾರ್ಮಿಕರು ಸಿಗದೆ, ಎಸ್ಟೇಟ್‌ ಮಾಲೀಕರೊಬ್ಬರು ಹೆಚ್ಚು ವೇತನ ಹಾಗೂ ಓವರ್ ಟೈಮ್ (ಓಟಿ) ಕೆಲಸಕ್ಕೆ ಹೆಚ್ಚುವರಿ ವೇತನ ನೀಡುವುದಾಗಿ ಜಾಹೀರಾತು ಹಿಡಿದು ರಸ್ತೆ ಬದಿಯಲ್ಲಿ ನಿಂತಿರುವುದು ಕಂಡುಬಂದಿದೆ. ಅವರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಜಾಹೀರಾತು ಹಿಡಿದಿರುವ ಕಾಫಿ ತೋಟದ ಮಾಲೀಕ ತನ್ನ ಜಾಹೀರಾತಿನಲ್ಲಿ, ‘ಕೆಲಸಗಾರರು ಬೇಕಾಗಿದ್ದಾರೆ! ರೊಬೊಸ್ಟಾ ಪಿಕಿಂಗ್ – ಕೆ.ಜಿಗೆ 4.22 ರೂ. ಮಹಿಳಾ ಕಾರ್ಮಿಕರಿಗೆ ದಿನಕ್ಕೆ 415+OT ವೇತನ, ಪುರುಷ ಕಾರ್ಮಿಕರಿಗೆ 615+OT ವೇತನ’ ನೀಡುವುದಾಗಿ ಬರೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ಚಿತ್ರವನ್ನು ಕೊಡಗು ಕನೆಕ್ಟ್‌ ಎಂಬ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಚಿತ್ರದ ಜೊತೆಗೆ, “ಕೂಲಿ ಹೆಚ್ಚಿದ್ದರೂ ಕಾಫಿ ಕೊಯ್ಲು ಮಾಡಲು ಕಾರ್ಮಿಕರು ಸಿಗುತ್ತಿಲ್ಲ. ಕಾರ್ಮಿಕರ ಕೊರತೆ ಹೆಚ್ಚಾಗಿದೆ. ಕೊಡಗಿನ ಕಾಫಿ ಬೆಳೆಗಾರರೊಬ್ಬರು ವಿನೂತನ ಜಾಹೀರಾತು ನೀಡಿ ಕಾರ್ಮಿಕರನ್ನು ಸೆಳೆಯುತ್ತಿದ್ದಾರೆ” ಎಂದು ಬರೆಯಲಾಗಿದೆ.

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...