ಕೋಲಾರ | 394 ಕೆಜಿ ಗಾಂಜಾ ವಶ; ಶಾಲೆ, ಕಾಲೇಜುಗಳಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ

Date:

ನ್ಯಾಯಾಲಯದ ಅನುಮತಿ ಮೇರೆಗೆ ಕೇಂದ್ರ ವಲಯ ವ್ಯಾಪ್ತಿಯ ಆರು ವಲಯಗಳಲ್ಲಿ ವಶಪಡಿಸಿಕೊಂಡ 394 ಕೆಜಿ ಗಾಂಜಾವನ್ನು ನಾಶಪಡಿಸಲಾಗಿದೆ ಎಂದು ಕೇಂದ್ರ ವಲಯ ಐಜಿಪಿ ಲಾಭುರಾಮ್ ತಿಳಿಸಿದ್ದಾರೆ.

“ಕೋಲಾರ ಜಿಲ್ಲೆಯಲ್ಲಿ 97.624 ಕೆಜಿ, ಕೆಜಿಎಫ್‌ನಲ್ಲಿ 83.45 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ತುಮಕೂರು ಜಿಲ್ಲಾ ಪೊಲೀಸರು 51.7 ಕೆಜಿ ಗಾಂಜಾ ಮತ್ತು 47 ಗ್ರಾಂ ಎಂಡಿಎಂಎ, ರಾಮನಗರ ಜಿಲ್ಲಾ ಪೊಲೀಸರು 27.8 ಕೆಜಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು 24.760 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 112.67 ಕೆಜಿ ಗಾಂಜಾ ಮತ್ತು 5 ಲೀಟರ್ ಗಾಂಜಾ ಸಾಂದ್ರೀಕರಣ ವಶಪಡಿಸಿಕೊಳ್ಳಲಾಗಿದೆ” ಎಂದು ತಿಳಿಸಿದ್ದಾರೆ.

“ಆರು ಜಿಲ್ಲೆಗಳನ್ನು ಒಳಗೊಂಡಿರುವ ಕೇಂದ್ರ ವಲಯವು ವಿದ್ಯಾರ್ಥಿ ಸಮುದಾಯದ ಹಿತದೃಷ್ಟಿಯಿಂದ ಮತ್ತು ಸಮಾಜವನ್ನು ರಕ್ಷಿಸುವ ಸಲುವಾಗಿ ಮಾದಕವಸ್ತುಗಳ ದುರುಪಯೋಗ, ಸೈಬರ್ ಅಪರಾಧ ಹಾಗೂ ಐಎಂವಿ(ಮೋಟಾರು ವಾಹನ ಕಾಯ್ದೆ ಉಲ್ಲಂಘನೆ) ಉಲ್ಲಂಘನೆಯ ಬಗ್ಗೆ ಶಾಲೆ, ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದೆ” ಎಂದು ಲಭುರಾಮ್ ಜಾಗೃತಿ ಯೋಜನೆಗಳ ಬಗ್ಗೆ ಮಾಹಿತಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಾಲೆ, ಕಾಲೇಜು ವಿದ್ಯಾರ್ಥಿಗಳು ಮಾದಕ ದ್ರವ್ಯ ಸೇವನೆಯಲ್ಲಿ ಹೆಚಾಗಿ ತೊಡಗಿಸಿಕೊಳ್ಳುತ್ತಿರುವುದಾಗಿ ವರದಿ ಬಂದಿರುವುದನ್ನು ಪರಿಗಣಿಸಿ ಅವರ ಭವಿಷ್ಯವನ್ನು ರಕ್ಷಿಸಲು ಜಾಗೃತಿ ಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗುತ್ತಿದೆ. ಅದೇ ಸಮಯದಲ್ಲಿ, ಪೋಷಕರು ತಮ್ಮ ಮಕ್ಕಳನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುವ ಮೂಲಕ ಮತ್ತು ಅವರ ಚಟುವಟಿಕೆಗಳ ಮೇಲೆ ನಿಗಾ ವಹಿಸುವ ಮೂಲಕ ಹೆಚ್ಚಿನ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡುತ್ತಿದೆ ಸಂಚಾರಿ ಕಣ್ಣಿನ ಘಟಕ

“ಆರು ಜಿಲ್ಲೆಗಳಲ್ಲಿಯೂ ಆದ್ಯತೆಯ ಆಧಾರದ ಮೇಲೆ ಜಾಗೃತಿ ತರಗತಿಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಸಬ್ ಇನ್‌ಸ್ಪೆಕ್ಟರ್‌ನಿಂದ ಹಿಡಿದು ಉಪ ಪೊಲೀಸ್ ವರಿಷ್ಠಾಧಿಕಾರಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಪೊಲೀಸ್ ಅಧೀಕ್ಷಕರವರೆಗಿನ ಎಲ್ಲ ಪೊಲೀಸ್ ಅಧಿಕಾರಿಗಳು ಈ ಅಧಿವೇಶನಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ” ಎಂದರು.

“ಮಾದಕ ವಸ್ತುಗಳ ಅಪಾಯಗಳು, ಸೈಬರ್ ಅಪರಾಧ ಮತ್ತು ಮೋಟಾರು ವಾಹನ ಕಾಯ್ದೆಯ ಉಲ್ಲಂಘನೆಗಳು ಅವರ ಜೀವಕ್ಕೆ ಅಪಾಯವನ್ನುಂಟು ಮಾಡುವುದಲ್ಲದೆ ಇತರರನ್ನೂ ಅಪಾಯಕ್ಕೆ ತಳ್ಳುತ್ತದೆ. ಹಾಗಾಗಿ ಈ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಇದರ ಉದ್ದೇಶವಾಗಿದೆ. ಅಪ್ರಾಪ್ತರು ವಾಹನ ಚಾಲನೆ, ತ್ರಿವಳಿ ಸವಾರಿ ಮತ್ತು ಸ್ಟಂಟ್ ರೈಡಿಂಗ್ ಬಗ್ಗೆಯೂ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಗುವುದು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...