ಕೋಲಾರ | ‘ಈರುಳ್ಳಿ ದೋಸೆ’ ತಿಂದು 41 ವಿದ್ಯಾರ್ಥಿಗಳು ಅಸ್ವಸ್ಥ; ಸೂಕ್ತ ಕ್ರಮಕ್ಕೆ ಯುವ ಕಾಂಗ್ರೆಸ್ ಆಗ್ರಹ

Date:

ಕೋಲಾರದ ವಿದ್ಯಾ ಜ್ಯೋತಿ ಖಾಸಗಿ ಕಾಲೇಜಿನ ವಸತಿ ನಿಲಯದ ವಿದ್ಯಾರ್ಥಿಗಳು ಈರುಳ್ಳಿ ದೋಸೆ ತಿಂದು ಅಸ್ವಸ್ಥರಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ರಾತ್ರಿ ಆನಿಯನ್ ದೋಸೆ ತಿಂದಿದ್ದ ವಿದ್ಯಾರ್ಥಿಗಳು ವಾಂತಿ ಭೇದಿಯಾಗಿ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಕೋಲಾರ ಜಿಲ್ಲಾಸ್ಪತ್ರೆಗೆ ತಹಶೀಲ್ದಾರ್ ನಯನ ಭೇಟಿ ನೀಡಿ, ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು ಹಾಗೂ ಕೋಲಾರದ ಬಸವನತ್ತ ಬಳಿ ಇರುವ ವಿದ್ಯಾಜ್ಯೋತಿ ಖಾಸಗಿ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“41 ವಿದ್ಯಾರ್ಥಿಗಳು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಆರೋಗ್ಯ ಇಲಾಖೆ, ಆಹಾರ ಇಲಾಖೆ ಹಾಗೂ ಪೋಲಿಸರು ಪರಿಶೀಲನೆ ಮಾಡುತ್ತಿದೆ. ಎಲ್ಲಿ ಲೋಪ ಆಗಿದೆ ಎಂದು ತನಿಖೆ ಮಾಡುತ್ತಿದೆ. ಎಲ್ಲ ಮಾಹಿತಿ ಪಡೆದು ಜಿಲ್ಲಾಧಿಕಾರಿಗಳಿಗೆ ವರದಿ ನೀಡುತ್ತೇವೆ” ಎಂದು ಕೋಲಾರ ತಾಲೂಕು ದಂಡಾಧಿಕಾರಿ ನಯನಾ ಮಾಹಿತಿ ನೀಡಿದರು.

image 59

ಕೋಲಾರ ಜಿಲ್ಲಾ ಆರೋಗ್ಯ ವೈದ್ಯಾಧಿಕಾರಿ ಪ್ರತಿಕ್ರಿಯೆ ನೀಡಿದ್ದು, ವಿದ್ಯಾ ಜ್ಯೋತಿ ಖಾಸಗಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಬೆಳಗಿನ ಜಾವ ಹೊಟ್ಟೆ ನೋವು, ವಾಂತಿ ಭೇದಿ ಆದ ಹಿನ್ನೆಲೆಯಲ್ಲಿ 41 ವಿದ್ಯಾರ್ಥಿಗಳಿಗೆ ನಮ್ಮ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಂಡು ಚಿಕಿತ್ಸೆ ನೀಡಿದ್ದೇವೆ. ಎಲ್ಲಾ ಮಕ್ಕಳು ಚೇತರಿಕೆ ಆಗುತ್ತಿದ್ದಾರೆ. ರಾತ್ರಿ ದೋಸೆ, ಚಟ್ನಿ, ಆಲೂಗಡ್ಡೆ ಸಾಂಬಾರ್ ತಿಂದ ಹಿನ್ನೆಲೆ ಈ ರೀತಿ ಆಗಿದೆ ಎಂದು ತಿಳಿಸಿದರು.

ಅಸ್ವಸ್ಥರಾಗಿದ್ದ ಸುಮಾರು 41 ವಿದ್ಯಾರ್ಥಿಗಳ ಆರೋಗ್ಯ ವಿಚಾರಣೆ ಮಾಡಿದ ಬಳಿಕ ಈ ದಿನ ನ್ಯೂಸ್ ಗೆ ಪ್ರತಿಕ್ರಿಯೆ ನೀಡಿದ ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಸೈಯದ್ ಆಫ್ರಿದ್, “ಈ ಘಟನೆಗೆ ಕಾರಣ ಆದವರಿಗೆ ಕೂಡಲೇ ಕಠಿಣ ಶಿಕ್ಷೆ ನೀಡಬೇಕು ಹಾಗೂ ಪರಿಶೀಲನೆ ಮಾಡಿ ಶಾಲಾ ಆಡಳಿತ ಮಂಡಳಿ ಮೇಲೆ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ..? ಚುನಾವಣೆ ನೆಪದಲ್ಲಿ ಗಿಮಿಕ್ ಮಾಡಲು ಹೊರಟಿದ್ದಾರೆ: ವರ್ತೂರ್‌ ಪ್ರಕಾಶ್‌ ವಿರುದ್ಧ ಕೊತ್ತೂರು ಮಂಜುನಾಥ್ ವಾಗ್ದಾಳಿ

ಸುಮಾರು ವಿದ್ಯಾರ್ಥಿಗಳಿಗೆ ಫುಡ್ ಪಾಯಿಸನ್ ಆಗಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಅವರ ಆರೋಗ್ಯ ವಿಚಾರಣೆ ಮಾಡಿದ್ದೇವೆ. ಈ ಘಟನೆ ಸಂಭವಿಸಲು ಯಾರು ಕಾರಣವೋ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಯುವ ಮುಖಂಡ ನವೀನ್ ಆಗ್ರಹಿಸಿದರು.

WhatsApp Image 2025 08 13 at 19.48.34

ಈ ಸಂದರ್ಭದಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭರತ್ ರಾಯ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಿಯಾಜ್ ಗೋರು, ತಾಲೂಕು ಅಧ್ಯಕ್ಷ ಸುಹೈಲ್, ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಅರ್ಬಾಜ್ ಮುಂತಾದವರು ಉಪಸ್ಥಿತರಿದ್ದರು.


WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...