ಕೋಲಾರ | ಗುಟ್ಟಹಳ್ಳಿ ಸರ್ಕಾರಿ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Date:

ದೇಶದ ಭವಿಷ್ಯ ರೂಪಿಸುವುದರಲ್ಲಿ ಮಕ್ಕಳ ಪಾತ್ರ ಬಹಳ ಮುಖ್ಯ. ಪ್ರತಿಯೊಬ್ಬರೂ ಘನತೆಯಿಂದ ಬದುಕುವಂತಾದಾಗ ಸ್ವಾತಂತ್ರ್ಯ ದಿನಾಚರಣೆಗೆ ಒಂದು ಅರ್ಥ ಸಿಗುತ್ತದೆ ಎಂದು ಗುಟ್ಟಹಳ್ಳಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಎನ್ ಪ್ರಕಾಶ್ ತಿಳಿಸಿದರು.

ಕೋಲಾರ ತಾಲೂಕಿನ ನರಸಾಪುರ ಹೋಬಳಿಯ ಗುಟ್ಟಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಭಾರತದ ಅನೇಕ ಮಹಾವೀರರ ತ್ಯಾಗ ಬಲಿದಾನಗಳಿಂದ ಸ್ವಾತಂತ್ರವನ್ನು ಪಡೆದುಕೊಂಡಿದ್ದು, ಕಳೆದ 78 ವರ್ಷಗಳಲ್ಲಿ ಸಾಕಷ್ಟು ಪ್ರಗತಿಯನ್ನು ಸಾಧಿಸಿದೆ. ಬಾಹ್ಯಾಕಾಶ ಪರಿಶೋಧನೆ, ತಂತ್ರಜ್ಞಾನ ಮೂಲಸೌಕರ್ಯ ಮತ್ತು ಕ್ರೀಡೆಗಳಲ್ಲಿ ನಮ್ಮ ದೇಶವು ಹಲವಾರು ಸಾಧನೆಗಳನ್ನು ಮಾಡಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗಿನ ಯುವಕರು ಪರಿಸರ ಸಂರಕ್ಷಣೆ, ಸಮುದಾಯ ಸೇವೆ ಮತ್ತು ಜವಾಬ್ದಾರಿಯುತ ಪೌರತ್ವದ ಕಡೆಗೆ ಗಮನಹರಿಸಬೇಕು. ಅನೇಕ ಮಹನೀಯರು ಸ್ವಾತಂತ್ರ್ಯವನ್ನು ಸಾಧಿಸಲು ತಮ್ಮ ಪ್ರಾಣವನ್ನೇ ಪಣಕಿಟ್ಟರು. ಅವರಂತೆ ನಾವೂ ಕೂಡ ದೇಶದ ಪ್ರಗತಿಗೆ ಒತ್ತು ನೀಡುವುದಾಗಿ, ಪರಿಸರವನ್ನು ರಕ್ಷಿಸುವುದಾಗಿ, ಕಾನೂನನ್ನು ಗೌರವಿಸುವುದಾಗಿ, ನಮ್ಮ ಸಹ ನಾಗರಿಕರಿಗೆ ಸಹಾಯ ಮಾಡುವುದಾಗಿ ಮತ್ತು ದೇಶದ ಜನರಿಗೆ ಒಳ್ಳೆಯ ಕಾರ್ಯಗಳನ್ನು ಮಾಡುವುದಾಗಿ ಪ್ರತಿಜ್ಞೆ ಮಾಡೋಣ. ನಮ್ಮ ದೇಶವು ಮತ್ತಷ್ಟು ಎತ್ತರ ತಲುಪಲೆಂದು ಬಯಸೋಣ” ಎಂದು ಹಾರೈಸಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಗುಡಿ, ಮಸೀದಿ, ಚರ್ಚುಗಳ ಪ್ರಭಾವದಿಂದ ದೂರವಿರಬೇಕಾಗಿದೆ: ನ್ಯಾ. ಬಿ ಟಿ ವಿಶ್ವನಾಥ್

ಬೆಳ್ಳೂರಿನ ವಿಜಯಲಕ್ಷ್ಮಿ ಟ್ರಸ್ಟ್ ಸಂಸ್ಥಾಪಕಿ ವಿ ಜಯಲಕ್ಷ್ಮಿದೇವಿ ಮಕ್ಕಳಿಗೆ ನೋಟ್ ಪುಸ್ತಕಗಳನ್ನು ಹಾಗೂ ಬೆಳಮಾರನಹಳ್ಳಿ ಮಣಿಯವರು ಪರೀಕ್ಷಾ ಪ್ಯಾಡ್ ಮತ್ತು ಪೆನ್ನುಗಳನ್ನು ನೀಡಿದರು.

ಈ ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಜಿ ವಿ ಗೋಪಾಲಕೃಷ್ಣ, ಉಪಾಧ್ಯಕ್ಷ ಸಂಗೀತ, ಸದಸ್ಯರಾದ ಈಶ್ವರಚಾರಿ, ಶೈಲಜಾ, ಗೀತಾ, ಪುಷ್ಪಲತಾ ರಾಮೇಗೌಡ, ಶಂಕರ್, ಬೈರೇಗೌಡ, ದೇವನಹಳ್ಳಿಯ ಜೆ ಎಂ ಎಫ್ ಸಿ ನ್ಯಾಯಾಲಯದ ಎಫ್ ಡಿ ಎ ಪುಷ್ಪಲತಾ. ಪಿ, ಗ್ರಾಪಂ ಸದಸ್ಯ ವೆಂಕಟೇಶ ಗೌಡ, ಶಿಕ್ಷಕಿ ಎಸ್ ನಿರ್ಮಲ, ಅಡುಗೆ ಸಿಬ್ಬಂದಿಗಳಾದ ಮಮತಾ ಮತ್ತು ಸುಮಾ, ಅಂಗನವಾಡಿ ಶಿಕ್ಷಕಿ ಶಶಿಯಮ್ಮ, ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನ್ನೆ ಹೊಸಹಳ್ಳಿ ರಮೇಶ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...