ಕೋಲಾರ | ರಾಜಕಾಲುವೆಗೆ 90 ಕೋಟಿ ಅನುದಾನ; ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ನಗರಸಭೆ ಸದಸ್ಯ

Date:

ಕೋಲಾರದ ನಗರಸಭೆ ವ್ಯಾಪ್ತಿಯ ಅಂತರಗಂಗೆ ಬೆಟ್ಟದ ತಪ್ಪಲಿಂದ ಕೋಲಾರಮ್ಮ ರಾಜಕಾಲುವೆ ಅಭಿವೃದ್ಧಿಗೆ ಸಚಿವ ಸಂಪುಟದ ಸಭೆಯಲ್ಲಿ 90 ಕೋಟಿ ಮೀಸಲಿಟ್ಟ ರಾಜ್ಯ ಸರ್ಕಾರಕ್ಕೆ ನಗರಸಭೆ ಸದಸ್ಯ ಎನ್ ಅಂಬರೀಷ್ ಅಭಿನಂದನೆ ಸಲ್ಲಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಕೋಲಾರ ನಗರಕ್ಕೆ ವಿಶೇಷವಾಗಿ ಸುಮಾರು 30-40 ವರ್ಷಗಳಿಂದ ಮಳೆಯ ಅಬ್ಬರಕ್ಕೆ ಈ ಭಾಗದ ಹಲವು ಪ್ರದೇಶಗಳು ತತ್ತರಿಸಿದ್ದವು. ಈ ಪೈಕಿ ರಹಮತ್ ನಗರ, ರಾಜಾನಗರ, ಶಾಂತಿನಗರ, ನೂರು ನಗರ, ಮಿಲ್ಲತ್ ನಗರ ಸೇರಿದಂತೆ ಅನೇಕ ಏರಿಯಾಗಳು ಹೆಚ್ಚು ಮಳೆಹಾನಿಗೆ ತುತ್ತಾಗುತ್ತಿದ್ದವು. ಅಂತರಗಂಗೆಯ ತಪ್ಪಲಿನಿಂದ ಕೋಲಾರಮ್ಮನ ಕೆರೆಯವರಿಗೆ ರಾಜಕಾಲುವೆ ದುರಸ್ತಿಯಾಗದೆ ಇದ್ದದ್ದರಿಂದ ಮಳೆಬಂದು ನೀರು ಮನೆಗಳಿಗೆ ನುಗ್ಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿತ್ತು. ವಸತಿ ಸಚಿವ ಜಮೀರ್ ಅಹ್ಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕ ಕೊತ್ತೂರು ಮಂಜುನಾಥ್ ಎಂಎಲ್ಸಿ ಅನಿಲ್ ಕುಮಾರ್ ರವರು ಸರ್ಕಾರದ ಜೊತೆ ಮಾತುಕತೆ ನಡೆಸಿ ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಜಿಲ್ಲಾ ಉಸ್ತುವಾರಿ ಸಚಿವರ ಗಮನ ಸೆಳೆದು ಸುಮಾರು 90 ಕೋಟಿ ಬಿಡುಗಡೆ ಮಾಡಿಸಿದ್ದಾರೆ. ಸುಮಾರು 60,000 ಜನಸಂಖ್ಯೆ ಇರುವ ಈ ಭಾಗಕ್ಕೆ ಈ ಕಾಮಗಾರಿ ಅತ್ಯಂತ ಉಪಯುಕ್ತವಾದ ಕಾಮಗಾರಿ. ಈ ಭಾಗದಲ್ಲಿ ಶೇಕಡ 90ರಷ್ಟು ಸ್ಲಂ ಪ್ರದೇಶವಾಗಿದ್ದು ಮತ್ತು ಬಡವರು ವಾಸಿಸುತ್ತಿರುವ ಈ ಜಾಗಕ್ಕೆ ಮನ್ನಣೆ ನೀಡಿರುವುದಕ್ಕೆ ರಾಜ್ಯ ಸರ್ಕಾರಕ್ಕೆ ಅಭಿನಂದನೆಗಳು” ಎಂದು ಅಂಬರೀಷ್ ತಿಳಿಸಿದ್ದಾರೆ.

WhatsApp Image 2025 07 05 at 9.28.07 AM

ಇದನ್ನೂ ಓದಿ: ಕೋಲಾರ | ಕೋಮುಲ್ ಸರ್ಕಾರಿ ನಾಮ ನಿರ್ದೇಶಕರಾಗಿ ಯೂನುಸ್ ಶರೀಫ್ ನೇಮಕ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...