ಕೋಲಾರ ಕಾಂಗ್ರೆಸ್ ಗಲಾಟೆ | ಕೆಪಿಸಿಸಿ ಅಧ್ಯಕ್ಷರಿಗೆ ಮಾಹಿತಿ ನೀಡುವೆ : ಸಚಿವ ಕೆ ಎಚ್ ಮುನಿಯಪ್ಪ

Date:

“ಕೋಲಾರ ಕಾಂಗ್ರೆಸ್ ಗಲಾಟೆ ವಿಚಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಮಾಹಿತಿ ನೀಡುತ್ತೇನೆ” ಎಂದು ಸಚಿವ ಕೆ ಎಚ್ ಮುನಿಯಪ್ಪ ತಿಳಿಸಿದ್ದಾರೆ.

ಕೆಎಚ್ ಮುನಿಯಪ್ಪ ಬಣ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣದ ಮುಖಂಡರ ನಡುವೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಲಕ್ಷ್ಮಿನಾರಾಯಣ್ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣದ ಮುಖಂಡರು ಕೋಲಾರ ನಗರ ಹೊರವಲಯದ ನಂದಿನಿ ಪ್ಯಾಲೇಸ್‌ನಲ್ಲಿ ಸಭೆಯನ್ನು ನಡೆಸುತ್ತಿದ್ದ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ಗದ್ದಲ ಶುರುವಾಗಿ ಪರಸ್ಪರ ಕೈಕೈ ಮಿಲಾಯಿಸಿಕೊಂಡಿದ್ದರು.

ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೈವಾರ ಕ಼್ಷೇತ್ರಕ್ಕೆ ಭೇಟಿ ನೀಡಿದ ವೇಳೆ ಪ್ರತಿಕ್ರಿಯಿಸಿರುವ ಸಚಿವ ಕೆಚ್ ಮುನಿಯಪ್ಪ, “ಇದು ನಡೆಯಬಾರದಿತ್ತು, ತೀವ್ರವಾಗಿ ಖಂಡಿಸುತ್ತೇನೆ. ಈ ಘಟನೆಯ ಹಿಂದೆ ಯಾರು ಇದ್ದಾರೆ ಎಂಬುವುದು ನನಗೆ ಗೊತ್ತಿದೆ. ಈ ಕುರಿತು ನಾನು ಕಾಂಗ್ರೆಸ್ ಪ್ರದೇಶ ಸಮಿತಿಗೆ ದೂರು ನೀಡುತ್ತೇನೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚಿಕ್ಕ ವಿಷಯಗಳನ್ನು ದೊಡ್ಡದಾಗಿ ಮಾಡಿಕೊಳ್ಳಬಾರದಾಗಿತ್ತು.ಒ ಬ್ಬ ಅಧ್ಯಕ್ಷರ ಮೇಲೆ ಈ ರೀತಿ ಮಾಡಿರುವುದು ಖಂಡನೀಯ. ಅಧ್ಯಕ್ಷರಿಗೆ ಅಪಮಾನ ಮಾಡಿರುವುದು ಕಾಂಗ್ರೆಸ್ ಪ್ರದೇಶ ಸಮಿತಿಗೆ ಅಪಮಾನ ಮಾಡಿದಂತಾಗುತ್ತದೆ. ನಿಜವಾದ ಕಾಂಗ್ರೆಸ್‌ನವರು ಆಗಿದ್ದಿದ್ದರೆ ಈ ರೀತಿಯಲ್ಲಿ ಮಾಡುತ್ತಿರಲಿಲ್ಲ. ಈ ಘಟನೆಯಿಂದ ನನಗೆ ಸಾಕಷ್ಟು ನೋವಾಗಿದೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಕೋಲಾರ ಜಿಲ್ಲಾ ಕಾಂಗ್ರೆಸ್‌ ಸಭೆಯಲ್ಲಿ ಗಲಾಟೆ, ಕೈ ಕೈ ಮಿಲಾಯಿಸಿದ ಮುಖಂಡರು

“ಇನ್ನೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಮೇಲೆ ಈ ರೀತಿ ಮಾಡಿರುವುದು ರಾಜ್ಯದ ಗಮನ ಸೆಳೆದಿದೆ. ಈ ರೀತಿ ಮಾಡಿರುವುದು ಇದಕ್ಕೆ ಪ್ರೋತ್ಸಾಹ ಮಾಡಿರುವುದು ಸರಿಯಲ್ಲ. ದೊಡ್ಡ ಪಕ್ಷದಲ್ಲಿ ಭಿನ್ನಾಭಿಪ್ರಾಯ ಬರುವುದು ಸಹಜ. ಅದನ್ನು ಕುಳಿತು ಬಗೆಹರಿಸಿಕೊಳ್ಳಬೇಕು. ಆದರೆ ಈ ಮಟ್ಕ್ಕೆ ಅಧ್ಯಕ್ಷರ ಮೇಲೆ ಕೈ ಮಾಡಿದಿರುವುದು ಖಂಡನೀಯ. ಇದರಲ್ಲಿ ಯಾರ ಪಾತ್ರ ಇದೆ ಎಂಬುದು ನನಗೆ ಗೊತ್ತಿದೆ. ಅವರ ಮೇಲೆ ಕ್ರಮ ಕೈಗೊಳ್ಳುವ ಬಗ್ಗೆ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರ ಗಮನಕ್ಕೆ ಮುಟ್ಟಿಸುತ್ತೇನೆ” ಎಂದು ಸಚಿವ ಕೆ ಎಚ್ ಮುನಿಯಪ್ಪ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...