ಕೋಲಾರ | ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕು, ರಾಜ್ಯದ ಅಸ್ಮಿತೆ ಉಳಿಸಬೇಕು: ಇಂದೂಧರ ಹೊನ್ನಾಪುರ

Date:

ದಲ್ಲಾಳಿ ರಾಜಕಾರಣಿಗಳು,‌ ಲೂಟಿಕೋರ ಉದ್ಯಮಿಗಳು ಹಾಗೂ ಪುರೋಹಿತಶಾಹಿ ವರ್ಗ ‌ದೇಶ‌ ಆಳುತ್ತಿವೆ. ಈ ಮೂವರ ದುಷ್ಟ ಕೂಟವನ್ನು ಕೆಳಗಿಳಿಸಬೇಕು. ಹಾಗಾಗಿ, ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಈ ಮೂಲಕ ರಾಜ್ಯದ ಅಸ್ಮಿತೆ ಉಳಿಸಬೇಕು ಎಂದು‌ ರಾಜ್ಯ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲ‌ನಾ ಸಮಿತಿ ಸಂಯೋಜಕ ಇಂದೂಧರ ಹೊನ್ನಾಪುರ ಹೇಳಿದರು.

ಕೋಲಾರ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಇಂದಿರಾ ಗಾಂಧಿ ಅವರಿಗಿಂತ ತೀವ್ರವಾದ ಅಘೋಷಿತ ತುರ್ತು ಪರಿಸ್ಥಿತಿಯನ್ನು ಬಿಜೆಪಿ ದೇಶದ ಮೇಲೆ ಹೇರಿದೆ. ಪ್ರಭುತ್ವವನ್ನು ಪ್ರಶ್ನಿಸಿದವರ ವಿರುದ್ಧ ಪ್ರಕರಣ ದಾಖಲಿಸುತ್ತಿದೆ. ಪತ್ರಕರ್ತರು, ಹೋರಾಟಗಾರರ ಹಕ್ಕುಗಳನ್ನು ಹತ್ತಿಕ್ಕಲಾಗುತ್ತಿದೆ. ಕರಾಳ ಬಿಜೆಪಿ ಅಧ್ಯಾಯ ಕೊನೆಗೊಳ್ಳಬೇಕು. ಹೀಗಾಗಿ, ‌ಬಿಜೆಪಿ ಸೋಲಬೇಕು” ಎಂದರು.

“ದಲ್ಲಾಳಿಗಳು ದೇಶವನ್ನು ಆಳುತ್ತಿದ್ದಾರೆ. ದ್ವೇಷ ಬಿತ್ತಿ ಮನಸ್ಸುಗಳನ್ನು ಒಡೆಯುತ್ತಿದ್ದಾರೆ. ಹಿಂದೆ‌ ಮುತ್ಸದ್ಧಿ ರಾಜಕಾರಣಿಗಳು ಜನರ ಸಮಸ್ಯೆ ಅರಿತು ದೇಶ‌ ಆಳುತ್ತಿದ್ದರು. ಈಗ ಆಂತರಿಕ ‌ಸಂಘರ್ಷ‌ ಹುಟ್ಟು ಹಾಕಿ ದೇಶ ಆಳುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.   ‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜೆಡಿಎಸ್‌ ಈಗ ಜಾತ್ಯತೀತ‌ ಪಕ್ಷವಾಗಿ ಉಳಿದಿಲ್ಲ. ‌ಹೀಗಾಗಿ, ಅವರಿಗೆ ‌ನಮ್ಮ ಬೆಂಬಲ‌‌ ಇಲ್ಲ. ಕಾಂಗ್ರೆಸ್ ನಮಗೆ ಪರ್ಯಾಯ ಹಾಗೂ ಅನಿವಾರ್ಯ ಅಲ್ಲ. ದಲಿತ ‌ಚಳವಳಿಯು ರಾಜಕಾರಣದಲ್ಲಿ ತೊಡುಗುವುದಿಲ್ಲ. ಆದರೆ, ಕೋಮುವಾದಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಪ್ಪಿಸಲು ಕಾಂಗ್ರೆಸ್‌ಗೆ ಷರತ್ತುಬದ್ಧ ಬೆಂಬಲ ನೀಡುತ್ತಿದ್ದೇವೆ” ಎಂದು ತಿಳಿಸಿದರು.

ರಾಜ್ಯ ಸಂಯೋಜಕ ಎನ್.ಮುನಿಸ್ವಾಮಿ ಮಾತನಾಡಿ, “ಬಂಡವಾಳ ಶಾಹಿಗಳ ಪರ ವಹಿಸಿ ಅವರ ಬಗ್ಗೆ ಪ್ರತಿಪಾದನೆ ಮಾಡುವ ಬಿಜೆಪಿಯನ್ನು ಸೋಲಿಸಬೇಕು. ಜನದ್ರೋಹಿ ಆರ್‌ಎಸ್‌ಎಸ್‌–ಬಿಜೆಪಿಯನ್ನು ಹಿಮ್ಮೆಟ್ಟಿಸಲು ಕಾಂಗ್ರೆಸ್‌ಗೆ ಷರತ್ತುಬದ್ಧ ಬೆಂಬಲ ಘೋಷಿಸಿದ್ದೇವೆ. ಕಾರಣ ಬಿಜೆಪಿ ಸಂಸದರೇ ಸಂವಿಧಾನ ಸರಿ ಇಲ್ಲ ಎಂಬ ಮಾತು ಹೇಳುತ್ತಿದ್ದಾರೆ.‌ ಬದಲಾಯಿಸುತ್ತೇವೆ ಎಂಬುದಾಗಿ ಹೇಳಿದರೂ ಅದು ತಪ್ಪು ಎಂದು ಮೇಲಿನ ಸ್ಥಾನದಲ್ಲಿ ಕುಳಿತವರು ಹೇಳುತ್ತಿಲ್ಲ. ಪ್ರಜಾಪ್ರಭುತ್ವದ ಹಾಗೂ ಸಂವಿಧಾನದ ಮೇಲೆ ಅವರಿಗೆ ನಂಬಿಕೆನೇ ಇಲ್ಲ” ಎಂದರು.

“ಆರ್‌ಎಸ್‌ಎಸ್‌ಗೆ ಬೇಕಾದ ನೀತಿ ರೂಪಿಸುತ್ತಿದ್ದಾರೆಯೇ ಹೊರತು ಜನರಿಗೆ ಬೇಕಾದ ನೀತಿ ಅಲ್ಲ. ರಾಜ್ಯ ಬಿಜೆಪಿ ಸರ್ಕಾರ ದಲಿತ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ನಿಲ್ಲಿಸಿದೆ. ಸಮುದಾಯದ ಅನುದಾನ ಕಡಿತ ಮಾಡಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ; ಭಜರಂಗದಳ ನಿಷೇಧಕ್ಕೆ ಕ್ರಮ

“ಜೆಡಿಎಸ್‌ಗೆ ಸಂಖ್ಯೆಬಲ ಇಲ್ಲ. ವರುಣಾದಲ್ಲಿ ಆ ಪಕ್ಷದಿಂದ ಸಿದ್ದರಾಮಯ್ಯ ವಿರುದ್ಧ ದಲಿತ ಅಭ್ಯರ್ಥಿ ನಿಲ್ಲಿಸಿ ಮತ ವಿಭಜನೆ ಮಾಡಲಾಗುತ್ತಿದೆ. ಹೀಗಾಗಿ, ‌ಅವರಿಗೆ ಬೆಂಬಲಿಸಲ್ಲ. ಕಾಂಗ್ರೆಸ್‌ಗೆ ಸಂವಿಧಾನದ‌ ಮೇಲೆ ‌ನಂಬಿಕೆ ಇದೆ. ಹಾಗಾಗಿ, ಅವರಿಗೆ ಬೆಂಬಲ ನೀಡುತ್ತೇವೆ” ಎಂದರು.

ಚಾಲನಾ ಸಮಿತಿಯ ರಾಜ್ಯ ಸಂಯೋಜಕ ಎನ್‌.ವೆಂಕಟೇಶ್, ರಾಜ್ಯ ಸಂಯೋಜಕ ಗುರುಪ್ರಸಾದ್ ಕೆರಗೋಡು, ಮಾವಳ್ಳಿ ಶಂಕರ್‌, ವಿ.ನಾಗರಾಜ್‌,  ಅಣ್ಣಯ್ಯ, ಜಿಗಣಿ ಶಂಕರ್‌, ವಿ. ನಾರಾಯಣಸ್ವಾಮಿ, ಬಿ.ಶ್ರೀರಂಗ, ದಸಂಸ ಜಿಲ್ಲಾ ಸಂಚಾಲಕ ಹಾರೋಹಳ್ಳಿ ರವಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...