ಕೋಲಾರ | ವೆರ್ಗಾ ಕಂಪೆನಿ ಮುಚ್ಚದಂತೆ ಸಿಪಿಐಎಂ ಪ್ರತಿಭಟನೆ

Date:

ಕೋಲಾರ ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದಲ್ಲಿರುವ ವೆರ್ಗಾ ಅಟಾಚ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ, ನಷ್ಟವೆಂದು ತೋರಿಸಿದ್ದು, ಅನಧಿಕೃತವಾಗಿ ಮುಚ್ಚಿರುವುದನ್ನು ತೆರವುಗೊಳಿಸಿ ಕೈಗಾರಿಕೆಯನ್ನು ಮತ್ತೆ ಪುನರಾರಂಭಿಸಬೇಕು ಎಂದು ಒತ್ತಾಯಿಸಿ ಸಿಪಿಐ(ಎಂ) ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.

ಮಾಲೂರು ನಗರದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಳಿಕ ಸಿಪಿಐಎಂ ತಾಲೂಕು ಕಾರ್ಯದರ್ಶಿ ಟಿ ಎಂ ವೆಂಕಟೇಶ್ ಮಾತನಾಡಿ, “ಸುಮಾರು 2006ರಲ್ಲಿ ಒಂದು ಸಣ್ಣ ಶೆಡ್‌ನಲ್ಲಿ ಆರಂಭವಾದ ವೆರ್ಗಾ ಕಂಪೆನಿಯು 2019ರಲ್ಲಿ ಜಿಲ್ಲೆಯಲ್ಲಿಯೇ ಅತಿಹೆಚ್ಚು ವಿದೇಶಕ್ಕೆ ರಪ್ತು ಮಾಡಿದ ಲಾಭದಾಯಕ ಕಂಪನಿ ಎಂಬ ಹೆಗ್ಗಳಿಕೆಯನ್ನು ಪಡೆದಿದೆ. ಈ ಕೈಗಾರಿಕೆಯು ಬುಲ್ಡೋಜರ್ ಬಕೆಟ್‌ಗೆ ಬೇಕಾಗುವ ಎಕ್ಸ್ ಕವೇಟರ್ ಬಕೆಟ್ಸ್, ರಿಫ್ ಮತ್ತು ಕಪ್ಲರ್ಸ್ 200ರಿಂದ 1800 ವಿವಿಧ ಸಾಮಗ್ರಿಗಳನ್ನು ತಯಾರಿ ಮಾಡಿ, ಸುಮಾರು 58 ದೇಶಗಳಿಗೆ ರಪ್ತು ಮಾಡುತ್ತಿದ್ದು, ಲಾಭದಾಯಕವಾಗಿ ನಡೆಯುತ್ತಿರುವ ಕೈಗಾರಿಕೆಯಾಗಿದೆ. ಈ ಕೈಗಾರಿಕೆಯಿಂದ ಬಂದ ಲಾಭದಿಂದ 2018-19ರಲ್ಲಿ ವೆರ್ಗಾ 2, ವೆರ್ಗಾ 3ನೇ ಘಟಕಗಳನ್ನು ಮಾಲೂರು ಕೈಗಾರಿಕಾ ಪ್ರದೇಶದ 2ನೇ ಹಂತದಲ್ಲಿ ಆರಂಭಿಸಿದ್ದರು. 2023ರಲ್ಲಿ ವೆರ್ಗಾ 2 ಮತ್ತು ವೆರ್ಗಾ 3 ಘಟಕದ ಹೆಸರುಗಳನ್ನು ವೀರ್ಯ 1 ಮತ್ತು ವೀರ್ಯ 2 ಎಂದು ಹೆಸರು ಬದಲಾವಣೆ ಮಾಡಿದರು. ವೆರ್ಗಾ 1 ಘಟಕದಲ್ಲಿ 2019ರ ವೇಳೆ ದುಡಿಯುತ್ತಿದ್ದ 182 ಕಾರ್ಮಿಕರಿಗೆ ಹಲವು ಆಸೆ ಆಮಿಷಗಳನ್ನು ನೀಡಿ ಹಂತಹಂತವಾಗಿ ಕಡಿಮೆ ಮಾಡಿಕೊಂಡಿದ್ದಾರೆ” ಎಂದು ಆರೋಪಿಸಿದರು.

“ವೆರ್ಗಾ ಕಂಪನಿಯಲ್ಲಿ ಪ್ರಸ್ತುತ ದುಡಿಯುತ್ತಿರುವ 81 ಖಾಯಂ ಕಾರ್ಮಿಕರನ್ನು ಮನೆಗೆ ಕಳುಹಿಸಿ ಗುತ್ತಿಗೆ ಕಾರ್ಮಿಕರಿಗೆ ಕಡಿಮೆ ವೇತನವನ್ನು ನೀಡಿ ಕೆಲಸ ಮಾಡಿಸಿಕೊಳ್ಳುವ ದುರುದ್ದೇಶದಿಂದ ಲಾಭದಾಯಕವಾಗಿರುವ ಕೈಗಾರಿಕೆಯನ್ನು ನಷ್ಟವೆಂದು ತೋರಿಸುತ್ತಿರುವುದು ಸ್ಪಷ್ಠವಾಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಐಎಂ ಜಿಲ್ಲಾ ಸಮಿತಿ ಸದಸ್ಯ ವಿಜಯಕೃಷ್ಣ ಮಾತನಾಡಿ, “ಆಡಳಿತ ಮಂಡಳಿಯು ಸಮಸ್ಯೆಯನ್ನು ಸೌಹಾರ್ಧಯುತವಾಗಿ ಬಗೆಹರಿಸಿಕೊಳ್ಳಲು ಮುಂದಾಗದೇ ಇರುವುದು ಸರಿಯಲ್ಲ. ಕಳೆದ 10 ದಿನಗಳಿಂದ ಸರದಿ ಉಪವಾಸ ಸತ್ಯಾಗ್ರಹವನ್ನು ಅಲ್ಲಿನ ಕಾರ್ಮಿಕರು ನಡೆಸುತ್ತಿದ್ದರೂ ಜಿಲ್ಲಾಡಳಿತ ಮತ್ತು ಜಿಲ್ಲೆಯ ಜನಪ್ರತಿನಿಧಿಗಳು ಈ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನ ನಡೆಸದೇ ಇರುವುದು ಸರಿಯಲ್ಲ. ತಕ್ಷಣ ಮಧ್ಯ ಪ್ರವೇಶ ಮಾಡಿ, ಸಮಸ್ಯೆಯನ್ನು ಇತ್ಯರ್ಥ ಮಾಡಬೇಕು” ಎಂದು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಯನ್ನು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಸರ್ಕಾರಿ ನೌಕರರು ತಮ್ಮ ಹುದ್ದೆಯ ಪಾವಿತ್ರ್ಯತೆಯನ್ನು ಕಾಪಾಡಬೇಕು: ಷಡಕ್ಷರಿ

ಪ್ರತಿಭಟನೆಯ ನೇತೃತ್ವವನ್ನು ಸಿಪಿಐ(ಎಂ) ತಾಲೂಕು ಮುಖಂಡರಾದ ಎಂ ಭೀಮರಾಜ್, ಎನ್ ಎನ್ ಶ್ರೀರಾಮ್, ಎಸ್ ಆಶಾ, ವಿ ನಾರಾಯಣರೆಡ್ಡಿ, ಗಂಗಟ್ಟ ಯಲ್ಲಪ್ಪ, ಕೆ ವಿ ಮಂಜುನಾಥ್, ಚಿನ್ನಮ್ಮ, ಡಿ ಎಸ್ ವೆಂಕಟರವಣ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...