ಕೋಲಾರ | ತಂದೆಯಿಂದಲೇ ಮಗಳ ಮರ್ಯಾದೆಗೇಡು ಹತ್ಯೆ; ಆರೋಪಿ ಬಂಧನ

Date:

ಪರಿಶಿಷ್ಟ ಪಂಗಡದ ಯುವಕನನ್ನು ಪ್ರೀತಿಸಿದಳು ಎಂಬ ಕಾರಣಕ್ಕೆ ತನ್ನ ತಂದೆಯೇ ಮಗಳನ್ನು ಮರ್ಯಾದೆಗೇಡು ಹತ್ಯೆ ಮಾಡಿ, ಸಮಾಧಿ ಮಾಡಿರುವ ಆಘಾತಕಾರಿ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

ಕೋಲಾರ ತಾಲೂಕಿನ ತೊಟ್ಲಿ ಗ್ರಾಮದಲ್ಲಿ ಮಾರ್ಯಾದೆಗೇಡು ಹತ್ಯೆ ನಡೆದಿದ್ದು, ಬಳಿಕ ಯಾರಿಗೂ ಗೊತ್ತಾಗದಂತೆ ಸಮಾಧಿಯನ್ನೂ ಮಾಡಿದ್ದಾರೆ. ಈ ವಿಚಾರ ಪೊಲೀಸ್‌ ಕಿವಿಗೆ ಬಿದ್ದಿದ್ದರಿಂದ ಜಾತಿರೋಗಪೀಡಿತ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.

ರಮ್ಯಾ (19) ಎಂಬ ಯುವತಿ ಹತ್ಯೆಗೆ ಒಳಗಾಗಿದ್ದು, ತಂದೆ ವೆಂಕಟೇಶಗೌಡ ಕೊಲೆ ಆರೋಪಿಯಾಗಿದ್ದಾನೆ. ನರಸಾಪುರ ಖಾಸಗಿ ಕಂಪನಿಗೆ ಕೆಲಸಕ್ಕೆ ಹೋಗುವಾಗ ಆಕೆಗೆ ಪರಿಶಿಷ್ಟ ಪಂಗಡದ ಹುಡುಗನೊಂದಿಗೆ ಪ್ರೀತಿಯಾಗಿದೆ. ಈ ಪ್ರೀತಿ ಹಲವು ದಿನ ಮುಂದುವರೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರಿಶಿಷ್ಟ ಪಂಗಡದ ಯುವಕನನ್ನು ಮಗಳು ಪ್ರೀತಿಸಿದ ವಿಷಯ ತಂದೆಗೆ ಗೊತ್ತಾಗಿದೆ. ಈ ಕಾರಣಕ್ಕೆ ತಂದೆ ಮಗಳು ರಮ್ಯಾಳನ್ನು ಕರೆದು ‘ಬುದ್ಧಿ’ ಹೇಳಿದ್ದಾನೆ. ಆದರೆ, ಆಕೆ ತಂದೆಯ ಮಾತನ್ನು ಕಿವಿಗೆ ಹಾಕಿಕೊಳ್ಳದೆ ತನ್ನ ಪ್ರೀತಿಯನ್ನು ಮುಂದುವರಿಸಿದ್ದಾಳೆ.

ಮಗಳ ವಿಚಾರಕ್ಕೆ ಆಕ್ರೋಶಗೊಂಡಿದ್ದ ಪೋಷಕರು ಆಗಸ್ಟ್‌ 25ರಂದು ಮಗಳನ್ನು ಕೊಂದಿದ್ದು, ಎಲ್ಲರೂ ಸೇರಿ ಆಕೆಯ ಅಂತ್ಯಸಂಸ್ಕಾರವನ್ನೂ ಮಾಡಿ ಮುಗಿಸಿದ್ದಾರೆ. ಈ ವಿಚಾರ ಊರಿನ ಕೆಲವರಿಗೆ ಗೊತ್ತಾಗಿ ಗುಸು ಗುಸು ಪ್ರಾರಂಭವಾದ ಬಳಿಕ ಪೊಲೀಸರ ಬಳಿಗೆ ದೂರು ಹೋಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ರಮ್ಯಾಳ ತಂದೆ ವೆಂಕಟೇಶಗೌಡನನ್ನು ಕರೆದು ವಿಚಾರಣೆಗೊಳಪಡಿಸಿದ್ದಾರೆ. ಬಳಿಕ ವಿಷಯ ಬೆಳಕಿಗೆ ಬಂದಿದೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಮನೆ ಎದುರು ಗಲಾಟೆ ಮಾಡಬೇಡಿ ಎಂದಿದ್ದಕ್ಕೆ ತಂದೆ, ಮಗನಿಗೆ ಹಲ್ಲೆ; ಉದ್ವಿಗ್ನ ಪರಿಸ್ಥಿತಿ

ಭಾನುವಾರ (ಆಗಸ್ಟ್‌ 27) ಬೆಳಿಗ್ಗೆ ಕೋಲಾರ ತಹಶೀಲ್ದಾರ್ ಹರ್ಷವರ್ಧನ್ ನೇತೃತ್ವದಲ್ಲಿ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಯುವತಿಯ ತಂದೆ ವೆಂಕಟೇಶಗೌಡ, ಮೋಹನ್ ಮತ್ತು ಚೌಡೇಗೌಡ ಎಂಬುವವರನ್ನು ಕೋಲಾರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಿನ.ಕಾಮ್‌ ಕೋಲಾರ ಎಸ್‌ಪಿ ಹಾಗೂ ತಹಶೀಲ್ದಾರ್‌ ಅವರನ್ನು ಸಂಪರ್ಕಿಸಿದೆ. ಆದರೆ, ಅವರು ಕರೆಗೆ ಲಭ್ಯವಾಗಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...