ಕೋಲಾರ | ಜು. 19, 20ರಂದು ಜಿಲ್ಲಾಮಟ್ಟದ ಸಂವಿಧಾನ ಓದು ಅಧ್ಯಯನ ಶಿಬಿರ

Date:

ಸಂವಿಧಾನ ಓದು ಅಭಿಯಾನ- ಕರ್ನಾಟಕ ಮತ್ತು ಕೋಲಾರ ಜಿಲ್ಲೆಯ ಸಮಾನ ಮನಸ್ಕ ಸಂಘಟನೆಗಳು ಜಂಟಿಯಾಗಿ ಕೋಲಾರ ಜಿಲ್ಲಾಮಟ್ಟದ ಸಂವಿಧಾನ ಓದು ಅಧ್ಯಯನ ಶಿಬಿರವನ್ನು ಆಯೋಜಿಸಿದ್ದು, ಜುಲೈ 19, 20ರ ಶನಿವಾರ ಮತ್ತು ಭಾನುವಾರ ಎರಡು ದಿನ ನಗರದ ಇಟಿಸಿಎಂ ಸರ್ಕಲ್ ಪಕ್ಕದಲ್ಲಿರುವ ಸುವರ್ಣ ಕನ್ನಡ ಭವನದಲ್ಲಿ ನಡೆಯಲಿದೆ ಎಂದು ಸಂವಿಧಾನ ಓದು ಅಭಿಯಾನ-ಕರ್ನಾಟಕ ರಾಜ್ಯ ಕೇಂದ್ರ ಸಂಯೋಜಕ ಬಿ ರಾಜಶೇಖರಮೂರ್ತಿ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಶಿಬಿರವನ್ನು ನಿವೃತ್ತ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನದಾಸ್ ಉದ್ಘಾಟಿಸಲಿದ್ದಾರೆ. ಕೋಲಾರ ಜಿಲ್ಲಾಧಿಕಾರಿ ಡಾ. ಎಂ ಆರ್ ರವಿ, ಜಿಪಂ ಸಿಇಒ ಡಾ. ಪ್ರವೀಣ್, ಪಿ ಬಾಗೇವಾಡಿ, ಎಸ್‌ಪಿ ನಿಖಿಲ್, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ ಎ ಮಂಜುನಾಥ, ಸಾಹಿತಿ ಡಾ.ಚಂದ್ರಶೇಖರ ನಂಗಲಿ, ರೈತ ಮುಖಂಡ ಪಿ ಆರ್ ಸೂರ್ಯನಾರಾಯಣ, ಶಾಂತಿ ಪ್ರಕಾಶನದ ಮುಬಾರಕ್ ಬಗ್ಗಾನ್, ಹಿರಿಯ ದಲಿತ ಮುಖಂಡ ಟಿ ವಿಜಯಕುಮಾರ್, ವಕೀಲ ಸತೀಶ್ ಕಾರ್ಯಕ್ರಮದಲ್ಲಿ ಭಾಗವಹಿಸುವರು” ಎಂದು ಹೇಳಿದರು.

“ಎರಡು ದಿನಗಳ ಕಾಲ ನಡೆಯಲಿರುವ ಸಂವಿಧಾನ ಓದು ಅಧ್ಯಯನ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮೊದಲನೆಯ ದಿನ ಸಂವಿಧಾನದ ರಚನೆ ಮತ್ತು ಮೂಲತತ್ವಗಳ ಕುಂತು ನಿವೃತ್ತ ನ್ಯಾಯಮೂರ್ತಿ ಎಚ್‌ ಎನ್ ನಾಗಮೋಹನದಾಸ್, ಸಂವಿಧಾನ ಮತ್ತು ಮಹಿಳೆ ಶಾಂತಿ ನಾಗಲಾಪುರ, ಸಂವಿಧಾನ ಮತ್ತು ಅಸ್ಪೃಶ್ಯತೆ: ನಿರ್ಮೂಲನೆ-ಡಾ. ಅರಿವು ಶಿವಪ್ಪ, ಎರಡನೇ ದಿನ ಸಂವಿಧಾನ ಮತ್ತು ಸಾಮಾಜಿಕ ನ್ಯಾಯ ಬಿ. ರಾಜಶೇಖರಮೂರ್ತಿ, ಸಂವಿಧಾನ ಮತ್ತು ಜಾತ್ಯತೀತತೆ – ಆರ್ ರಾಮಕೃಷ್ಣ ಗೋಷ್ಠಿ ನಡೆಸಿಕೊಡಲಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಪಟೇಲ್ ನಗರದ ಹತ್ತಿರ ಕಾಳಿ‌ ನದಿಯಲ್ಲಿ ಜಿಂಕೆಯನ್ನು ಎಳೆದೊಯ್ದ ಮೊಸಳೆ

ಪ್ರಶಸ್ತಿ ಪತ್ರ ವಿತರಣಾ ಕಾರ್ಯಕ್ರಮ : 2ನೇ ದಿನ ಮಧ್ಯಾಹ್ನ 1-30ಕ್ಕೆ ಸಮಾರೋಪ ಮತ್ತು ಪ್ರಶಸ್ತಿ ಪತ್ರ ವಿತರಣೆ ಕಾರ್ಯಕ್ರಮ ನಡೆಯಲಿದೆ. ಸಮಾರೋಪ ಸಮಾರಂಭದ ಅತಿಥಿಗಳಾಗಿ ಹಿರಿಯ ದಲಿತ ಮುಖಂಡ ಪಂಡಿತ್ ಮುನಿವೆಂಕಟಪ್ಪ, ಕಸಾಪ ನಿಕಟಪೂರ್ವ ಜಿಲ್ಲಾಧ್ಯಕ್ಷ ನಾಗಾನಂದ ಕೆಂಪರಾಜ್, ಶಾಂತಮ್ಮ ಗಮನ, ರೈತ ಮುಖಂಡ ಅಜ್ಜಣಿ ಶಿವಪ್ಪ, ಬೆಳಕು ಸಂಸ್ಥೆಯ ರಾಧಾಮಣಿ, ಯುವ ಮುಖಂಡ ಆರಿಫ್ ಉಲ್ಲಾ ಖಾನ್ ಭಾಗವಹಿಸಲಿದ್ದಾರೆ.

ಸಂಯೋಜಕ ಎಚ್‌ ಎನ್ ಹರಿ, ಮುಖಂಡ ವಾರಿಧಿ ಮಂಜುನಾಥ ರೆಡ್ಡಿ, ಟಿ. ವಿಜಯಕುಮಾರ್, ಪಂಡಿತ್ ಮುನಿವೆಂಕಟಪ್ಪ, ಗಮನ ಶಾಂತಮ್ಮ, ವಕೀಲ ಎಸ್‌ ಸತೀಶ್, ಆರಿಫ್ ಉಲ್ಲಾ ಖಾನ್, ಶ್ರೀನಿವಾಸ್‌ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...