ಕೋಲಾರ | ಬಾಲಕನ ಮೇಲೆ ನಾಯಿಗಳ ದಾಳಿ; ಪ್ರಾಣಾಪಾಯದಿಂದ ಬಾಲಕ ಪಾರು

Date:

ಕೋಲಾರದ ರಹಮತ್‌ ನಗರದಲ್ಲಿ ಗುರುವಾರ ರಾತ್ರಿ ಬೀದಿನಾಯಿಗಳು ಬಾಲಕನನ್ನು ಅಟ್ಟಾಡಿಸಿ ಗಾಯಗೊಳಿಸಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬಾಲಕನಿಗೆ ತೀವ್ರ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.

ರಹಮತ್‌ ನಗರದ ಬಾಬು ಎಂಬುವರ ಪುತ್ರ ಜಾಫರ್‌(9)ನನ್ನು ಪೊಲೀಸರು ರಕ್ಷಿಸಿ ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಕುತ್ತಿಗೆ, ಕಿವಿ, ಎದೆ, ಬೆನ್ನು ಹಾಗೂ ತೊಡೆಗೆ ತೀವ್ರ ಗಾಯವಾಗಿದ್ದು, ಬಾಲಕ ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

“ಗುರುವಾರ ರಾತ್ರಿ ಐದಾರು ನಾಯಿಗಳು ಬಾಲಕನ ಮೇಲೆ ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ 112 ವಾಹನದಲ್ಲಿ ಗಸ್ತಿನಲ್ಲಿದ್ದ ಕಾನ್‌ಸ್ಪೆಬಲ್‌ ಎಚ್‌.ರಾಜಣ್ಣ ನಾಯಿಗಳನ್ನು ಓಡಿಸಿ ಮಗುವನ್ನು ಜಿಲ್ಲಾಸ್ಪತ್ರೆಗೆ ಸೇರಿದ್ದಾರೆ. ಬಾಲಕ ಅಪಾಯದಿಂದ ಪಾರಾಗಿದ್ದಾನೆ” ಎಂದು ಗಲ್‌ಪೇಟೆ ಪಿಎಸ್‌ಐ ಅರುಣ್‌ ಗೌಡ ಪಾಟೀಲ್‌ ತಿಳಿಸಿದ್ದಾರೆ. ಕಾನ್‌ಸ್ಟೆಬಲ್‌ ರಾಜಣ್ಣ ಹಾಗೂ ವಾಹನದ ಚಾಲಕ ಡಿಎಆರ್‌ನ ಮಂಜುನಾಥ್‌ ಶೆಟ್ಟಿ ಅವರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾತ್ರಿ ವಾಹನದಲ್ಲಿ ಶ್ರೀನಿವಾಸಪುರ ವೃತ್ತದಿಂದ ಅರಹಳ್ಳಿ ಕಡೆ ಗಸ್ತು ತಿರುಗುವಾಗ ಕಿರುಚಿದ ಶಬ್ದ ಬಂತು. ಅದೇ ರಸ್ತೆಯಲ್ಲಿ ಮುಂದೆ ಹೋಗಿದ್ದೆವು. ಶಬ್ದ ಏನಿರಬಹುದೆಂದು ಕುತೂಹಲದಿಂದ ಹಿಂತಿರುಗಿ ಬಂದೆವು” ಎಂದು ಕಾನ್‌ಸ್ಟೆಬಲ್‌ ರಾಜಣ್ಣ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಆನೆ ‘ಸುವರ್ಣ’ಗೆ ಸಿಸೇರಿಯನ್‌ ಹೆರಿಗೆ; ಗರ್ಭದಲ್ಲೇ ಮೃತಪಟ್ಟಿದ್ದ ಮರಿ

“ನಾಯಿಗಳು ಬಾಲಕನ ಬಟ್ಟೆ ಹರಿದು ಹಾಕಿದ್ದವು. ಕುತ್ತಿಗೆಯಿಂದ ರಕ್ತ ಬರುತಿತ್ತು. ತಕ್ಷಣವೇ ಆತನನ್ನು ಜಿಲ್ಲಾಸ್ಪತ್ರೆಗೆ ಸೇರಿಸಿದೆವು. ಬಳಿಕ ರಾತ್ರಿ ಕರ್ತವ್ಯದಲ್ಲಿದ್ದ ಡಾ.ಕೆ.ಎಂ ವರ್ಣಶ್ರೀ ಬಾಲಕನಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದರು. ಶುಕ್ರವಾರ ಬೆಳಿಗ್ಗೆ ಬಾಲಕನಿಗೆ ಪ್ರಜ್ಞೆ ಬಂದಿದೆ. ತಂದೆ ಹೆಸರು, ಮನೆ ವಿಳಾಸ, ಮೊಬೈಲ್‌ ಸಂಖ್ಯೆ ನೀಡಿದ್ದಾನೆ” ಎಂದು ರಾಜಣ್ಣ ತಿಳಿಸಿದರು.

ಬಾಲಕ ರಕ್ಷಣೆ ವೇಳೆ ಕಾನ್‌ಸ್ಟೆಬಲ್‌ ರಾಜಣ್ಣ ಅವರ ಮೇಲೂ ನಾಯಿಗಳು ದಾಳಿ ನಡೆಸಿವೆ. ಲಾಟಿ ಹಾಗೂ ಕಲ್ಲಿನ ಸಹಾಯದಿಂದ ಬೀದಿನಾಯಿಗಳನ್ನು ಓಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...