ಕೋಲಾರ | ದಸಂಸ ತಾಲೂಕು ಪದಾಧಿಕಾರಿಗಳ ಆಯ್ಕೆ

Date:

ಯುವಕರನ್ನು ಹಂತ ಹಂತವಾಗಿ ಸಂಘಟಿಸುವ ನಿಟ್ಟಿನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೋಲಾರ ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

ತಾಲೂಕಿನ ವೇಮಗಲ್ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ತಾಲೂಕು ಮಟ್ಟದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಸಂಘಟನಾ ಸಂಚಾಲಕ ಸುಧಾಕರ್, “ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ತೋರಿರುವ ಮಾರ್ಗದರ್ಶನದಲ್ಲಿ ನಡೆಯುವ ಕರ್ತವ್ಯ ಪದಾಧಿಕಾರಿಗಳು ಮಾಡಬೇಕು. ದಲಿತ, ಹಿಂದುಳಿದ, ಅಲ್ಪಸಂಖ್ಯಾರ ಆಶಾದಾಯಕ ಸಂಘಟನೆಯಾಗಿ ಸಂಘಟನೆ ಮುನ್ನುಗ್ಗುತ್ತಿದೆ. ಸಂಘಟನೆಗೆ ಕಾರ್ಯಕರ್ತರೇ ಜೀವಾಳ. ಮುಂಬರುವ ದಿನಗಳಲ್ಲಿ ತಾಲೂಕಿನ ಪ್ರತಿಯೊಂದು ಗ್ರಾಮಗಳಿಗೆ ಸಂಚರಿಸುವ ನಿಟ್ಟಿನಲ್ಲಿ ಸಂಘಟನೆ ಬಲಿಷ್ಠ ಪಡಿಸುವ ದಿಸೆಯಲ್ಲಿ ನಿರಂತರ ಹೋರಾಟ ನಡೆಸಬೇಕು. ಯುವಕರನ್ನು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಸಂಘಟಿಸುವ ಉದ್ದೇಶದಿಂದಲೇ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತಿದೆ” ಎಂದರು.

ಹೋಬಳಿ ಮಟ್ಟದ ಪದಾಧಿಕಾರಿಯಾಗಿ ಮನೋಜ್ ಕುಮಾರ್, ತಾಲೂಕು ಸಂಘಟನಾ ಸಂಚಾಲಕ ಮೇಡಿಹಾಳ ಹರೀಶ್, ಮಹಿಳಾ ಘಟಕದ ತಾಲೂಕು ಸಂಘಟನಾ ಸಂಚಾಲಕಿ ಶಶಿಕಲಾ, ಶ್ರೀನಿವಾಸ್, ಅಂಜಿನಪ್ಪ, ವರಲಕ್ಷ್ಮಿ, ಬೈರೇಗೌಡ, ಎಂ.ರಮೇಶ್, ಮುನಿರಾಜ, ಲಕ್ಷ್ಮಿ, ಮುನಿನಾರಾಯಣ, ನಂದೀಶ, ಆರ್.ಆರ್.ರಮೇಶ್, ಕಮಲಮ್ಮ, ಚಿಟ್ಟಿ, ಉಷಾ, ರವಿಕುಮಾರ್, ನಿಖಿಲ್ ಕುಮಾರ್, ಅವರನ್ನು ಪದಾಧಿಕಾರಿಗಳನ್ನಾಗಿ ಆಯ್ಕೆ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೋಲಾರ | ಕಾಂಗ್ರೆಸ್ ಹಿರಿಯ ನಾಯಕ ಮೊಹಮ್ಮದ್ ಇಕ್ಬಾಲ್ ನಿಧನ

ಸಭೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸ್ವಾಭಿಮಾನಿ ಪ್ರೊ. ಬಿ ಕೃಷ್ಣಪ್ಪ ಬಣದ ರಾಜ್ಯ ಸಂಘಟನಾ ಸಂಚಾಲಕ ವಿ ನಾರಾಯಣಸ್ವಾಮಿ, ಮಾಲೂರು ಶೇಷಾದ್ರಿ, ಕೆಂಬೋಡಿ ರವೀಂದ್ರ ಕುಮಾರ್, ಮಹಿಳಾ ಘಟಕದ ಜಿಲ್ಲಾ ಸಂಘಟನಾ ಸಂಚಾಲಕಿ ಮಂಜುಳ, ತಾಲೂಕು ಸಂಚಾಲಕ ಶೆಟ್ಟಿ ಮಾದಮಂಗಳ ರಾಜಣ್ಣ, ತಾಲೂಕು ಸಂಘಟನಾ ಸಂಚಾಲಕ ಸಿ ಎಚ್ ಚಂದ್ರಶೇಖರ್ ಮುನಿರಾಜು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...