ಕೋಲಾರ | ಹಾಸ್ಟೆಲ್‌ಗೆ ಅನಾಮಿಕ ಯುವಕನ ಪ್ರವೇಶ; ಪೋಕ್ಸೋ ಪ್ರಕರಣ ದಾಖಲು

Date:

ಮೆಟ್ರಿಕ್ ಪೂರ್ವ ಬಾಲಕಿಯರ ಹಾಸ್ಟೆಲ್‌ಗೆ ಅನಾಮಿಕ ಯುವಕನೊಬ್ಬ ಪ್ರವೇಶ ಕೊಟ್ಟಿದ್ದು, ಬಾಲಕಿಯರು ಭಯದಿಂದ ನಡುಗುವ ಪರಿಸ್ಥಿತಿ ನಿರ್ಮಾಣವಾಗಿದ್ದ ಘಟನೆ ಗುರುವಾರ ರಾತ್ರಿ ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಬೇತಮಂಗಲದಲ್ಲಿ ನಡೆದಿದೆ.

ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಈ ಹಾಸ್ಟೆಲ್‌ನಲ್ಲಿ ಜಿಲ್ಲೆಯ ಹಲವು ಭಾಗಗಳಿಂದ ಬರುವ ಹೆಣ್ಣು ಮಕ್ಕಳು ದಾಖಲಾಗಿದ್ದಾರೆ. ಇಲ್ಲಿ 6ರಿಂದ 10ನೇ ತರಗತಿಯಲ್ಲಿ ಓದುತ್ತಿರುವ 60ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿದ್ದಾರೆ.

ಬಡಮಕ್ಕಳೇ ಇರುವ ಹಾಸ್ಟೆಲ್‌ನಲ್ಲಿ ವಾರ್ಡನ್‌, ಅಡುಗೆಯವರು ಸೇರಿದಂತೆ ಇತರ ಸಿಬ್ಬಂದಿಗಳೂ ಇದ್ದಾರೆ. ಇವರೆಲ್ಲರ ಕಣ್ಣುತಪ್ಪಿಸಿ ಒಬ್ಬ ಯುವಕ ಹಾಸ್ಟೆಲ್‌ ಪ್ರವೇಶ ಮಾಡಿದ್ದಾನೆ. ಹಾಸ್ಟೆಲ್‌ಗೆ ಬಂದಿದ್ದು ಮಾತ್ರವಲ್ಲದೆ, ಹೆಣ್ಮಕ್ಕಳು ವಿಶ್ರಾಂತಿ ಪಡೆಯುವ ಕೋಣೆಯೊಳಗೆ ನೇರ ಪ್ರವೇಶ ಮಾಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದು ಕೋಣೆಯೊಳಗೆ ಪ್ರವೇಶ ಮಾಡಿದ ಆತ ಅಲ್ಲಿ ಏನನ್ನೋ ಹುಡುಕುವಂತೆ ನಟಿಸಿದ್ದಾನೆ. ಯಾರು ನೀನು ಎಂದು ಕೇಳಿದ್ದಕ್ಕೆ ಏನನ್ನೂ ಹೇಳದೆ ಅವರನ್ನು ಹೆದರಿಸುವಂತೆ ನೋಡಿ ಹೊರ ಹೋಗಿದ್ದಾನೆ. ಈ ನಡುವೆ, ಒಬ್ಬ ಬಾಲಕಿ ಸ್ನಾನದ ಮನೆಯಲ್ಲಿದ್ದಾಗ ಹೊರಗಿನಿಂದ ಚಿಲಕವನ್ನು ಅತ್ತಿತ್ತ ಮಾಡಿದ್ದಾನೆ ಎಂದು ವಿದ್ಯಾರ್ಥಿನಿಯರು ಹೇಳಿಕೊಂಡಿದ್ದಾರೆ.

ಘಟನೆ ನಡೆಯುತ್ತಿದ್ದಂತೆ ಮಕ್ಕಳು ಜೋರಾಗಿ ಕಿರುಚಿಕೊಂಡಿದ್ದರಿಂದ ಪಕ್ಕದ ಮನೆಗಳವರು ಓಡಿ ಬಂದಿದ್ದಾರೆ. ಅವರಲ್ಲಿ ವಿಷಯವನ್ನು ತಿಳಿಸಿದ್ದು, ಅವರೆಲ್ಲ ಆತನಿಗಾಗಿ ಹುಡುಕಾಡಿದ್ದಾರೆ. ಇದಾದ ಬಳಿಕ ಕೆಲವು ಮಕ್ಕಳು ಹಾಸ್ಟೆಲ್‌ನಲ್ಲಿ ಉಳಿಯಲು ಭಯಪಟ್ಟ ಹಿನ್ನೆಲೆಯಲ್ಲಿ ಅವರಿಗೆ ಪಕ್ಕದ ಕೆಲವು ಮನೆಗಳಲ್ಲಿ ಆಶ್ರಯ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಹಳೆ ಕಟ್ಟಡದಲ್ಲಿರುವ ಹಾಸ್ಟೆಲ್‌ ಇದಾಗಿದ್ದು, ಹೆಣ್ಣುಮಕ್ಕಳ ವಸತಿ ನಿಲಯವಾದರೂ ಭದ್ರತೆಯೇ ಇಲ್ಲದಂತಾಗಿದೆ. ಇಲ್ಲಿನ ಬಾಗಿಲುಗಳು ಗಟ್ಟಿ ಇಲ್ಲ, ಸರಿಯಾದ ಭದ್ರತಾ ಸಿಬ್ಬಂದಿಯೂ ಇಲ್ಲ. ಈ ಕಟ್ಟಡಕ್ಕೆ ಅಕ್ಕ ಪಕ್ಕದ ಕಟ್ಟಡ ಮತ್ತು ಇತರ ಭಾಗಗಳಿಂದ ನುಗ್ಗಬಹುದಾದಷ್ಟು ಮುಕ್ತವಾಗಿರುವುದು ಕಂಡುಬಂದಿದೆ.

ಹಾಸ್ಟೆಲ್‌ ಒಳಭಾಗವೂ ವ್ಯವಸ್ಥಿತವಾಗಿಲ್ಲ. ಯಾರಾದರೂ ಬಂದು ಒಳಗೆ ಸೇರಿಕೊಂಡರೂ ಗೊತ್ತಾಗದಷ್ಟು ಪರಿಸ್ಥಿತಿ ಗಂಭೀರವಾಗಿದೆ. ಇಲ್ಲಿನ ಕೆಲವು ರೂಮ್‌ಗಳಲ್ಲಿ ಮಂಚಗಳನ್ನು, ಟೈಲರಿಂಗ್‌ ಮೆಷಿನ್‌ಗಳನ್ನು ಗುಡ್ಡೆ ಹಾಕಲಾಗಿದೆ. ಇವುಗಳು ಬಳಕೆಯಾಗದೆ ಧೂಳು ಹಿಡಿಯುತ್ತಿವೆ. ಹೀಗಾಗಿ ಅಲ್ಲೊಂದು ಭಯದ ವಾತಾವರಣವಿದೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಪೊಲೀಸ್‌ ಪೇದೆ ಮನೆ ಮೇಲೆ ಲೋಕಾಯುಕ್ತ ದಾಳಿ; ₹1.80 ಕೋಟಿ ಮೌಲ್ಯದ ಆಸ್ತಿ ಪತ್ತೆ

ಹಾಸ್ಟೆಲ್‌ ವಾರ್ಡನ್‌ ನೀಡಿದ ದೂರಿನ ಆಧಾರದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಬೇತಮಂಗಲ ನಿವಾಸಿ ಮುರಳಿ (25) ಎಂಬಾತನನ್ನು ಬಂಧಿಸಿದ್ದು, ಆತನ ವಿರುದ್ಧ ಪೋಕ್ಸೊ ಪ್ರಕರಣದಡಿ ಕೇಸು ದಾಖಲಿಸಿದ್ದಾರೆ. ಇದೀಗ ಆತನ ಉದ್ದೇಶದ ಬಗ್ಗೆ ತನಿಖೆಯಾಗಬೇಕಾಗಿದೆ.

ಹಾಸ್ಟೆಲ್‌ನಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಏರ್ಪಡಿಸದ ಅಧಿಕಾರಿಗಳು ಮತ್ತು ವಾರ್ಡನ್‌ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...