ಕೋಲಾರ | ವೇಮಗಲ್ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ʼಆಪ್‌ʼನ ನಾಲ್ಕು ಅಭ್ಯರ್ಥಿಗಳು ಕಣಕ್ಕೆ

Date:

ಕೋಲಾರದ ವೇಮಗಲ್-ಕುರುಗಲ್ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಆಪ್ ಪಕ್ಷದ 4‌ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಅವರೆಲ್ಲರೂ ಭ್ರಷ್ಟಾಚಾರ ಮಾಡುವುದಿಲ್ಲವೆನ್ನುವ ಪ್ರಮಾಣ ಮಾಡಿದ್ದಾರೆ. ಹಾಗೆಯೇ ಜೆಸಿಬಿ ಪಕ್ಷಗಳ (ಜೆಡಿಎಸ್, ಕಾಂಗ್ರೆಸ್, ಬಿಜೆಪಿ) ಅಭ್ಯರ್ಥಿಗಳು ಪ್ರಮಾಣ ಮಾಡಲಿ ಎಂದು ಆಮ್ ಆದ್ಮಿ ಪಕ್ಷದ ಕೋಲಾರ ಜಿಲ್ಲಾಧ್ಯಕ್ಷ ವೆಂಕಟಾಚಲಪತಿ ಸವಾಲು ಹಾಕಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 17 ವಾರ್ಡ್‍ಗಳ ಪೈಕಿ 4 ವಾರ್ಡ್‍ಗಳಲ್ಲಿ ಸಾಮಾನ್ಯ ಜನರನ್ನೇ ಅಭ್ಯಥಿಗಳನ್ನಾಗಿ ಆಯ್ಕೆ ಮಾಡಿದ್ದು, ಉತ್ತಮ ಸ್ಪಂದನೆ ಇರುವುದಾಗಿ ಹೇಳಿದರು.

ಪಕ್ಷದ ರಾಜ್ಯ ಮುಖಂಡ ನಾಗರಾಜ್ ಮಾತನಾಡಿ, “ನೆಲೆಯೇ ಇಲ್ಲದ ಪರಿಸ್ಥಿತಿಯಲ್ಲಿ ನಾಲ್ಕು ಮಂದಿ ಅಭ್ಯರ್ಥಿಗಳು ಸಿಕ್ಕಿದ್ದಾರೆ. ಮೊದಲ ಪ್ರಯತ್ನ ಮಾಡುತ್ತಿದ್ದು, ಸಾಮಾನ್ಯ ಜನರಿಗೇ ಅವಕಾಶ ನೀಡಲಾಗಿದೆ ಹೊರತು ಸೂಟ್ ಕೇಸ್ ಪಡೆದು ಟಿಕೆಟ್ ನೀಡುವ ಸಂಸ್ಕೃತಿ ನಮ್ಮಲ್ಲಿಲ್ಲ. ಊರಿನ ಅಭಿವೃದ್ಧಿ ದೆಸೆಯಿಂದ ಇಂತಹ ಅಭ್ಯರ್ಥಿಗಳಿಗೆ ಮತ ನೀಡಿ ಅವಕಾಶ ಮಾಡಿಕೊಡಿ” ಎಂದು ಕೋರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಕ್ಷದ ರಾಜ್ಯ ಕಾರ್ಯದರ್ಶಿ ಸುರೇಶ್ ಮಾತನಾಡಿ, “ಪ್ರತಿ ಮನೆಗೂ ಪ್ರಮಾಣಪತ್ರ ತಲುಪಿಸಿದ್ದು, ಗೆಲ್ಲಿಸಿದ್ದೇ ಆದಲ್ಲಿ ಅನುದಾನದ ಮಾಹಿತಿಯ ಫಲಕವನ್ನು ವಾರ್ಡ್‍ನಲ್ಲಿ ಅಳವಡಿಸಿ, ಪಾರದರ್ಶಕವಾಗ ಆಡಳಿತ ನಡೆಸಿಇಡೀ ಜಿಲ್ಲೆಯಲ್ಲೇ ಮಾದರಿ ವಾರ್ಡ್
ಗಳನ್ನಾಗಿಸಲಾಗುವುದು. ಒಂದು ವೇಳೆ ನಮ್ಮವರು ಭ್ರಷ್ಟಾಚಾರ ಮಾಡಿದರೂ ಇದೇ ಪೊರಕೆಯಿಂದ ಗುಡಿಸುತ್ತೇವೆ. ಕಾಂಗ್ರೆಸ್, ಬಿಜೆಪಿ-ಜೆಡಿಎಸ್‍ನವರು 60%, 40% ಕಮೀಷನ್ ಹಣದ ಹೊಳೆಯನ್ನು ಹರಿಸಲು ಮುಂದಾಗಿದ್ದು, ಒಂದು ದಿನದ ಆಸೆ ಆಮಿಷಕ್ಕೆ ಒಳಗಾಗಬೇಡಿ” ಎಂದು ಮನವಿ ಮಾಡಿದರು.

ವೇಮಗಲ್ ಮುಖಂಡ ವಿಜಯ್ ಕುಮಾರ್ ಮಾತನಾಡಿ, “ಮನೆಮನೆಗೆ ಹೋಗಿ ಪ್ರಚಾರ ಮಾಡಲಾಗಿದ್ದು, ಉತ್ತಮ ಪ್ರತಿಕ್ರಿಯೆ ಬಂದಿದೆ. 17 ವಾರ್ಡ್‍ಗಳಲ್ಲಿ ಕಾಂಗ್ರೆಸ್, ಬಿಜೆಪಿ-ಜೆಡಿಎಸ್ ಮೈತ್ರಿಯವರು ಹಣದ ಜತೆಗೆ ಹೊರಟಿದ್ದಾರೆ. ಆದರೂ ನಮಗೆ ಮತ ನೀಡಿ ಸ್ವಚ್ಛ ಆಡಳಿತ ಮಾಡಲು ಅವಕಾಶ ಕಲ್ಪಿಸಿಕೊಡಲು ಮನವಿ ಮಾಡಿರುವುದಾಗಿ” ತಿಳಿಸಿದರು.

ಇದನ್ನೂ ಓದಿ: ಕೋಲಾರ | ಗುದ್ದಲಿ ಪೂಜೆಯಾಗಿ ವರ್ಷ ಕಳೆದರೂ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ: ಸ್ಥಳೀಯರ ಆಕ್ರೋಶ

ಅಭ್ಯರ್ಥಿಗಳಾದ ಗೌರಿಶಂಕರ್, ಪಿ.ಲಲಿತಮ್ಮ, ಲಕ್ಷ್ಮಮ್ಮ ಮಾತನಾಡಿ, “ನಾವು ಯಾವುದೇ ಭ್ರಷ್ಟಾಚಾರ ಮಾಡಲ್ಲವೆಂದು ಈಗಾಗಲೇ ಪ್ರಮಾಣ ಮಾಡಿದ್ದೇವೆ. ನಮ್ಮಿಂದ ಭ್ರಷ್ಟಾಚಾರ ಆದರೆ ಅಂದೇ ರಾಜೀನಾಮೆ ನೀಡುತ್ತೇವೆ. ಇದೇ ರೀತಿ ಬೇರೆ ಪಕ್ಷದ ಅಭ್ಯರ್ಥಿಗಳೂ ಪ್ರಮಾಣ ಮಾಡಲಿ ಎಂದು ಸವಾಲು ಹಾಕಿದರು. ಭ್ರಷ್ಟಾಚಾರ ಮಾಡುವುದಿಲ್ಲ, ಮಾಡಲು ಬಿಡುವುದೂ ಇಲ್ಲ. ಅನುದಾನ ದುರ್ಬಳಕೆಯಾಗಲು ಬಿಡುವುದಿಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...