ಕೋಲಾರ | ಕನಿಷ್ಠ ಆರು ತಿಂಗಳಿಗೊಮ್ಮೆ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳಿ: ಓಂಕಾರ್ ಮೂರ್ತಿ

Date:

ಕಣ್ಣಿನ ಆರೋಗ್ಯ ದೃಷ್ಟಿಯಿಂದ ಪ್ರತಿಯೊಬ್ಬರೂ ಕನಿಷ್ಠ ಆರು ತಿಂಗಳಿಗೆ ಒಮ್ಮೆಯಾದರೂ ಕಣ್ಣುಗಳ ತಪಾಸಣೆ ಮಾಡಿಸಿಕೊಳ್ಳುವಂತೆ ಹಿರಿಯ ಪತ್ರಕರ್ತರು ಹಾಗೂ ಪ್ರಜಾವಾಣಿ ಪತ್ರಿಕೆಯ ಕೋಲಾರ ಜಿಲ್ಲಾ ವರದಿಗಾರ ಓಂಕಾರ್ ಮೂರ್ತಿ ತಿಳಿಸಿದರು.

ನಗರದ ಕ್ಲಾಕ್ ಟವರ್ ಬಳಿ ಇರುವ ನೇತ್ರದೀಪ ಜಿಇಎಫ್ ಕಣ್ಣಿನ ಆಸ್ಪತ್ರೆ ಮತ್ತು ದ್ರಾವಿಡ ವಿಮೋಚನಾ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ ಉಚಿತ ಕಣ್ಣಿನ ತಪಾಸಣೆ ಮತ್ತು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

“ಪ್ರಸ್ತುತ ಹೆಚ್ಚಿನ ಮಕ್ಕಳು ಮೊಬೈಲ್ ನೋಡುವುದನ್ನು ಅಭ್ಯಾಸ ಮಾಡಿಕೊಂಡಿರುವುದರಿಂದ ಹಲವು ರೀತಿಯ ಕಣ್ಣಿನ ಸಮಸ್ಯೆಗಳು ಕಂಡುಬರುತ್ತಿವೆ. ಕಣ್ಣಿನ ಸಮಸ್ಯೆಗಳ ಪರಿಹಾರಕ್ಕೆ ಕನಿಷ್ಟ ಆರು ತಿಂಗಳಿಗೆ ಒಮ್ಮೆ ಮಕ್ಕಳ ಕಣ್ಣುಗಳ ಪರೀಕ್ಷೆ ಮಾಡಿಸಿ ವೈದ್ಯರ ಸಲಹೆ ಪಡೆಯುವುದು ಸೂಕ್ತ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಸ್ಪತ್ರೆಯ ವೈದ್ಯ ಡಾ.ವಿನಯ್ ಡಿ ಮಾತನಾಡಿ, “ಬಹುತೇಕ ಸಕ್ಕರೆ ಖಾಯಿಲೆ ಇರುವವರು ಗ್ಲುಕೋಮ ಖಾಯಿಲೆಯಿಂದ ಕಣ್ಣಿನ ದೃಷ್ಟಿ ಕಳೆದುಕೊಂಡು ಕುರುಡಾಗುತ್ತಿದ್ದಾರೆ. ಖಾಯಿಲೆ ಉಲ್ಬಣವಾಗುವ ಮೊದಲೇ ಕಣ್ಣಿನ ಪರೀಕ್ಷೆ ಮಾಡಿಸಿಕೊಳ್ಳುವುದರಿಂದ
ಗ್ಲುಕೋಮ ಖಾಯಿಲೆ ತಡೆಯಲು ಸಾಧ್ಯವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳುವುದು ಅತ್ಯವಶ್ಯಕ” ಎಂದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಕರಾವಳಿ ಅಭಿವೃದ್ಧಿ ಪ್ರಾ.ಅಧ್ಯಕ್ಷ ಸ್ಥಾನ ಅಲ್ಪಸಂಖ್ಯಾತ ನಾಯಕರಿಗೆ ನೀಡಿ – ಅಲ್ತಾಫ್ ಅಹಮ್ಮದ್

ವಿಷೇಶವಾಗಿ ಶಾಲಾ ಮಕ್ಕಳಿಗೆ ಶಿಬಿರದಲ್ಲಿ ತಪಾಸಣೆ ಮಾಡಲಾಯಿತು. ಸುಮಾರು ನೂರಕ್ಕೂ ಹೆಚ್ಚು ಸಾರ್ವಜನಿಕರು ಹಾಗೂ ಪತ್ರಕರ್ತರು ಕಣ್ಣಿನ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಉಚಿತ ತಪಾಸಣೆ ಶಿಬಿರದ ಪ್ರಯೋಜನ ಪಡೆದುಕೊಂಡರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ವ್ಯವಸ್ಥಾಪಕ ರಾಕೇಶ್ ಸಾಯಿ, ದ್ರಾವಿಡ ವಿಮೋಚನಾ ಸಂಘದ ಅಧ್ಯಕ್ಷ ಕೆ ಎಂ ಅನಂತ ಕೀರ್ತಿ
ಹಾಗೂ ಆಸ್ಪತ್ರೆಯ ಸಿಬ್ಬಂದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...